ತೈಲ ಬೆಲೆ ಇಳಿಕೆಗೆ ಸರಕಾರದ ಯತ್ನ
ವಿತ್ತ ಸಚಿವಾಲಯದೊಂದಿಗೆ ಕೇಂದ್ರ ಸರಕಾರ ಮಾತುಕತೆ
Team Udayavani, Oct 19, 2021, 6:40 AM IST
ಹೊಸದಿಲ್ಲಿ: ದೇಶಾದ್ಯಂತ ಪ್ರತಿದಿನವೂ ಪೆಟ್ರೋಲ್-ಡೀಸೆಲ್ ಬೆಲೆ ಸಾರ್ವಕಾಲಿಕ ದಾಖಲೆ ಬರೆಯುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ತೈಲ ಬೆಲೆ ಇಳಿಕೆ ಕುರಿತು ಹಣಕಾಸು ಸಚಿವಾಲಯದೊಂದಿಗೆ ನಿರಂತರ ಮಾತುಕತೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಪೆಟ್ರೋಲಿಯಂ ಬೆಲೆಯನ್ನು ಕಡಿತಗೊಳಿಸಲು ಯಾವ್ಯಾವ ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆ ಪೆಟ್ರೋಲಿಯಂ ಸಚಿವಾಲಯವು ವಿತ್ತ ಸಚಿವಾಲಯದ ಜತೆ ಚರ್ಚಿಸುತ್ತಿದೆ. ಇಂಧನ ಬೆಲೆ ಗ್ರಾಹಕರ ಜೇಬು ಸುಡಲು ಅತ್ಯಧಿಕ ತೆರಿಗೆಯೂ ಕಾರಣವಾಗಿದ್ದು, ತೆರಿಗೆ ಕಡಿತ ಮಾಡುವ ಮೂಲಕ ಜನಸಾಮಾನ್ಯರ ಹೊರೆ ಇಳಿಸುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ.
ಕೇಂದ್ರ ಹಾಗೂ ರಾಜ್ಯ ಸರಕಾರಗಳೆರಡೂ ಒಂದಾಗಿ ತೈಲ ಬೆಲೆಯನ್ನು ಇಳಿಕೆ ಮಾಡಬೇಕಾಗುತ್ತದೆ. ಈ ವಿಚಾರಗಳ ಕುರಿತು ಅಂತಿಮ ನಿರ್ಧಾರವನ್ನು ಕೇಂದ್ರ ವಿತ್ತ ಇಲಾಖೆ ಕೈಗೊಳ್ಳಬೇಕು ಎಂದು ಮೂಲಗಳನ್ನು ಉಲ್ಲೇಖೀಸಿ ಎನ್ಡಿಟಿವಿ ವರದಿ ಮಾಡಿದೆ.
ಒಪೆಕ್ಗೆ ಭಾರತ ಮನವಿ: ಅತ್ಯಧಿಕ ತೈಲ ಬೆಲೆಯು ಈಗಷ್ಟೇ ಚೇತರಿಕೆ ಕಾಣುತ್ತಿರುವ ಜಾಗತಿಕ ಆರ್ಥಿಕತೆಗೆ ದೊಡ್ಡ ಹೊಡೆತ ನೀಡುತ್ತಿದೆ. ತೈಲ ಬೆಲೆಯು ಯಾವತ್ತೂ ಉತ್ಪಾದಕರು ಮತ್ತು ಗ್ರಾಹಕರ ಹಿತಾಸಕ್ತಿಯ ಸಮತೋಲನವನ್ನು ಕಾಯ್ದುಕೊಳ್ಳಬೇಕು.
ಇದನ್ನೂ ಓದಿ:ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ
ಈಗ ಪೂರೈಕೆಗಿಂತಲೂ ಬೇಡಿಕೆ ಹೆಚ್ಚಿರುವ ಕಾರಣ ಬೆಲೆಯೂ ಹೆಚ್ಚಿದೆ. ಎಲ್ಲರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ತೈಲ ಬೆಲೆ ಇಳಿಕೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಿ ಎಂದು ತೈಲ ಉತ್ಪಾದಕ ರಾಷ್ಟ್ರಗಳಾದ ಸೌದಿ ಅರೇಬಿಯಾ ಮತ್ತು ಒಪೆಕ್ ರಾಷ್ಟ್ರಗಳಿಗೆ ಭಾರತ ಮನವಿ ಮಾಡಿದೆ.
ತೆರಿಗೆ ಸುಲಿಗೆ: ರಾಹುಲ್ ಆರೋಪ
ಪೆಟ್ರೋಲ್-ಡೀಸೆಲ್ ಬೆಲೆಯು ವೈಮಾನಿಕ ಇಂಧನ ಬೆಲೆಯನ್ನೂ ಮೀರಿಸಿದ ಬೆನ್ನಲ್ಲೇ ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಕೇಂದ್ರ ಸರಕಾರವು ಜನರಿಂದ ತೆರಿಗೆ ಸುಲಿಗೆ ಮಾಡುತ್ತಿದೆ’ ಎಂದು ಆರೋಪಿಸಿದ್ದಾರೆ. ಪ್ರಿಯಾಂಕಾ ವಾದ್ರಾ ಅವರೂ ಟ್ವೀಟ್ ಮಾಡಿ, “ಹವಾಯಿ ಚಪ್ಪಲಿ ಧರಿಸುವವರನ್ನು ವಿಮಾನದಲ್ಲಿ ಹಾರುವಂತೆ ಮಾಡುತ್ತೇನೆ ಎಂದಿದ್ದ ಸರಕಾರ, ಈಗ ಜನರು ರಸ್ತೆಯಲ್ಲೂ ಸಂಚರಿಸದಂತೆ ಮಾಡಿಬಿಟ್ಟಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್ ಟವರ್ ಹತ್ತಿದ ಯುವಕ
ಯರಡಾಲ ಗ್ರಾಮ; ಇಲ್ಲಿ ಮೂಲ ಸೌಕರ್ಯಗಳದ್ದೇ ಕೊರತೆ
SS Rajamouli: ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್ನಲ್ಲಿ ಸುಳಿವು ಕೊಟ್ಟ ರಾಜಮೌಳಿ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ