ಉಪ ಕುಲಪತಿಗಳಿಂದ ರಾಜೀನಾಮೆ ಕೇಳಿದ ಕೇರಳ ರಾಜ್ಯಪಾಲ
Team Udayavani, Oct 23, 2022, 9:30 PM IST
ತಿರುವನಂತಪುರಂ: ಕೇರಳದ ರಾಜ್ಯಪಾಲ ಆರಿಫ್ ಮೊಹಮದ್ ಖಾನ್ ಅವರು ರಾಜ್ಯದ 9 ವಿಶ್ವವಿದ್ಯಾಲಯಗಳ ಉಪ ಕುಲಪತಿಗಳಿಗೆ ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಸೂಚಿಸಿದ್ದಾರೆ.
ಎ.ಪಿ.ಜಿ.ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಯುಜಿಸಿ ನಿಯಮ ಉಲ್ಲಂಘಿಸಿ ಉಪ ಕುಲಪತಿ ನೇಮಕ ಮಾಡಿಕೊಳ್ಳಲಾಗಿದ್ದು, ಆ ನೇಮಕವನ್ನು ರದ್ದು ಮಾಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೇ ರಾಜ್ಯಪಾಲರು ಈ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ರಾಜಶ್ರೀ ಎಂ.ಎಸ್ ಸೇರಿದಂತೆ ಒಟ್ಟು 9 ವಿಶ್ವವಿದ್ಯಾಲಯಗಳ ಉಪ ಕುಲಪತಿಗಳಿಗೆ ಈ ಸೂಚನೆ ನೀಡಲಾಗಿದೆ.
ಸೋಮವಾರ ಬೆಳಗ್ಗೆ 11.30ರ ಒಳಗಾಗಿ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ತಲುಪಿಸಬೇಕೆಂದೂ ಹೇಳಲಾಗಿದೆ.
ವಿಶ್ವವಿದ್ಯಾಲಯ ಅನುದಾನ ಆಯೋಗ(ಯುಜಿಸಿ) ನಿಯಮದ ಪ್ರಕಾರ ಸರ್ಕಾರ ರಚಿಸುವ ಶೋಧ ಸಮಿತಿಯು ಇಂಜಿನಿಯರಿಂಗ್ ವಿಜ್ಞಾನ ವಿಷಯದಲ್ಲಿ ಪರಿಣಿತರಾಗಿರುವ ಕನಿಷ್ಠ ಮೂವರು ಹೆಸರನ್ನು ಸೂಚಿಸಬೇಕಿತ್ತು. ಆದರೆ ಅಬ್ದುಲ್ ಕಲಾಂ ವಿವಿ ವಿಚಾರದಲ್ಲಿ ಕೇವಲ ಒಬ್ಬರ ಹೆಸರನ್ನು ಮಾತ್ರ ಸೂಚಿಸಿ, ಅವರನ್ನೇ ಉಪ ಕುಲಪತಿಯನ್ನಾಗಿಸಲಾಗಿತ್ತು. ಇದರಿಂದಾಗಿ ನಿಯಮ ಉಲ್ಲಂಘನೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್ ಆಡಲಿ: ಪೊವೆಲ್
MUST WATCH
ಹೊಸ ಸೇರ್ಪಡೆ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್