ದೇಶದಲ್ಲಿನ ರಾಜ್ಯಪಾಲರು ಈಗ ಹೊಸ ವೈಸರಾಯ್ಗಳಾಗಿದ್ದಾರೆ: ಚಿದಂಬರಂ
Team Udayavani, Oct 26, 2018, 12:22 PM IST
ಹೊಸದಿಲ್ಲಿ : ಭಾರತ – ಪಾಕಿಸ್ಥಾನ ಮಾತುಕತೆ ಬಗ್ಗೆ ಯಾವುದೇ ಹೇಳಿಕೆ ನೀಡುವ ಹಕ್ಕು ರಾಜಕೀಯ ಪಕ್ಷಗಳಿಗೆ ಇಲ್ಲ ಎಂದು ಜಮ್ಮು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲಿಕ್ ಹೇಳಿರುವುದನ್ನು ತೀವ್ರವಾಗಿ ಟೀಕಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರು “ದೇಶದಲ್ಲಿನ ರಾಜ್ಯಪಾಲರು ಹೊಸ ವೈಸರಾಯ್ ಗಳಾಗಿದ್ದಾರೆ’ ಎಂದು ಹೇಳಿದ್ದಾರೆ.
ಮಾಜಿ ಕೇಂದ್ರ ಹಣಕಾಸು ಸಚಿವ ಮತ್ತು ಗೃಹ ಸಚಿವ ಪಿ ಚಿದಂಬರಂ ಅವರು ತಮ್ಮ ಸರಣಿ ಟ್ವೀಟ್ ಮೂಲಕ “ಭಾರತ ಮತ್ತು ಪಾಕಿಸ್ಥಾನ ನಡುವಿನ ಸಂಧಾನ ಮಾತುಕತೆಯ ಬಗ್ಗೆ ನ್ಯಾಶನಲ್ ಕಾನ್ಫರೆನ್ಸ್ ಮತ್ತು ಪೀಪಲ್ಸ್ ಡೆಮೋಕ್ರಾಟಿಕ್ ಪಾರ್ಟಿ ಕಾಶ್ಮೀರ ಸಮಸ್ಯೆಯನ್ನು ಇತ್ಯರ್ಥ ಪಡಿಸುವ ನಿಟ್ಟಿನಲ್ಲಿ ಪದೇ ಪದೇ ಹೇಳಿಕೆ ನೀಡುತ್ತಿರುವುದಕ್ಕೆ ರಾಜ್ಯಪಾಲರು ಈ ರೀತಿ ಹೇಳಿದ್ದಾರೆ; ಆದರೂ ಅವರು ಹಾಗೆ ಹೇಳಿರುವುದು ಸರಿಯಲ್ಲ; ಹಾಗೆ ಹೇಳುವ ಮೂಲಕ ಅವರು ರಾಜಕೀಯ ಪಕ್ಷಗಳ ಸ್ವಾತಂತ್ರ್ಯಕ್ಕೆ ಅಡ್ಡಿ ಉಂಟುಮಾಡಿದ್ದಾರೆ’ ಎಂದು ಹೇಳಿದ್ದಾರೆ.
ಜಮ್ಮು ಕಾಶ್ಮೀರ ರಾಜ್ಯಪಾಲರು ರಾಜಕೀಯ ಪಕ್ಷಗಳಿಗೆ ಭಾರತ-ಪಾಕ್ ಮಾತುಕತೆ ಬಗ್ಗೆ ಮಾತನಾಡುವ ಹಕ್ಕಿಲ್ಲ ಎಂದು ಹೇಳಿರುವಲ್ಲಿ ಅವರು ಪಕ್ಷಗಳೇ ಇಲ್ಲದ ಪ್ರಜಾಸತ್ತೆಯನ್ನು ಬಯಸುತ್ತಾರೆ ಎಂದಾಗುತ್ತದೆ; ಅಂತಿರುವಾಗ ದೇಶದಲ್ಲಿ ಪ್ರಜಾಸತ್ತೆಯೇ ಇರಲು ಸಾಧ್ಯವಿಲ್ಲ ಎಂದು ಚಿದಂಬರಂ ಹೇಳಿದರು.
“ಲಾರ್ಡ್ ಮೌಂಟ್ ಬ್ಯಾಟನ್ ಅವರು ಕೊನೇ ವೈಸರಾಯ್ ಎಂದು ನಮಗೆ ಹೇಳಲಾಗಿತ್ತು. ಅದೀಗ ತಪ್ಪು ಅನ್ನಿಸುತ್ತದೆ. ನಿಜಕ್ಕಾದರೆ ದೇಶದಲ್ಲೀಗ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್ಗಳು ಹೊಸ ವೈಸರಾಯ್ ಗಳಾಗಿದ್ದಾರೆ’ ಎಂದು ಚಿದಂಬರಂ ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ