ರಾಜ್ಯಪಾಲರಿಗೆ ಕೈದಿಗಳ ಬಿಡುಗಡೆ ಅಧಿಕಾರ: ಸುಪ್ರೀಂಕೋರ್ಟ್
Team Udayavani, Aug 4, 2021, 10:00 PM IST
ನವದೆಹಲಿ: ಹದಿನಾಲ್ಕು ವರ್ಷಗಳ ಕಾಲ ಜೀವಾವಧಿ ಶಿಕ್ಷೆಗೆ ಗುರಿಯಾದವರನ್ನು ಕಾರಾಗೃಹದಿಂದ ಅವಧಿಗೆ ಮೊದಲು ಬಿಡುಗಡೆಯ ಅಧಿಕಾರ ಯಾರಿಗೆ? ರಾಜ್ಯ ಸರ್ಕಾರಕ್ಕೋ ಅಥವಾ ರಾಜ್ಯಪಾಲರಿಗೋ? ಈ ಬಗ್ಗೆ ಇದ್ದ ಗೊಂದಲಕ್ಕೆ ಸುಪ್ರೀಂಕೋರ್ಟ್ ತೆರೆ ಎಳೆದಿದೆ.
ಅಪರಾಧ ದಂಡ ಸಂಹಿತೆಯ ಪ್ರಕಾರ ರಾಜ್ಯ ಸರ್ಕಾರಗಳಿಗೆ ಬಿಡುಗಡೆಯ ಅಧಿಕಾರ ಅಲ್ಲ. ಅದೇನಿದ್ದರೂ, ರಾಜ್ಯಪಾಲರಿಗೇ ಸೇರಿದ್ದು ಎಂದು ನ್ಯಾ.ಹೇಮಂತ್ ಗುಪ್ತಾ ಮತ್ತು ನ್ಯಾ.ಎ.ಎಸ್.ಬೋಪಣ್ಣ ನೇತೃತ್ವದ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಆದರೆ, ಸಂವಿಧಾನದ 161ನೇ ವಿಧಿಯಲ್ಲಿ ದತ್ತವಾಗಿರುವ ಅಧಿಕಾರ ಬಳಕೆ ಮಾಡಿಕೊಂಡು ರಾಜ್ಯಪಾಲರು 14 ವರ್ಷ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ವ್ಯಕ್ತಿಯನ್ನು ಅವಧಿಗಿಂತ ಮುಂಚಿತವಾಗಿ ಬಿಡುಗಡೆ ಮಾಡಲು ಸಾಧ್ಯವಿದೆ ಎಂದು ನ್ಯಾಯಪೀಠ ತಿಳಿಸಿದೆ. ಅದಕ್ಕಾಗಿ ಅವರು ರಾಜ್ಯ ಸಂಪುಟದ ಸಲಹೆ ಕೇಳಬಹುದಾಗಿದೆ.
ಇದರಿಂದಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವವರನ್ನು ಬಿಗಡೆ ಮಾಡುವ ಅಧಿಕಾರ ರಾಜ್ಯಪಾಲರಿಗೇ ಹೊರತು, ಸರ್ಕಾರಕ್ಕಲ್ಲ. ಅವಧಿ ಪೂರ್ವ ಬಿಡುಗಡೆ ಎಂದಾದರೆ, ರಾಜ್ಯ ಸರ್ಕಾರ ರಾಜ್ಯಪಾಲರಿಗೆ ಮನವಿ ಸಲ್ಲಿಸಬೇಕಾಗುತ್ತದೆ ಎಂದು ನ್ಯಾಯಪೀಠ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ