ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಪಾಲರ ಪಾತ್ರ ಪ್ರಮುಖ
ರಾಜ್ಯಪಾಲರ ಸಮ್ಮೇಳನ ಉದ್ಘಾಟಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್
Team Udayavani, Nov 24, 2019, 7:00 AM IST
ಹೊಸದಿಲ್ಲಿ: ದೇಶದಲ್ಲಿ ಸಹಕಾರ ಒಕ್ಕೂಟ ವ್ಯವಸ್ಥೆಗೆ ಹೆಚ್ಚು ಪ್ರಾಧಾನ್ಯ ನೀಡುತ್ತಿರುವ ಹಿನ್ನೆಲೆ ಯಲ್ಲಿ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್ಗಳ ಪಾತ್ರ ಪ್ರಮುಖವಾಗಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. ಹೊಸದಿಲ್ಲಿಯಲ್ಲಿ ಶನಿವಾರ ಆರಂಭ ವಾಗಿರುವ ರಾಜ್ಯಪಾಲರ ಮತ್ತು ಲೆಫ್ಟಿನೆಂಟ್ ಗವರ್ನರ್ಗಳ ಎರಡು ದಿನಗಳ ಸಮ್ಮೇಳನ ಉದ್ಘಾಟಿಸಿ ಮಾತನಾಡುತ್ತಿದ್ದರು.
ರಾಜ್ಯಪಾಲರಾಗಿ ನೇಮಕಗೊಂಡಿರುವವರು ಸಾರ್ವಜನಿಕ ಜೀವನದಲ್ಲಿ ಹೆಚ್ಚಿನ ಅನುಭವ ಹೊಂದಿವರೇ ಆಗಿರುತ್ತಾರೆ. ಹೀಗಾಗಿ ಅವರ ಅನುಭವ ಸಾರ್ವಜನಿಕರಿಗೆ ಸಿಗಬೇಕು. ರಾಜ್ಯಪಾಲರು ಕೇವಲ ಸಾಂವಿಧಾನಿಕ ಕರ್ತವ್ಯಗಳನ್ನು ನಿರ್ವಹಿಸುವಲ್ಲಿಗೆ ಮಾತ್ರ ಸೀಮಿತವಾಗಬಾರದು. ಆಯಾ ರಾಜ್ಯಗಳಲ್ಲಿನ ಜನರ ಯೋಗಕ್ಷೇಮದತ್ತ ಗಮನ ನೀಡಬೇಕು ಎಂದರು. ದೇಶ ಸಹಕಾರ ಒಕ್ಕೂಟ ವ್ಯವಸ್ಥೆಗೆ ಆದ್ಯತೆ ನೀಡುತ್ತದೆ ಮತ್ತು ರಾಜ್ಯಗಳ ನಡುವೆ ಸ್ಪರ್ಧಾತ್ಮಕ ವಾತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಅವರು ಕೊಡುಗೆ ನೀಡಬೇಕು ಎಂದರು.
ರಾಜ್ಯದ ಅಗತ್ಯಗಳಿಗೆ ಸ್ಪಂದಿಸಿ
ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್ಗಳು ತಮ್ಮ ತಮ್ಮ ರಾಜ್ಯದ ಅಗತ್ಯಗಳಿಗೆ ಸ್ಪಂದಿಸಬೇಕು ಎಂದು ಸಲಹೆ ಮಾಡಿದರು. ಇದರ ಜತೆಗೆ ಅಲ್ಪಸಂಖ್ಯಾಕರು ಮತ್ತು ಎಸ್ಸಿ/ಎಸ್ಟಿ ವರ್ಗದವರ ಹಿತಾಸಕ್ತಿ ಕಾಪಾಡುವಲ್ಲಿ ಪ್ರಧಾನ ಪಾತ್ರ ವಹಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?