ಪ್ರಬಲ ಆರ್ಥಿಕ ಶಕ್ತಿ ಕೇಂದ್ರವಾಗಿ ಭಾರತ : ಸಂಸತ್ ಜಂಟಿ ಅಧಿವೇಶನದಲ್ಲಿ ಕೋವಿಂದ್
Team Udayavani, Jun 20, 2019, 11:57 AM IST
ಹೊಸದಿಲ್ಲಿ : ಭಾರತವನ್ನು ಪ್ರಬಲ ಆರ್ಥಿಕ ಶಕ್ತಿಕೇಂದ್ರವನ್ನಾಗಿ ಮಾಡಲು ನೂತನ ಸರಕಾರ ಉದ್ದೇಶಿಸಿದೆ ಎಂದು ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ಹೇಳಿದ್ದಾರೆ.
ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿಂದು 17ನೇ ಲೋಕಸಭೆಯ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಮಧ್ಯಮ ವರ್ಗದ ಜನರ ಹಿತಾಸಕ್ತಿಯನ್ನು ಕಾಪಿಡುವುದು ಮತ್ತು ಆಡಳಿತೆಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುವುದು ನೂತನ ಸರಕಾರದ ಗುರಿಯಾಗಿದೆ ಎಂದು ಹೇಳಿದರು.
ಮುಂದಿನ ವರ್ಷದಲ್ಲಿ 25 ಲಕ್ಷ ಕೋಟಿ ರೂ.ಗಳ ಹೂಡಿಕೆ ಮಾಡಲಾಗುವುದು ಮತ್ತು 2022ರೊಳಗೆ ರೈತರ ಆದಾಯವನ್ನು ದುಪ್ಪಟ್ಟುಗೊಳಿಸಲಾಗುವುದು; ಸರಕಾರ ಈ ಗುರಿ ಸಾಧನೆಗೆ ಹಲವಾರು ಉಪಕ್ರಮಗಳನ್ನು ತೆಗೆದುಕೊಂಡಿದೆ ಎಂದು ಕೋವಿಂದ್ ಹೇಳಿದರು.
2024ರೊಳಗೆ ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಸೀಟುಗಳನ್ನು ಶೇ.50ರಷ್ಟು ಹೆಚ್ಚಿಸುವ ದಿಶೆಯಲ್ಲಿ ಸರಕಾರ ಕೆಲಸ ಮಾಡುತ್ತಿದೆ ಮತ್ತು 2 ಕೋಟಿ ಹೆಚ್ಚವರಿ ಸೀಟುಗಳನ್ನು ಸೃಷ್ಟಿಸಲಿದೆ ಎಂದು ರಾಷ್ಟ್ರ ಪತಿ ಹೇಳಿದರು.
ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸುವ ದಿಶಯಲ್ಲಿ ತ್ರಿವಳಿ ತಲಾಕ್ ಮತ್ತು ನಿಕಾಹ್ ಹಲಾಲಾ ಪದ್ಧತಿಗಳನ್ನು ಕೊನೆಗೊಳಿಸಲು ಸರಕಾರ ಉದ್ದೇಶಿಸಿದೆ ಎಂದವರು ಹೇಳಿದರು.
ಆಯುಷ್ಮಾನ್ ಭಾರತ ಯೋಜನೆಯಡಿ 26 ಲಕ್ಷ ಬಡ ರೋಗಿಗಳಿಗೆ ಲಾಭವಾಗಿದೆ ಎಂದ ಅವರು 2022ರೊಳಗೆ 1.5 ಸ್ವಾಸ್ಥ್ಯ ಕೇಂದ್ರಗಳು ಕಾರ್ಯಾಚರಿಸಲಿವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…