ಊರ್ಜಿತ್ ಪಟೇಲ್ ರಾಜೀನಾಮೆ ನಾವು ಕೇಳಿರಲಿಲ್ಲ:ಅರುಣ್ ಜೇಟ್ಲಿ
Team Udayavani, Dec 18, 2018, 2:00 PM IST
ಹೊಸದಿಲ್ಲಿ: ಕೆಲ ಕ್ಷೇತ್ರಗಳಲ್ಲಿನ ಹಣಕಾಸು ಒತ್ತಡವನ್ನು ನಿಭಾಯಿಸುವಲ್ಲಿನ ವ್ಯತ್ಯಾಸಗಳಿಗಾಗಿ ಊರ್ಜಿತ್ ಪಟೇಲ್ ಅವರಿಂದ ಆರ್ಬಿಐ ಗವರ್ನರ್ ಹುದ್ದೆಗೆ ರಾಜೀನಾಮೆಯನ್ನು ಸರಕಾರ ಎಂದೂ ಕೇಳಿರಲಿಲ್ಲ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಟಿವಿ ಚಾನಲ್ವೊಂದರ ಸಂದರ್ಶನದಲ್ಲಿ ಮಾತನಾಡಿದ ಸಚಿವ ಜೇಟ್ಲಿ ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಬಿಐ ಬಂಡವಾಳದ ಮೀಸಲು ನಿಧಿಯಿಂದ ಸರ್ಕಾರಕ್ಕೆ ಒಂದು ಪೈಸೆಯೂ ಅಗತ್ಯವಿರಲಿಲ್ಲ ಎಂದರು.
ಊರ್ಜಿತ್ ಪಟೇಲ್ ರಾಜೀನಾಮೆಯ ಕುರಿತಾಗಿನ ವ್ಯಾಪಕ ಟೀಕೆಗಳಿಗೆ ಪ್ರತಿಕ್ರಿಯಿಸಿದ ಜೇಟ್ಲಿ ಸೂಕ್ತವಾದ ಮೀಸಲು ಗಾತ್ರವನ್ನು ಕೇಂದ್ರ ಬ್ಯಾಂಕ್ ಹೊಂದಿರಬೇಕು ಎನ್ನುವ ಕುರಿತು ಆರ್ಬಿಐ ಮಂಡಳಿಯ ಸಭೆಯಲ್ಲಿ ಸೌಹಾರ್ದಯುತ ಚರ್ಚೆಗಳು ನಡೆದಿದ್ದವು ಎಂದರು.
ಊರ್ಜಿತ್ ಪಟೇಲ್ ಅವರು ರಾಜೀನಾಮೆ ನೀಡುತ್ತಿದ್ದಂತೆ ಶಕ್ತಿಕಾಂತ್ ದಾಸ್ ಅವರನ್ನು ಆರ್ಬಿಐ ಗವರ್ನರ್ ಆಗಿ ನೇಮಕ ಮಾಡಲಾಗಿತ್ತು.