ನೈಟ್ರೋಜನ್ ತುಂಬಿದ ಟೈರ್ ಬಳಕೆ ಕಡ್ಡಾಯ: ಸರಕಾರದ ಗಂಭೀರ ಚಿಂತನೆ
Team Udayavani, Jul 8, 2019, 3:47 PM IST
ಹೊಸದಿಲ್ಲಿ : ರಸ್ತೆ ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ನೈಟ್ರೋಜನ್ ತುಂಬಿದ ಟೈರ್ ಬಳಕೆಯನ್ನು ಕಡ್ಡಾಯ ಮಾಡುವ ಬಗ್ಗೆ ಸರಕಾರ ಗಂಭೀರ ಚಿಂತನೆ ನಡೆಸುತ್ತಿದೆ.
ಅದಕ್ಕಾಗಿ ನೈಟ್ರೋಜನ್ ತುಂಬಲಾಗುವ, ರಬ್ಬರ್-ಸಿಲಿಕಾನ್ ಮಿಶ್ರಣದ ಉತ್ತಮ ಗುಣಮಟ್ಟದ ಟೈರ್ ಉತ್ಪಾದನೆಯನ್ನು ಕಡ್ಡಾಯಗೊಳಿಸುವುದನ್ನು ಸರಕಾರ ಚಿಂತಿಸುತ್ತಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಇಂದು ಸೋಮವಾರ ರಾಜ್ಯಸಭೆಗೆ ತಿಳಿಸಿದರು.
ನೋಯ್ಡಾ – ಆಗ್ರಾ ಹೈವೆಯಲ್ಲಿ ಇಂದು 29 ಪ್ರಯಾಣಿಕರನ್ನು ಬಲಿ ಪಡೆದು ಸಂಭವಿಸಿರುವ ಭೀಕರ ರಸ್ತೆ ಅಪಘಾತ ಅತ್ಯಂತ ದುರದೃಷ್ಟಕರ ಎಂದು ಹೇಳಿದ ಸಚಿವ ಗಡ್ಡರಿ, ಉತ್ತರ ಪ್ರದೇಶ ಸರಕಾರ ಈಗಾಗಲೇ ಈ ಬಗ್ಗೆ ತನಿಖೆಗೆ ಆದೇಶಿಸಿದ್ದು ಅವಘಡದ ಹಿಂದಿನ ಕಾರಣಗಳನ್ನು ತಿಳಿಯಲಾಗುವುದು ಎಂದು ಹೇಳಿದರು.
ಯಮುನಾ ಎಕ್ಸ್ಪ್ರೆಸ್ ವೇ ಯನ್ನು ಉತ್ತರ ಪ್ರದೇಶ ಸರಕಾರವೇ ನಿರ್ಮಿಸಿದ್ದು ಅದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸಚಿವ ಗಡ್ಕರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್