ಪುನಶ್ಚೇತನ ಪರ್ವ: ಹಲವು ಸುಧಾರಣ ಕ್ರಮಗಳಿಗೆ ಕೇಂದ್ರ ಸಂಪುಟ ಅಸ್ತು


Team Udayavani, Sep 16, 2021, 7:20 AM IST

ಪುನಶ್ಚೇತನ ಪರ್ವ: ಹಲವು ಸುಧಾರಣ ಕ್ರಮಗಳಿಗೆ ಕೇಂದ್ರ ಸಂಪುಟ ಅಸ್ತು

ಹೊಸದಿಲ್ಲಿ: ದೂರಸಂಪರ್ಕ ಕ್ಷೇತ್ರದಲ್ಲಿ ಶೇ. 100 ವಿದೇಶಿ ನೇರ ಬಂಡವಾಳಕ್ಕೆ ಒಪ್ಪಿಗೆ, ದೇಶದ ಎಲ್ಲ ಜಿಲ್ಲೆಗಳಲ್ಲೂ ಸಂಯೋಜಿತ ಆರೋಗ್ಯ ಕೇಂದ್ರಗಳ ಸ್ಥಾಪನೆ, ಎಜಿಆರ್‌ ಬಾಕಿ ಪಾವತಿಗೆ ಟೆಲಿಕಾಂ ಕಂಪೆನಿಗಳಿಗೆ 4 ವರ್ಷಗಳ ಕಾಲಾವಕಾಶ, ಆಟೋಮೊಬೈಲ್‌ ಕ್ಷೇತ್ರಕ್ಕೆ ಉತ್ಪಾ ದನೆ ಆಧಾರಿತ ಪ್ರೋತ್ಸಾಹ ಧನ…

ಇವು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಬುಧವಾರ ಕೈಗೊಂಡ ಅತೀ ಮಹತ್ವದ ಸುಧಾರಣಾ ಕ್ರಮಗಳು.

ಕೊರೊನಾ ಕಾರಣ ಸೊರಗಿರುವ ವಿವಿಧ ಕ್ಷೇತ್ರಗಳಿಗೆ ಪುನಶ್ಚೇತನ ನಿಟ್ಟಿನಲ್ಲಿ ಮಹತ್ವದ ಯೋಜನೆ ಗಳಿಗೆ ಒಪ್ಪಿಗೆ ನೀಡಲಾಗಿದೆ.

ಸಂಯೋಜಿತ ಆರೋಗ್ಯ ಕೇಂದ್ರ :

ಆತ್ಮನಿರ್ಭರ ಸ್ವಸ್ಥ ಭಾರತ ಯೋಜನೆಯ ಅನುಷ್ಠಾನಕ್ಕಾಗಿ 64 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ದೇಶದ ಎಲ್ಲ ಜಿಲ್ಲೆಗಳು ಮತ್ತು 3,382 ಹೋಬಳಿಗಳಲ್ಲಿ ಸುಸಜ್ಜಿತ ಸಂಯೋಜಿತ ಆರೋಗ್ಯ ಕೇಂದ್ರ ಸ್ಥಾಪಿಸಲಾಗುತ್ತದೆ ಎಂದು ಸರಕಾರ ತಿಳಿಸಿದೆ. ಎಲ್ಲ ರಾಜ್ಯಗಳಲ್ಲೂ 11,024 ನಗರ ಆರೋಗ್ಯ ಕೇಂದ್ರಗಳ ಸ್ಥಾಪನೆ, 15 ಆರೋಗ್ಯ ತುರ್ತು ಶಸ್ತ್ರಚಿಕಿತ್ಸಾ ಕೇಂದ್ರ, 2 ಸಂಚಾರಿ ಆಸ್ಪತ್ರೆ ಸೇರಿದಂತೆ ಹಲವು  ಗುರಿ ಹಾಕಿಕೊಳ್ಳಲಾಗಿದೆ. 2025- 26ರೊಳಗಾಗಿ ಇದರ ಅನುಷ್ಠಾನ ಪೂರ್ಣಗೊಳಿಸುವ ಉದ್ದೇಶವಿದೆ.

ಪ್ರೋತ್ಸಾಹ ಧನ:

ಆಟೋಮೊಬೈಲ್‌ ಕ್ಷೇತ್ರಕ್ಕೆ  26,058 ಕೋ.ರೂ.ಗಳ ಉತ್ಪಾದನೆ ಆಧಾರಿತ ಪ್ರೋತ್ಸಾಹ ಧನ ಘೋಷಿಸಿದೆ. ಇದು ಹೊಸ ಹೂಡಿಕೆದಾರರಿಗೂ ನೆರವಾಗಲಿದೆ. ಬ್ಯಾಟರಿ ಚಾಲಿತ ವಾಹನಗಳು, ಜಲಜನಕ ಇಂಧನ ಆಧಾರಿತ ಸೆಲ್‌ ವೆಹಿಕಲ್‌ಗ‌ಳಿಗೆ ಉತ್ತೇಜನದ ಜತೆಗೆ ಸುಧಾರಿತ ಆಟೋ ಮೋಟಿವ್‌ ತಂತ್ರಜ್ಞಾನ, ಸಿಕೆಡಿ- ಎಸ್‌ಕೆಡಿ ಕಿಟ್‌ಗಳನ್ನು ತಯಾರಿಗೂ ಪ್ರೋತ್ಸಾಹ ಸಿಗಲಿದೆ.

ಇದರಿಂದ ದೇಶ  ಸಾಂಪ್ರದಾಯಿಕ ಇಂಧನ ವ್ಯವಸ್ಥೆ ಯಿಂದ ಪರಿಸರಸ್ನೇಹಿ ವಿದ್ಯುತ್‌ ಚಾಲಿತ ವಾಹನಗಳತ್ತ ಮುಖ ಮಾಡಲು ಸಾಧ್ಯವಾಗಲಿದೆ ಎಂದು ಸಚಿವ ಅನುರಾಗ್‌ ಠಾಕೂರ್‌ ತಿಳಿಸಿದ್ದಾರೆ.

ಉತ್ಪಾದನಾ ಸಾಮರ್ಥ್ಯ ಹೆಚ್ಚಳ, ಉದ್ಯೋಗ ಸೃಷ್ಟಿಗೆ ಒತ್ತು :

ಉತ್ಪಾದನಾ ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಸಂಪುಟ ಸಭೆ ಯಲ್ಲಿ ಆಟೋಮೊಬೈಲ್‌, ಆಟೋ ಬಿಡಿಭಾಗಗಳು ಹಾಗೂ ಡ್ರೋನ್‌ ಕ್ಷೇತ್ರಕ್ಕೂ ಕೇಂದ್ರ ಸರಕಾರ ಉತ್ಪಾ ದನೆ ಆಧಾರಿತ ಪ್ರೋತ್ಸಾಹ ಧನವನ್ನು ಘೋಷಿಸಿ  26,058 ಕೋಟಿ ರೂ. ಮೀಸಲಿಡಲು ನಿರ್ಧರಿಸಲಾಗಿದೆ. ಮುಂದಿನ 5 ವರ್ಷಗಳಲ್ಲಿ ಈ ಮೊತ್ತವನ್ನು ಉದ್ದಿಮೆಗಳಿಗೆ ನೀಡಲಾಗುತ್ತದೆ. ದೇಶದ ಉತ್ಪಾದನಾ ಜಿಡಿಪಿಯ

ಶೇ. 35ರಷ್ಟು ಪಾಲು ಆಟೋಮೊಬೈಲ್‌ ಕ್ಷೇತ್ರದ್ದಾಗಿರುವ ಕಾರಣ ಉದ್ಯೋಗ ಸೃಷ್ಟಿಗೆ ಭಾರೀ ಅನುಕೂಲವಾಗಲಿದೆ ಎಂದು ಸಚಿವ ಅನುರಾಗ್‌ ಠಾಕೂರ್‌ ಹೇಳಿದ್ದಾರೆ.

ಅನುಕೂಲವೇನು? :

 

  • ಸರಕಾರವೇ ಪ್ರೋತ್ಸಾಹ ಧನ ನೀಡುವುದರಿಂದ ಈ ಕ್ಷೇತ್ರಗಳಲ್ಲಿನ ಹಣಕಾಸಿನ ಅಭಾವ ತಗ್ಗಲಿದೆ
  • ಆಟೋಮೋಟಿವ್‌ ತಂತ್ರಜ್ಞಾನಗಳಲ್ಲಿ ಸುಧಾರಣೆಗಳನ್ನು ಜಾರಿ ಮಾಡಲು, ಜಾಗತಿಕ ಮಟ್ಟದಲ್ಲಿ ಭಾರತದ ಉದ್ದಿಮೆಗಳು ಹೆಸರು ಮಾಡಲು ಈ ಯೋಜನೆ ನೆರವಾಗಲಿದೆ.
  • ಆಟೋಮೊಬೈಲ್‌, ಆಟೋ ಬಿಡಿ ಭಾಗಗಳ ಕ್ಷೇತ್ರದಲ್ಲಿ 42,500 ಕೋಟಿ ರೂ. ಮೊತ್ತದ ಹೊಸ ಹೂಡಿಕೆಗಳು ಹರಿದುಬರಲಿವೆ. ರಫ್ತು ಪ್ರಮಾಣವೂ ಹೆಚ್ಚಾಗಲಿದೆ.
  • ಸುಮಾರು60 ಲಕ್ಷ ಹೆಚ್ಚುವರಿ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ.
  • ಸಾಂಪ್ರದಾಯಿಕ ಇಂಧನ ಆಧರಿತ ಆಟೋಮೊಬೈಲ್‌ ವ್ಯವಸ್ಥೆಯಿಂದ ಭಾರತವು ಪರಿಸರಸ್ನೇಹಿ, ಸುಸ್ಥಿರ, ಸ್ವತ್ಛ, ಸುಧಾರಿತ ಹಾಗೂ ದಕ್ಷ ವಿದ್ಯುತ್‌ಚಾಲಿತ ವಾಹನ ಆಧರಿತ ವ್ಯವಸ್ಥೆಗೆ ಪರಿವರ್ತನೆಯಾಗಲು ಸಾಧ್ಯ.

ದೂರಸಂಪರ್ಕ ಕ್ಷೇತ್ರದಲ್ಲಿ ಶೇ. 100 ಎಫ್ಡಿಐ :

ದೂರಸಂಪರ್ಕ ಕ್ಷೇತ್ರದಲ್ಲಿ ಸುಧಾರಣೆ ಉದ್ದೇಶ ದಿಂದ ಕೇಂದ್ರ ಸಂಪುಟ ಹಲವು ಕ್ರಮ ಘೋಷಿಸಿದೆ. ಇದು ದೂರಸಂಪರ್ಕ ಕಂಪೆನಿ  ಗಳಿಗೆ ಮಾತ್ರವಲ್ಲದೇ ಮೊಬೈಲ್‌ ಬಳಕೆದಾರ ರಿಗೂ ನೆರವಾಗಲಿದೆ ಎಂದು ಕೇಂದ್ರ ಸಚಿವ ಅಶ್ವಿ‌ನಿ ವೈಷ್ಣವ್‌ ಹೇಳಿದ್ದಾರೆ. ಗ್ರಾಹಕರ ಕೆವೈಸಿ ದಾಖಲೆ ಸಂಗ್ರಹಿಸಿಡುವುದು ದೊಡ್ಡ ಸವಾಲಾಗಿತ್ತು. ಇನ್ನು ಮುಂದೆ ಕೆವೈಸಿಯನ್ನು ಡಿಜಿಟಲೀಕರಣ ಗೊಳಿಸಲಿದ್ದೇವೆ ಎಂದೂ ತಿಳಿಸಿದ್ದಾರೆ.

ಸುಧಾರಣಾ ಕ್ರಮ :

  • ದೂರಸಂಪರ್ಕ ಕ್ಷೇತ್ರಕ್ಕೆ ಸಂಬಂಧಿಸಿ 9 ರಚನಾ ತ್ಮಕ, 5 ನಿರ್ವಹಣಾತ್ಮಕ ಸುಧಾರಣೆಗಳಿಗೆ ಒಪ್ಪಿಗೆ
  • ಎಜಿಆರ್‌(ಹೊಂದಾಣಿಕೆಯಾದ ಒಟ್ಟಾರೆ ಆದಾಯ) ವ್ಯಾಖ್ಯಾನದಲ್ಲಿ ಬದಲಾವಣೆ. ಟೆಲಿಕಾಂ ಕಂಪೆನಿಗಳ ದೂರಸಂಪರ್ಕೇತರ ಆದಾಯಕ್ಕೆ ಶುಲ್ಕ ಪಾವತಿಯಿಂದ ವಿನಾಯಿತಿ
  • ಎಲ್ಲ ಟೆಲಿಕಾಂ ಕಂಪೆನಿಗಳಿಗೂ ಎಜಿಆರ್‌ ಬಾಕಿ ಪಾವತಿಗೆ ನಾಲ್ಕು ವರ್ಷಗಳ ಕಾಲಾವಕಾಶ.
  • ತರಂಗಾಂತರ (ಸ್ಪೆಕ್ಟ್ರಂ) ಹಂಚಿಕೆ ಮುಕ್ತ
  • ದೂರಸಂಪರ್ಕ ಕ್ಷೇತ್ರದಲ್ಲಿ ಶೇ. 100ರಷ್ಟು ವಿದೇಶಿ ನೇರ ಬಂಡವಾಳ(ಆಟೋಮ್ಯಾಟಿಕ್‌)ಕ್ಕೆ ಅನುಮತಿ
  • ಎಲ್ಲ ಕೆವೈಸಿ (ನಿಮ್ಮ ಗ್ರಾಹಕರನ್ನು ಅರಿಯಿರಿ) ಅರ್ಜಿಗಳ ಡಿಜಿಟಲೀಕರಣ.
  • ಪೋಸ್ಟ್‌ಪೇಯ್ಡನಿಂದ ಪ್ರೀಪೇಯ್ಡಗೆ ಅಥವಾ ಪ್ರೀಪೇಯ್ಡನಿಂದ ಪೋಸ್ಟ್‌ಪೇಯ್ಡಗೆ ಬದಲಾಗಬೇಕೆಂದಿದ್ದರೆ, ಗ್ರಾಹಕರು ಪ್ರತ್ಯೇಕ ಕೆವೈಸಿ ಪ್ರಕ್ರಿಯೆಗೆ ಒಳಗಾಗಬೇಕಾದ ಅಗತ್ಯವಿಲ್ಲ.

ಷೇರುಪೇಟೆಯಲ್ಲಿ ಸಂಚಲನ :

ಮುಂಬಯಿ: ಸೊರಗಿರುವ ಭಾರ್ತಿ ಏರ್‌ಟೆಲ್‌, ವೊಡಾಫೋನ್‌, ಐಡಿಯಾದಂಥ ದೂರಸಂಪರ್ಕ ಕಂಪೆನಿಗಳು ಪಾವತಿಸಲು ಬಾಕಿಯಿರುವ ಕೋಟ್ಯಂತರ ರೂ. ಶುಲ್ಕ ಪಾವತಿಗೆ ಸರಕಾರಕ್ಕೆ 4 ವರ್ಷಗಳ ಕಾಲಾವಕಾಶ ನೀಡಿದೆ. ಪರಿಣಾಮ ಬುಧವಾರ ಈ ಕ್ಷೇತ್ರಗಳ ಷೇರುಗಳ ಖರೀದಿಗೆ  ಹೂಡಿಕೆದಾರರು ಮುಗಿಬಿದ್ದಿದ್ದು, ಸೆನ್ಸೆಕ್‌ ಮತ್ತು ನಿಫ್ಟಿ ಸಾರ್ವಕಾಲಿಕ ದಾಖಲೆ  ಮಾಡಿವೆ. ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 476.11 ಅಂಕಗಳ ಏರಿಕೆ  ದಾಖಲಿಸಿ ದಿನದ ಅಂತ್ಯಕ್ಕೆ ದಾಖಲೆಯ 58,723.20ಕ್ಕೆ ತಲುಪಿದೆ. ನಿಫ್ಟಿ 139.45  ಅಂಕ ಏರಿಕೆ ಕಂಡು, 17,519ರಲ್ಲಿ ವಹಿವಾಟು ಅಂತ್ಯಗೊಳಿಸಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.