ಕರಾವಳಿ ಆರ್ಥಿಕತೆಗೆ ಇನ್ನಷ್ಟು ಉತ್ತೇಜನ


Team Udayavani, Jun 4, 2018, 6:47 AM IST

4.jpg

ಹೊಸದಿಲ್ಲಿ: ದೇಶೀಯ ಜಲಸಾಗಣೆ ನೀತಿಯಲ್ಲಿ ಅತ್ಯಂತ ಮಹತ್ವದ ಬದಲಾವಣೆ ಮಾಡಿರುವ ಕೇಂದ್ರ ಸರಕಾರ, ಕೃಷಿ, ಮೀನುಗಾರಿಕೆ, ತೋಟಗಾರಿಕೆ ಮತ್ತು ಪ್ರಾಣಿ ಉತ್ಪನ್ನಗಳ ಸರಕುಗಳನ್ನು ಸಾಗಿಸಲು ವಿದೇಶಿ ಹಡಗುಗಳಿಗೆ ಅಗತ್ಯ ಅನುಮತಿಯಲ್ಲಿ ವಿನಾಯಿತಿ ನೀಡಿದೆ. ಜೊತೆಗೆ ಭಾರತೀಯ ಹಡಗುಗಳೂ ಈ ಸಾಮಗ್ರಿಗಳನ್ನು ಮುಕ್ತವಾಗಿ ಸಾಗಿಸಬಹುದು. ಸಾಗರಮಾಲಾ ಯೋಜನೆ ಅಡಿಯಲ್ಲಿ ಮೀನುಗಾರಿಕೆ ಮತ್ತು ಮೀನು ಸಂಸ್ಕರಣೆಯನ್ನು ಉತ್ತೇಜಿಸುವ ದೃಷ್ಟಿಯಿಂದ ಇದು ಮಹತ್ವದ್ದಾಗಿದೆ. ಸಾಮಾನ್ಯವಾಗಿ ಈಗ ಭಾರತದ ಮೀನುಗಳನ್ನು ಸಿಂಗಾಪುರದಲ್ಲಿ ಸಂಸ್ಕರಿಸಿ ಜಪಾನ್‌ನಂಥ ದೇಶಗಳಿಗೆ ರಫ್ತು ಮಾಡಲಾಗುತ್ತದೆ.

ಇದರಿಂದಾಗಿ ರೈತರ ಸರಕು ಸಾಗಣೆ ವೆಚ್ಚ ಕಡಿಮೆಯಾಗುವ ನಿರೀಕ್ಷೆಯಿದೆ. ಸಾಮಾನ್ಯವಾಗಿ ಹಡಗುಗಳಲ್ಲಿ ಸಾಮಗ್ರಿಗಳನ್ನು ಸಾಗಿಸುವಾಗ ಬಂದರು ಪ್ರಧಾನ ನಿರ್ದೇಶಕರಿಂದ ಅನುಮತಿ ಪಡೆಯಬೇಕಾಗುತ್ತದೆ. ಈ ಪ್ರಕ್ರಿಯೆ ಸಂಕೀರ್ಣವಾದ್ದರಿಂದ ಸಕಾಲದಲ್ಲಿ ಸರಕು ಸಾಗಣೆ ಸಾಧ್ಯವಾಗುತ್ತಿಲ್ಲ. ಅಲ್ಲದೆ ಜಲ ಸಾರಿಗೆಗೆ ಉತ್ತೇಜನ ನೀಡುತ್ತಿರುವ ಕೇಂದ್ರ ಸರಕಾರ, ಬಂದರುಗಳ ಅಭಿವೃದ್ಧಿಗೆ 14 ಲಕ್ಷ ಕೋಟಿ ರೂ. ಯೋಜನೆಯಾದ ಸಾಗರಮಾಲಾಗೆ ಹೆಚ್ಚಿನ ಒತ್ತು ನೀಡಿದೆ.  ರಸ್ತೆ, ರೈಲು ಮಾರ್ಗದಲ್ಲಿನ ಸರಕು ಸಾಗಣೆಗೆ ಹೋಲಿಸಿದರೆ, ಜಲ ಮಾರ್ಗ ದಲ್ಲಿ ಸರಕು ಸಾಗಣೆಯ ವೆಚ್ಚ ಕಡಿಮೆ ಇದೆ. ಇದು ರೈತರಿಗೆ ನೆರವಾಗಲಿದೆ ಎಂದು ಸಾರಿಗೆ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

ಇದು ದಕ್ಷಿಣ ಭಾರತದ ಜವುಳಿ ಉದ್ಯಮಕ್ಕೆ ಅನುಕೂಲವಾಗಲಿದ್ದು, ಸದ್ಯ ಗುಜರಾತ್‌ನಿಂದ ರಸ್ತೆ ಮೂಲಕ ಹತ್ತಿ ಸಾಗಿಸಲಾಗುತ್ತದೆ. ಇದರ ವೆಚ್ಚ ಹೆಚ್ಚಿರುವು ದರಿಂದಾಗಿ ಹಲವು ಬಾರಿ ತಾಂಜಾನಿ ಯಾದಿಂದ ಜಲ ಮಾರ್ಗದ ಮೂಲಕ ಆಮದು ಮಾಡಿ ಕೊಳ್ಳಲಾಗುತ್ತದೆ. ಗುಜರಾ ತ್‌ನಿಂದ ಜಲ ಸಾರಿಗೆ ಮೂಲಕ ಹತ್ತಿ ಸಾಗಿಸಿದರೆ ವೆಚ್ಚ ಇನ್ನೂ ಕಡಿಮೆಯಾಗಲಿದೆ.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.