ಭಾರತ – ಉಕ್ರೇನ್: ವಿಮಾನ ನಿರ್ಬಂಧ ರದ್ದು
Team Udayavani, Feb 18, 2022, 6:47 AM IST
ಹೊಸದಿಲ್ಲಿ: ಭಾರತ – ಉಕ್ರೇನ್ ನಡುವೆ ಸಂಚರಿಸುವ ವಿಮಾನಗಳಿಗೆ ವಿಧಿಸಲಾಗಿದ್ದ ಮಿತಿಯನ್ನು ಭಾರತ ರದ್ದುಗೊಳಿಸಿದೆ. ಇದರ ಜತೆಗೆ ವಿಮಾನಗಳಲ್ಲಿ ಪ್ರಯಾಣಿಕರಿಗೆ ವಿಧಿಸಲಾಗಿದ್ದ ಆಸನಗಳ ಮಿತಿಯನ್ನೂ ತೆಗೆದುಹಾಕಲಾಗಿದೆ.
“ಉಕ್ರೇನ್ನಲ್ಲಿರುವ ಎಲ್ಲ ಭಾರತೀಯರನ್ನು ತತ್ಕ್ಷಣವೇ ತೆರವುಗೊಳಿಸುವ ಆಲೋಚನೆ ಸದ್ಯಕ್ಕಿಲ್ಲ. ಆದರೂ, ಅವರ ಸುರಕ್ಷೆಗೆ ಹೆಚ್ಚಿನ ಆದ್ಯತೆ ನೀಡುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಭಾರತ ಹೇಳಿದೆ.
ಉಕ್ರೇನ್-ರಷ್ಯಾ ನಡುವೆ ಯುದ್ಧ ನಡೆಯುವ ಭೀತಿ ಆವರಿಸಿರುವುದರಿಂದ ಉಕ್ರೇನ್ನಲ್ಲಿರುವ ಭಾರತೀಯರು ಹೆಚ್ಚೆಚ್ಚು ಸಂಖ್ಯೆಯಲ್ಲಿ ಭಾರತಕ್ಕೆ ಆದಷ್ಟು ಬೇಗನೇ ಆಗಮಿಸಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇತ್ತೀಚೆಗೆ, ಕೊರೊನಾ ನಿಬಂಧನೆಗಳನ್ವಯ, ಎರಡು ದೇಶಗಳ ನಡುವೆ ಸಂಚರಿಸುವ ವಿಮಾನಗಳ ಸಂಖ್ಯೆಯನ್ನು ಇಳಿಕೆ ಮಾಡಲಾಗಿತ್ತು.
ಅಮೆರಿಕ ವಿಶ್ವಾಸ: ರಷ್ಯಾ- ಉಕ್ರೇನ್ ಯುದ್ಧ ಆರಂಭವಾದರೆ ಭಾರತ, ತನ್ನ ಬೆಂಬಲಕ್ಕೆ ನಿಲ್ಲುತ್ತದೆ ಎಂಬ ವಿಶ್ವಾಸವನ್ನು ಅಮೆರಿಕ ವ್ಯಕ್ತಪಡಿಸಿದೆ.
ಹೆಚ್ಚುವರಿ 7 ಸಾವಿರ ತುಕಡಿ: ಉಕ್ರೇನ್ ಗಡಿಯಲ್ಲಿ ತಾನು ನಿಯೋಜಿಸಿರುವ ಸೇನೆಗೆ ಹೆಚ್ಚುವರಿಯಾಗಿ 7 ಸಾವಿರ ಸೇನಾ ತುಕಡಿಗಳನ್ನು ರಷ್ಯಾ ನಿಯೋಜಿಸಿದೆ ಎಂದು ಅಮೆರಿಕ ಹೇಳಿದೆ. ಇತ್ತೀಚೆಗೆ, ಉಕ್ರೇನ್ ಗಡಿಯಿಂದ ತನ್ನ ಸೇನೆಯನ್ನು ಹಂತಹಂತವಾಗಿ ಹಿಂದಕ್ಕೆ ಕರೆಯಿಸಿಕೊಳ್ಳುತ್ತಿರುವು ದಾಗಿ ರಷ್ಯಾ ಪ್ರಕಟಿಸಿತ್ತು. ಇದರ ಹೊರತಾಗಿಯೂ ಮತ್ತಷ್ಟು ಸೇನಾ ತುಕಡಿಗಳನ್ನು ಗಡಿಯಲ್ಲಿ ನಿಯೋಜಿಸಲಾಗಿದೆ ಎಂದು ಅಮೆರಿಕ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್