ಲಂಚ, ಭ್ರಷ್ಟಾಚಾರ, ಅಕ್ರಮ ಆಸ್ತಿ : 15 ಹಿರಿಯ ಕಸ್ಟಮ್ಸ್ ಅಧಿಕಾರಿಗಳು ಸೇವೆಯಿಂದ ವಜಾ
Team Udayavani, Jun 18, 2019, 4:08 PM IST
ಹೊಸದಿಲ್ಲಿ : ಭ್ರಷ್ಟ, ಲಂಚಕೋರ ಆದಾಯ ತೆರಿಗೆ ಅಧಿಕಾರಿಗಳನ್ನು ಕಿತ್ತು ಹಾಕಿದ ಬೆನ್ನಿಗೇ ಸರಕಾರ ಇಂದು ಮಂಗಳವಾರ ಭಷ್ಟಾಚಾರ ಮತ್ತು ಲಂಚ ತೆಗೆದುಕೊಂಡ 15 ಹಿರಿಯ ಕಸ್ಟಮ್ಸ್ ಮತ್ತು ಕೇಂದ್ರ ಅಬಕಾರಿ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿದೆ.
ಸೇವೆಯಿಂದ ವಜಾಗೊಳಿಸಲ್ಪಟ್ಟ ಈ 15 ಮಂದಿಯಲ್ಲಿ ಒಬ್ಬರು ಮುಖ್ಯ ಆಯಕ್ತರೂ ಸೇರಿದ್ದಾರೆ.
56(ಜೆ) ಮೂಲಭೂತ ನಿಯಮ ಪ್ರಕಾರ ಪರೋಕ್ಷ ತೆರಿಗೆ ಕೇಂದ್ರ ಮಂಡಳಿಯ (ಸಿಬಿಐಸಿ) ಮುಖ್ಯ ಆಯುಕ್ತರಿಂದ ತೊಡಗಿ ಸಹಾಯಕ ಕಮಿಷನರ್ ವರೆಗಿನ 15 ಅಧಿಕಾರಿಗಳನ್ನು (ಇವರಲ್ಲಿ ಕೆಲವರು ಈಗಾಗಲೇ ಅಮಾನತಿನಲ್ಲಿದ್ದಾರೆ) ಲಂಚ ಸ್ವೀಕಾರ ಮತ್ತು ಭ್ರಷ್ಟಾಚಾರದ ಅಪರಾಧಗಳಿಗಾಗಿ ಸೇವೆಯಿಂದ ವಜಾ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯದ ಆದೇಶ ತಿಳಿಸಿದೆ.
ಸೇವೆಯಿಂದ ವಜಾಗೊಳಿಸಲ್ಪಟ್ಟಿರುವ ಈ 15 ಅಧಿಕಾರಿಗಳ ವಿರುದ್ಧ ಒಂದೋ ಸಿಬಿಐ ನಿಂದ ಕೇಸು ದಾಖಲಾಗಿತ್ತು ಇಲ್ಲವೇ ಇವರು ಲಂಚ, ಸುಲಿಗೆ ಮತ್ತು ಅಕ್ರಮ ಆಸ್ತಿ ಪಾಸ್ತಿ ಅಪರಾಧದಲ್ಲಿ ಶಾಮೀಲಾಗಿದ್ದರು ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ