ಬಯಲು ಶೌಚ ಎಸಗಿದ ಮಧ್ಯಪ್ರದೇಶ ಸರಕಾರಿ ಶಿಕ್ಷಕ ಅಮಾನತು
Team Udayavani, Sep 13, 2017, 4:06 PM IST
ಭೋಪಾಲ್ : ತೆರೆದ ಬಯಲಲ್ಲೇ ಮಲ ವಿಸರ್ಜಿಸಿದ ಸರಕಾರಿ ಶಾಲೆಯ ಶಿಕ್ಷಕನೋರ್ವನನ್ನು ಮಧ್ಯ ಪ್ರದೇಶ ಶಿಕ್ಷಣ ಇಲಾಖೆಯ ಅಧಿಕಾರಿಗಳು ಅಮಾನತು ಮಾಡಿದ್ದಾರೆ.
ಮಧ್ಯಪ್ರದೇಶದ ಅಶೋಕ್ನಗರ ಜಿಲ್ಲೆಯ ಶಿಕ್ಷಣಾಧಿಕಾರಿ, ಬಯಲು ಶೌಚ ನಡೆಸಿದ ಸರಕಾರಿ ಶಾಲಾ ಶಿಕ್ಷಕನ ಈ ಕೃತ್ಯವು ದುರ್ನಡತೆಯಾಗಿದೆಯಲ್ಲದೆ ಸರಕಾರಿ ಮಾರ್ಗದರ್ಶಿ ಸೂತ್ರಗಳ ನೇರ ಉಲ್ಲಂಘನೆಯಾಗಿರುವುದರಿಂದ ಆತನನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಆರೋಪಿ ಶಿಕ್ಷಕನನ್ನು ಅಶೋಕನಗರ ಜಿಲ್ಲೆಯ ಬುಡೇರಾ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಆರೋಪಿ ಶಿಕ್ಷಕನಿಂದ ಸರಕಾರದ ಸ್ವಚ್ಚ ಭಾರತ ಅಭಿಯಾನದ ಉಲ್ಲಂಘನೆಯಾಗಿದೆ ಎಂದವರು ಹೇಳಿದರು.
ಈ ವರ್ಷ ಜೂನ್ ತಿಂಗಳಲ್ಲಿ ಮಧ್ಯ ಪ್ರದೇಶದ ರೈಸೇನ್ ಜಿಲ್ಲೆಯ ವೀರ್ಪುರ್ ಗ್ರಾಮದ 13 ಕುಟುಂಬಗಳು ಬಯಲು ಶೌಚ ನಡೆಸಿದ ಅಪರಾಧಕ್ಕಾಗಿ ಸುಮಾರು ನಾಲ್ಕು ಲಕ್ಷ ರೂ. ದಂಡವನ್ನು ಪಂಚಾಯತ್ ಅಧಿಕಾರಿಗಳು ವಿಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ