ಶಿಕ್ಷಕರ ಪ್ರಶಸ್ತಿ: ಸ್ವಯಂ ಅರ್ಜಿ ಸಲ್ಲಿಕೆಗೆ ಅವಕಾಶ
Team Udayavani, Jun 21, 2018, 6:00 AM IST
ಹೊಸದಿಲ್ಲಿ: ಇನ್ನು ಮುಂದೆ ಸರಕಾರಿ ಶಾಲೆಗಳ ಅಧ್ಯಾಪಕರು ಶಿಕ್ಷಕರ ರಾಷ್ಟ್ರೀಯ ಪ್ರಶಸ್ತಿಗಾಗಿ ಅರ್ಜಿಯನ್ನು ನೇರವಾಗಿ ಕೇಂದ್ರ ಸರಕಾರಕ್ಕೆ ಕಳುಹಿಸಬಹುದು. ಹೀಗೆಂದು ಕೇಂದ್ರ ಮಾನವ ಸಂಪದ ಅಭಿವೃದ್ಧಿ ಇಲಾಖೆ ಸಚಿವ ಪ್ರಕಾಶ್ ಜಾಬ್ಡೇಕರ್ ಬುಧವಾರ ತಿಳಿಸಿದರು. ಆನ್ಲೈನ್ ವ್ಯವಸ್ಥೆಯಲ್ಲಿ ಸರಕಾರಿ ಶಾಲೆ ಶಿಕ್ಷಕರು ಅಥವಾ ಮುಖ್ಯ ಗುರುಗಳು ತಮ್ಮ ಬಗ್ಗೆ ಮಾಹಿತಿ ಅಪ್ಲೋಡ್ ಮಾಡಿಕೊಳ್ಳುವ ಅವಕಾಶ ಇದೆ. ಪ್ರತಿ ಜಿಲ್ಲೆಯಿಂದ 3 ಶಿಕ್ಷಕರನ್ನು, ಅಂತಿಮವಾಗಿ ಪ್ರತಿ ರಾಜ್ಯದಿಂದ 6 ಶಿಕ್ಷಕರನ್ನು ಆಯ್ಕೆ ಮಾಡಲಾಗುತ್ತದೆ. ಸ್ವತಂತ್ರ ಮಂಡಳಿ 50 ಮಂದಿ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡುತ್ತದೆ ಎಂದರು. ಕಳೆದ ವರ್ಷದವರೆಗೆ ರಾಜ್ಯ ಸರಕಾರಗಳ ಮೂಲಕ ಶಿಕ್ಷಕರನ್ನು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ