ಬಾಕಿ ಕೇಸು ಇತ್ಯರ್ಥಕ್ಕೆ ಸಂಕಲ್ಪ
Team Udayavani, Apr 3, 2017, 12:57 PM IST
ಅಲಹಾಬಾದ್: ‘ನ್ಯಾಯಾಲಯಗಳಲ್ಲಿ ಇತ್ಯರ್ಥವಾಗದೆ ಉಳಿದಿರುವ ಪ್ರಕರಣಗಳ ಸಂಖ್ಯೆ ತಗ್ಗಿಸುವ ತನ್ನ ‘ಸಂಕಲ್ಪ’ಕ್ಕೆ ಕೇಂದ್ರ ಸರಕಾರ ಬದ್ಧವಾಗಿದೆ,” ಎಂದು ಪ್ರಧಾನಿ ನರೇಂದ್ರ ಮೋದಿ ಮುಖ್ಯ ನ್ಯಾಯಮೂರ್ತಿಗಳಿಗೆ ಭರವಸೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಡಿಜಿಟಲ್ ಮಂತ್ರ ಜಪಿಸಿರುವ ಪ್ರಧಾನಿ, ‘ಡಿಜಿಟಲ್ ತಂತ್ರಜ್ಞಾನದ ನೆರವಿನಿಂದ ನ್ಯಾಯಾಂಗದ ಮೇಲಿನ ಒತ್ತಡ ಕಡಿಮೆ ಮಾಡಲು ಸಾಧ್ಯವಿದೆ,” ಎಂದಿದ್ದಾರೆ.
ಅಲಹಾಬಾದ್ ಹೈಕೋರ್ಟ್ನ 150ನೇ ವರ್ಷಾಚರಣೆ ಸಮಾರಂಭದಲ್ಲಿ ಮಾತನಾಡಿದ ಮೋದಿ, ‘ದೇಶದ ಇತ್ತೀಚಿನ ಪ್ರಗತಿಯಲ್ಲಿ ತಂತ್ರಜ್ಞಾನ ಮಹತ್ವದ ಪಾತ್ರ ವಹಿಸಿದ್ದು, ನ್ಯಾಯಾಂಗದಲ್ಲೂ ತಂತ್ರಜ್ಞಾನದ ಅಳವಡಿಕೆಗೆ ಸಾಕಷ್ಟು ಅವಕಾಶಗಳಿರುವುದನ್ನು ಮನಗಂಡಿದ್ದೇನೆ. ಈ ನಿಟ್ಟಿನಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿನ ಪ್ರಕ್ರಿಯೆಗಳನ್ನು ಸರಳೀಕರಿಸಲು ನೆರವಾಗುವ ತಂತ್ರಜ್ಞಾನಗಳ ಆವಿಷ್ಕಾರಕ್ಕೆ ಸ್ಟಾರ್ಟಪ್ ಕ್ಷೇತ್ರದ ತಂತ್ರಜ್ಞರು ಶ್ರಮಿಸಬೇಕು,” ಎಂದು ಕೋರಿದರು.
ಅನವಶ್ಯಕ ಕಾನೂನುಗಳ ‘ಜಂಜಾಲ’ವನ್ನು ತೆರವುಗೊಳಿಸುವುದಕ್ಕೆ ಒತ್ತು ನೀಡಬೇಕಿದೆ ಎಂದು ಅಭಿಪ್ರಾಯಪಟ್ಟ ಮೋದಿ, ‘ನ್ಯಾಯಾಂಗದ ಮೇಲಿನ ಎಲ್ಲ ರೀತಿಯ ಒತ್ತಡಗಳನ್ನು ನಿವಾರಿಸುವ ಜತೆಗೆ ಬಾಕಿ ಉಳಿದಿರುವ ಪ್ರಕರಣಗಳ ತ್ವರಿತ ವಿಲೇವಾರಿಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಸರಕಾರ ಕೈಗೊಳ್ಳಲಿದೆ,” ಎಂದು ಮುಖ್ಯನ್ಯಾಯಮೂರ್ತಿ ಜಗದೀಶ್ ಸಿಂಗ್ ಖೇಹರ್ ಅವರಿಗೆ ಭರವಸೆ ನೀಡಿದರು. ಇದರೊಂದಿಗೆ ‘ನ್ಯಾಯಾಂಗ ವ್ಯವಸ್ಥೆಯನ್ನು ಆಧುನೀಕರಣಗೊಳಿಸಲು ಮತ್ತು ಸಮಯ, ಹಣ ಪೋಲಾಗುವುದನ್ನು ತಡೆಯಲು ನ್ಯಾಯಾಲಯಗಳಲ್ಲಿ ವಿಡಿಯೋ ಕಾನ್ಫರೆನ್ಸ್ಗಳನ್ನು ನಡೆಸುವುದು ಸೂಕ್ತ,” ಎಂದರು.
ಬೇಸಿಗೆಯಲ್ಲೂ ಕೆಲಸ: ಇತ್ಯರ್ಥವಾಗದೆ ಬಾಕಿ ಉಳಿದಿರುವ ಪ್ರಕರಣಗಳ ಸಂಖ್ಯೆ ಇಳಿಸುವ ಸಲುವಾಗಿ ಬೇಸಿಗೆ ರಜೆಯಲ್ಲೂ 3 ಸಂವಿಧಾನ ಪೀಠಗಳು ಕಾರ್ಯನಿರ್ವಹಿಸಲಿವೆ ಎಂದು ಸಿಜೆಐ ಖೇಹರ್ ಹೇಳಿದ್ದಾರೆ. ಬೇಸಿಗೆ ರಜೆ ಅವಧಿಯಲ್ಲಿ 5 ದಿನ ಕಾರ್ಯ ನಿರ್ವಹಿಸಿ, ದಿನಕ್ಕೆ 10 ಪ್ರಕರಣ ಇತ್ಯರ್ಥಗೊಳಿಸುವಂತೆ ನ್ಯಾಯಮೂರ್ತಿಗಳಿಗೆ ಅವರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು