ಸಿಬಿಐ, ಇ.ಡಿ. ಮುಖ್ಯಸ್ಥರ ಸೇವಾವಧಿ ಹೆಚ್ಚಳಕ್ಕೆ ಅಸ್ತು

ಕೇಂದ್ರ ಸರ್ಕಾರ ಮಂಡಿಸಿದ್ದ ಎರಡು ಪ್ರತ್ಯೇಕ ಮಸೂದೆಗಳಿಗೆ ರಾಜ್ಯಸಭೆ ಒಪ್ಪಿಗೆ

Team Udayavani, Dec 15, 2021, 6:20 AM IST

ಸಿಬಿಐ, ಇ.ಡಿ. ಮುಖ್ಯಸ್ಥರ ಸೇವಾವಧಿ ಹೆಚ್ಚಳಕ್ಕೆ ಅಸ್ತು

ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ನಿರ್ದೇಶಕ ಹಾಗೂ ಜಾರಿ ನಿರ್ದೇಶನಾಲಯದ (ಇ.ಡಿ.) ಮುಖ್ಯಸ್ಥರ ಸೇವಾವಧಿಗಳನ್ನು 5 ವರ್ಷಗಳವರೆಗೆ ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಂಡಿಸಿದ್ದ ಎರಡು ಪ್ರತ್ಯೇಕ ಮಸೂದೆಗಳಿಗೆ ರಾಜ್ಯಸಭೆ ಒಪ್ಪಿಗೆ ನೀಡಿದೆ.

ಸಿಬಿಐ ಮುಖ್ಯಸ್ಥರ ಸೇವಾವಧಿ ವಿಸ್ತರಣೆಗಾಗಿ “2021ರ ದೆಹಲಿ ಪೊಲೀಸ್‌ ವಿಶೇಷ ಕಾಯ್ದೆ ತಿದ್ದುಪಡಿ ಮಸೂದೆ’ ಹಾಗೂ ಜಾರಿ ನಿರ್ದೇಶನಾಲಯದ ಮುಖ್ಯಸ್ಥರ ಸೇವಾವಧಿ ತಿದ್ದುಪಡಿಗಾಗಿ “2021ರ ಕೇಂದ್ರ ಜಾಗೃತ ಆಯೋಗ (ಸಿವಿಸಿ) ಕಾಯ್ದೆ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿತ್ತು.

ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲಗಳ ಹೊರತಾಗಿಯೂ ಈ ಎರಡೂ ಮಸೂದೆಗಳಿಗೆ ಧ್ವನಿಮತದ ಅಂಗೀಕಾರ ಸಿಕ್ಕಿದೆ.

ಕೇಂದ್ರದ ಬಗ್ಗೆ ರಾಹುಲ್‌ ಅಸಮಾಧಾನ
ಸಂಸತ್ತಿನಲ್ಲಿ ಹಲವಾರು ಮಸೂದೆಗಳು ಯಾವುದೇ ಚರ್ಚೆಯಿಲ್ಲದೆ ಒಪ್ಪಿಗೆ ಪಡೆದುಕೊಳ್ಳುತ್ತಿವೆ. ಮಸೂದೆಗಳ ಬಗ್ಗೆ ಚರ್ಚಿಸೋಣವೆಂದರೆ, ಪ್ರಧಾನಿಯವರು ಸಂಸತ್‌ ಕಲಾಪಗಳಲ್ಲಿ ಭಾಗವಹಿಸುತ್ತಿಲ್ಲ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಸರ್ಕಾರವೊಂದು ಸಂಸತ್ತನ್ನು ನಡೆಸುವ ರೀತಿ ಇದಲ್ಲ” ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ, ರಾಜ್ಯಸಭೆಯಿಂದ ಅಮಾನತುಗೊಂಡ 12 ಸಂಸದರು ಮಂಗಳವಾರ ನವದೆಹಲಿಯ ಸಂಸತ್‌ ಭವನದ ಆವರಣದಲ್ಲಿರುವ ಗಾಂಧಿ ಪ್ರತಿಮೆಯಿಂದ ವಿಜಯ್‌ ಚೌಕ್‌ವರೆಗೆ ಪ್ರತಿಭಟನಾ ಜಾಥಾ ನಡೆಸಿದರು. ಇದರಲ್ಲಿ ರಾಹುಲ್‌ ಗಾಂಧಿ ಕೂಡ ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಡೆಗಳನ್ನು ಟೀಕಿಸಿದರು.

ಸರ್ಕಾರದ ನಡೆಗಳ ವಿರುದ್ಧ ಸಂಸತ್ತಿನಲ್ಲಿ ದನಿಯೆತ್ತಲು ವಿಪಕ್ಷಗಳಿಗೆ ಅವಕಾಶವೇ ಇಲ್ಲ. ಹಾಗೆ ದನಿಯೆತ್ತುವವರನ್ನು ಅಮಾನತು ಮಾಡಲಾಗುತ್ತದೆ. ಪ್ರಜಾಪ್ರಭುತ್ವವನ್ನು ಹೀಗೆ ಕೊಲ್ಲುತ್ತಿರುವುದು ಖೇದಕರ” ಎಂದು ಅವರು ತಿಳಿಸಿದರು.

ಇದನ್ನೂ ಓದಿ:ಸಚಿವ ಕೋಟ ಶ್ರೀನಿವಾಸ ಪೂಜಾರಿ ಗೆಲುವಿಗೆ ಅಭಿನಂದನೆ ಸಲ್ಲಿಸಿದ ಕಾಪು ಕ್ಷೇತ್ರ ಬಿಜೆಪಿ

ಆದೇಶ ಹಿಂಪಡೆಯಲು ಪಟ್ಟು
ಪ್ರತಿಭಟನಾ ಜಾಥಕ್ಕೂ ಮೊದಲು, ಸಂಸದರನ್ನು ಅಮಾನತುಗೊಳಿಸಿರುವ ಆದೇಶವನ್ನು ಹಿಂಪಡೆಯಬೇಕೆಂದು ಪ್ರತಿಪಕ್ಷಗಳು ರಾಜ್ಯಸಭೆಯಲ್ಲಿ ಭಾರೀ ಪ್ರತಿಭಟನೆ ನಡೆಸಿದರು. ಅನೇಕ ವಿಪಕ್ಷಗಳ ಸದಸ್ಯರು ರಾಜ್ಯಸಭೆಯ ಸ್ಪೀಕರ್‌ ಮುಂದಿನ ಬಾವಿಯಾಕಾರದ ಆವರಣದೊಳಕ್ಕೆ ಪ್ರವೇಶಿಸಿ ಘೋಷಣೆಗಳನ್ನು ಕೂಗಿದರು.

ಇದಕ್ಕೆ ಸ್ಪಂದಿಸಿದ ರಾಜ್ಯಸಭೆ ಸ್ಪೀಕರ್‌ ವೆಂಕಯ್ಯ ನಾಯ್ಡು ಅವರು, ಅಮಾನತುಗೊಂಡ ಸಂಸದರು ತಮ್ಮ ನಡೆಯ ಬಗ್ಗೆ ಕ್ಷಮೆ ಕೇಳಿದರೆ ಮಾತ್ರ ಅವರ ಅಮಾನತು ಆದೇಶವನ್ನು ಹಿಂಪಡೆಯಲಾಗುತ್ತದೆ ಎಂದರು. ಆದರೆ, ಇದಕ್ಕೆ ಒಪ್ಪದ ವಿಪಕ್ಷಗಳ ನಾಯಕರು, ಆದೇಶ ಹಿಂಪಡೆಯುವಂತೆ ಪಟ್ಟು ಹಿಡಿದರಲ್ಲದೆ, ಕಲಾಪ ಬಹಿಷ್ಕರಿಸಿ ಜಾಥಾ ಹೊರಟರು. ಹಾಗಾಗಿ, ರಾಜ್ಯಸಭೆಯ ಕಲಾಪಗಳನ್ನು ಮಧ್ಯಾಹ್ನ 12ಕ್ಕೆ ಮುಂದೂಡಲಾಗಿತ್ತು.

ಯುಎಪಿಎ ಕಾಯ್ದೆಗೆ ತಿದ್ದುಪಡಿ ಪ್ರಸ್ತಾವನೆ ಇಲ್ಲ
ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯ್ದೆಗೆ (ಯುಎಪಿಎ) ತಿದ್ದುಪಡಿ ತರುವಂಥ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಗೃಹ ಇಲಾಖೆಯ ಸಹಾಯಕ ಸಚಿವ ನಿತ್ಯಾನಂದ ರೈ, ಲೋಕಸಭೆಗೆ ತಿಳಿಸಿದ್ದಾರೆ. ಯುಎಪಿಎ ಕಾಯ್ದೆಯಡಿ ಬಂಧಿತರಾಗಿರುವ ಅನೇಕ ಶಂಕಿತರು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಬಿಡುಗಡೆಯಾಗಿರುವ ಕೆಲವು ಉದಾಹರಣೆಗಳಿಂದಾಗಿ ಕೇಂದ್ರ ಸರ್ಕಾರ, ಈ ಕಾಯ್ದೆಗೆ ತಿದ್ದುಪಡಿ ತರುತ್ತದೆಯೇ ಎಂಬ ಲಿಖೀತ ಪ್ರಶ್ನೆಯೊಂದಕ್ಕೆ ಸಚಿವರು ಹೀಗೆ ಉತ್ತರಿಸಿದ್ದಾರೆ.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.