ಮುಂದೆ ವಿನಾಯಿತಿ ರಹಿತ ತೆರಿಗೆ ವ್ಯವಸ್ಥೆ ಖಚಿತ


Team Udayavani, Feb 3, 2023, 7:10 AM IST

tdy-37

ಹೊಸದಿಲ್ಲಿ: “ಮುಂದಿನ ದಿನಗಳಲ್ಲಿ ವಿನಾಯಿತಿ ರಹಿತ ಆದಾಯ ತೆರಿಗೆ ವ್ಯವಸ್ಥೆ ಇರಬೇಕು ಎನ್ನುವುದನ್ನು ಸರಕಾರ ಬಯಸುತ್ತಿದೆ. ಜತೆಗೆ ತೆರಿಗೆಯ ಪ್ರಮಾಣವೂ ಕಡಿಮೆ ಮಟ್ಟದಲ್ಲಿಯೇ ಇರಬೇಕು’

– ಹೀಗೆಂದು ಹೇಳಿದ್ದು ಕೇಂದ್ರ ಕಂದಾಯ ಕಾರ್ಯದರ್ಶಿ ಸಂಜಯ ಮಲ್ಹೋತ್ರಾ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು ನಿಧಾನವಾಗಿ ವಿನಾಯಿತಿ ರಹಿತ ತೆರಿಗೆ ವ್ಯವಸ್ಥೆ ಇರಲಿದೆ ಎಂಬುದನ್ನೂ ಸೂಚ್ಯವಾಗಿ ಹೇಳಿದ್ದಾರೆ. ಕೇಂದ್ರ ಸರಕಾರದ ಮುಂದೆ ಅದನ್ನು ಜಾರಿಗೊಳಿಸುವುದರ ಬಗ್ಗೆ ನಿಗದಿತ ಸಮಯದ ಮಿತಿ ಇಲ್ಲ ಎಂದರು.

ಹೊಸ ತೆರಿಗೆ ವ್ಯವಸ್ಥೆಯ ಅನ್ವಯ ವಾರ್ಷಿಕವಾಗಿ 7  ಲಕ್ಷ ರೂ. ವರೆಗೆ ಆದಾಯ ಇರುವವರಿಗೆ ತೆರಿಗೆ ಪಾವತಿ ಮಾಡಬೇಕಾದ ಅಗತ್ಯ ಇಲ್ಲ. ಜತೆಗೆ ಸ್ಟಾಂಡರ್ಡ್‌ ಡಿಡಕ್ಷನ್‌ 50 ಸಾವಿರ ರೂ. ಅನ್ನು ಕ್ಲೇಮು ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ ಎಂದು ಮಲ್ಹೋತ್ರಾ ಹೇಳಿದ್ದಾರೆ. ಇದುವರೆಗೆ ಹಳೆಯ ತೆರಿಗೆ ವ್ಯವಸ್ಥೆಯಲ್ಲಿ ಮಾತ್ರ ಸ್ಟಾಂಡರ್ಡ್‌ ಡಿಡಕ್ಷನ್‌ ಇತ್ತು.

ಅನುಕೂಲ: ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿರುವ ಹೊಸ ತೆರಿಗೆ ಪದ್ಧತಿ ತೆರಿಗೆ ಪಾವತಿದಾರರಿಗೆ ಅನುಕೂಲವಾ ಗಲಿದೆ. ಇದರಿಂದ ಹೆಚ್ಚಿನ ಉಳಿತಾಯ ಉಂಟಾಗಲಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಅಧ್ಯಕ್ಷ ನಿತಿನ್‌ ಗುಪ್ತಾ ಹೇಳಿದ್ದಾರೆ.

ತೆರಿಗೆದಾರರಿಗೆ ಇದೆ ಸ್ವಾತಂತ್ರ್ಯ: ತೆರಿಗೆದಾರರು ಹೊಸತು ಮತ್ತು ಹಳೆಯ ತೆರಿಗೆ ವ್ಯವಸ್ಥೆ ಆಯ್ದುಕೊಳ್ಳುವ ಬಗ್ಗೆ ಅವರಿಗೆ ಸ್ವಾತಂತ್ರ್ಯ ಇದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬಜೆಟ್‌ ಮಂಡನೆ ವೇಳೆ ಹೊಸ ತೆರಿಗೆ ಪದ್ಧತಿಯೇ ಡಿಫಾಲ್ಟ್ ಆಗಿ ಅನುಷ್ಠಾನಗೊಳ್ಳಲಿದೆ ಎಂದು ಹೇಳಿದ್ದಕ್ಕೆ ಗುಪ್ತಾ ಈ ಮಾತು ಗಳನ್ನಾಡಿದ್ದಾರೆ. ಇ-ಫೈಲಿಂಗ್‌ ಮಾಡುವ ವೇಳೆ ಸ್ಕ್ರೀನ್‌ನಲ್ಲಿ ಅದು ಪ್ರಧಾನವಾಗುತ್ತದೆ. ಹಾಗೆಂದು ಅಲ್ಲಿ ಹಳೆಯ ವ್ಯವಸ್ಥೆಯೂ ಇರಲಿದೆ ಎಂದಿದ್ದಾರೆ.

ಸ್ಟಾಂಡರ್ಡ್‌ ಡಿಡಕ್ಷನ್‌ ಇದೆ: 7 ಲಕ್ಷ ರೂ. ವರೆಗೆ ತೆರಿಗೆ ವ್ಯಾಪ್ತಿ ವಿಸ್ತರಣೆ ಮಾಡುವ ವೇಳೆ ಬಜೆಟ್‌ನಲ್ಲಿ ಸ್ಟಾಂಡರ್ಡ್‌ ಡಿಡಕ್ಷನ್‌ 50 ಸಾವಿರ ರೂ. ಅನ್ನೂ ಸೇರಿಸಲಾಗಿದೆ. ಹೀಗಾಗಿ ತೆರಿಗೆ ವ್ಯಾಪ್ತಿ ಮೌಲ್ಯ ಒಟ್ಟು 7,50 ಲಕ್ಷ ರೂ. ಆಗಲಿದೆ.

ವಿಶ್ವ ಸ್ವಾಗತಿಸಬೇಕು; ಜೈಶಂಕರ್‌:

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ 2023-24ನೇ ಸಾಲಿನ ಬಜೆಟ್‌ ಅನ್ನು ವಿಶ್ವವು ಸ್ವಾಗತಿಸಬೇಕು ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಹೇಳಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು ಬಂಡವಾಳ ಹೂಡಿಕೆ ವೆಚ್ಚವು ಶೇ.33ರಷ್ಟು ಅಂದರೆ 10 ಲಕ್ಷ ಕೋಟಿ ರೂ. ಆಗಿದೆ ಎಂದರು.

ವಿದೇಶಾಂಗಕ್ಕೆ 18,050 ಕೋಟಿ :

2023-24ನೇ ಬಜೆಟ್‌ನಲ್ಲಿ ವಿದೇ ಶಾಂಗ ಸಚಿವಾಲಯಕ್ಕೆ 18,050 ಕೋಟಿ ರೂ. ಮೀಸಲಾಗಿ ಇರಿಸ ಲಾಗಿದೆ. 2022-23ನೇ ಸಾಲಿನಲ್ಲಿ 17,250 ಕೋಟಿ ರೂ. ನೀಡಲಾ ಗಿತ್ತು. ಭಾರತ ಪ್ರಸಕ್ತ ಸಾಲಿನಲ್ಲಿ ಜಿ20 ರಾಷ್ಟ್ರಗಳ ಅಧ್ಯಕ್ಷತೆಯನ್ನೂ ಹೊಂದಿರುವುದರಿಂದ ಆ ನಿಟ್ಟಿ ನಲ್ಲಿ ಖರ್ಚು ವೆಚ್ಚಕ್ಕಾಗಿ 990 ಕೋಟಿ ರೂ. ನೀಡಲಾಗಿದೆ. ವಿವಿಧ ದೇಶಗಳಿಗೆ ಅಭಿವೃದ್ಧಿಯ ನೆರವು ನೀಡುವ ನಿಟ್ಟಿನಲ್ಲಿ 5,408 ಕೋಟಿ ರೂ. ನೀಡಲಾಗಿದೆ. ಈ ಪೈಕಿ ಭೂತಾನ್‌ಗೆ 2,400 ಕೋಟಿ ರೂ., ಅಫ್ಘಾನಿಸ್ಥಾನಕ್ಕೆ 200 ಕೋಟಿ ರೂ. ನೀಡಲಾಗಿದೆ.

ಟಾಪ್ ನ್ಯೂಸ್

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

MI

ಬುಮ್ರಾ ಬಳಿಕ ಐಪಿಎಲ್ ನಿಂದ ಹೊರಬಿದ್ದ ಮತ್ತೊಬ್ಬ ಮುಂಬೈ ಇಂಡಿಯನ್ಸ್ ಬೌಲರ್

1-sadsadsadasd

ಅಮೃತಪಾಲ್ ಸಿಂಗ್ ಜನಪ್ರಿಯತೆಗಾಗಿ ಮಂದೀಪ್ ಸಂಘಟನೆ ಪಿಗ್ಗಿಬ್ಯಾಕ್ ಮಾಡಿದನೇ?

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

1-sfsdf-sfsdfd

ಸ್ವಿಸ್ ಓಪನ್ ಸೂಪರ್ ಪ್ರಶಸ್ತಿ ಗೆದ್ದ ಸಾಯಿರಾಜ್-ಚಿರಾಗ್ ಜೋಡಿ

c-t-ravi

ಚಿಕ್ಕಮಗಳೂರಿನಲ್ಲಿ ಹಿಂದುತ್ವ ಹಾಗೂ ಅಭಿವೃದ್ದಿಯೇ ಗೆಲ್ಲುವುದು: ಸಿ.ಟಿ.ರವಿ

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadsadasd

ಅಮೃತಪಾಲ್ ಸಿಂಗ್ ಜನಪ್ರಿಯತೆಗಾಗಿ ಮಂದೀಪ್ ಸಂಘಟನೆ ಪಿಗ್ಗಿಬ್ಯಾಕ್ ಮಾಡಿದನೇ?

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

goa marriage

ಗೋವಾ ಸಮುದ್ರ ತೀರದಲ್ಲಿ ಮದುವೆಯಾಗುವ ಕನಸು ಕಾಣುತ್ತಿದ್ದವರಿಗೆ ಇನ್ನು ಹೆಚ್ಚು ಖರ್ಚು

air india

ಏರ್ ಇಂಡಿಯಾ ಮತ್ತು ನೇಪಾಳ ಏರ್‌ಲೈನ್ಸ್ ವಿಮಾನಗಳು ಢಿಕ್ಕಿ ಹೊಡೆಯುತ್ತಿವು!!

MUST WATCH

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

ಹೊಸ ಸೇರ್ಪಡೆ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

MI

ಬುಮ್ರಾ ಬಳಿಕ ಐಪಿಎಲ್ ನಿಂದ ಹೊರಬಿದ್ದ ಮತ್ತೊಬ್ಬ ಮುಂಬೈ ಇಂಡಿಯನ್ಸ್ ಬೌಲರ್

1-sadsadsadasd

ಅಮೃತಪಾಲ್ ಸಿಂಗ್ ಜನಪ್ರಿಯತೆಗಾಗಿ ಮಂದೀಪ್ ಸಂಘಟನೆ ಪಿಗ್ಗಿಬ್ಯಾಕ್ ಮಾಡಿದನೇ?

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.