ಮುಂದೆ ವಿನಾಯಿತಿ ರಹಿತ ತೆರಿಗೆ ವ್ಯವಸ್ಥೆ ಖಚಿತ


Team Udayavani, Feb 3, 2023, 7:10 AM IST

tdy-37

ಹೊಸದಿಲ್ಲಿ: “ಮುಂದಿನ ದಿನಗಳಲ್ಲಿ ವಿನಾಯಿತಿ ರಹಿತ ಆದಾಯ ತೆರಿಗೆ ವ್ಯವಸ್ಥೆ ಇರಬೇಕು ಎನ್ನುವುದನ್ನು ಸರಕಾರ ಬಯಸುತ್ತಿದೆ. ಜತೆಗೆ ತೆರಿಗೆಯ ಪ್ರಮಾಣವೂ ಕಡಿಮೆ ಮಟ್ಟದಲ್ಲಿಯೇ ಇರಬೇಕು’

– ಹೀಗೆಂದು ಹೇಳಿದ್ದು ಕೇಂದ್ರ ಕಂದಾಯ ಕಾರ್ಯದರ್ಶಿ ಸಂಜಯ ಮಲ್ಹೋತ್ರಾ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು ನಿಧಾನವಾಗಿ ವಿನಾಯಿತಿ ರಹಿತ ತೆರಿಗೆ ವ್ಯವಸ್ಥೆ ಇರಲಿದೆ ಎಂಬುದನ್ನೂ ಸೂಚ್ಯವಾಗಿ ಹೇಳಿದ್ದಾರೆ. ಕೇಂದ್ರ ಸರಕಾರದ ಮುಂದೆ ಅದನ್ನು ಜಾರಿಗೊಳಿಸುವುದರ ಬಗ್ಗೆ ನಿಗದಿತ ಸಮಯದ ಮಿತಿ ಇಲ್ಲ ಎಂದರು.

ಹೊಸ ತೆರಿಗೆ ವ್ಯವಸ್ಥೆಯ ಅನ್ವಯ ವಾರ್ಷಿಕವಾಗಿ 7  ಲಕ್ಷ ರೂ. ವರೆಗೆ ಆದಾಯ ಇರುವವರಿಗೆ ತೆರಿಗೆ ಪಾವತಿ ಮಾಡಬೇಕಾದ ಅಗತ್ಯ ಇಲ್ಲ. ಜತೆಗೆ ಸ್ಟಾಂಡರ್ಡ್‌ ಡಿಡಕ್ಷನ್‌ 50 ಸಾವಿರ ರೂ. ಅನ್ನು ಕ್ಲೇಮು ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ ಎಂದು ಮಲ್ಹೋತ್ರಾ ಹೇಳಿದ್ದಾರೆ. ಇದುವರೆಗೆ ಹಳೆಯ ತೆರಿಗೆ ವ್ಯವಸ್ಥೆಯಲ್ಲಿ ಮಾತ್ರ ಸ್ಟಾಂಡರ್ಡ್‌ ಡಿಡಕ್ಷನ್‌ ಇತ್ತು.

ಅನುಕೂಲ: ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿರುವ ಹೊಸ ತೆರಿಗೆ ಪದ್ಧತಿ ತೆರಿಗೆ ಪಾವತಿದಾರರಿಗೆ ಅನುಕೂಲವಾ ಗಲಿದೆ. ಇದರಿಂದ ಹೆಚ್ಚಿನ ಉಳಿತಾಯ ಉಂಟಾಗಲಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಅಧ್ಯಕ್ಷ ನಿತಿನ್‌ ಗುಪ್ತಾ ಹೇಳಿದ್ದಾರೆ.

ತೆರಿಗೆದಾರರಿಗೆ ಇದೆ ಸ್ವಾತಂತ್ರ್ಯ: ತೆರಿಗೆದಾರರು ಹೊಸತು ಮತ್ತು ಹಳೆಯ ತೆರಿಗೆ ವ್ಯವಸ್ಥೆ ಆಯ್ದುಕೊಳ್ಳುವ ಬಗ್ಗೆ ಅವರಿಗೆ ಸ್ವಾತಂತ್ರ್ಯ ಇದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬಜೆಟ್‌ ಮಂಡನೆ ವೇಳೆ ಹೊಸ ತೆರಿಗೆ ಪದ್ಧತಿಯೇ ಡಿಫಾಲ್ಟ್ ಆಗಿ ಅನುಷ್ಠಾನಗೊಳ್ಳಲಿದೆ ಎಂದು ಹೇಳಿದ್ದಕ್ಕೆ ಗುಪ್ತಾ ಈ ಮಾತು ಗಳನ್ನಾಡಿದ್ದಾರೆ. ಇ-ಫೈಲಿಂಗ್‌ ಮಾಡುವ ವೇಳೆ ಸ್ಕ್ರೀನ್‌ನಲ್ಲಿ ಅದು ಪ್ರಧಾನವಾಗುತ್ತದೆ. ಹಾಗೆಂದು ಅಲ್ಲಿ ಹಳೆಯ ವ್ಯವಸ್ಥೆಯೂ ಇರಲಿದೆ ಎಂದಿದ್ದಾರೆ.

ಸ್ಟಾಂಡರ್ಡ್‌ ಡಿಡಕ್ಷನ್‌ ಇದೆ: 7 ಲಕ್ಷ ರೂ. ವರೆಗೆ ತೆರಿಗೆ ವ್ಯಾಪ್ತಿ ವಿಸ್ತರಣೆ ಮಾಡುವ ವೇಳೆ ಬಜೆಟ್‌ನಲ್ಲಿ ಸ್ಟಾಂಡರ್ಡ್‌ ಡಿಡಕ್ಷನ್‌ 50 ಸಾವಿರ ರೂ. ಅನ್ನೂ ಸೇರಿಸಲಾಗಿದೆ. ಹೀಗಾಗಿ ತೆರಿಗೆ ವ್ಯಾಪ್ತಿ ಮೌಲ್ಯ ಒಟ್ಟು 7,50 ಲಕ್ಷ ರೂ. ಆಗಲಿದೆ.

ವಿಶ್ವ ಸ್ವಾಗತಿಸಬೇಕು; ಜೈಶಂಕರ್‌:

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ 2023-24ನೇ ಸಾಲಿನ ಬಜೆಟ್‌ ಅನ್ನು ವಿಶ್ವವು ಸ್ವಾಗತಿಸಬೇಕು ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಹೇಳಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು ಬಂಡವಾಳ ಹೂಡಿಕೆ ವೆಚ್ಚವು ಶೇ.33ರಷ್ಟು ಅಂದರೆ 10 ಲಕ್ಷ ಕೋಟಿ ರೂ. ಆಗಿದೆ ಎಂದರು.

ವಿದೇಶಾಂಗಕ್ಕೆ 18,050 ಕೋಟಿ :

2023-24ನೇ ಬಜೆಟ್‌ನಲ್ಲಿ ವಿದೇ ಶಾಂಗ ಸಚಿವಾಲಯಕ್ಕೆ 18,050 ಕೋಟಿ ರೂ. ಮೀಸಲಾಗಿ ಇರಿಸ ಲಾಗಿದೆ. 2022-23ನೇ ಸಾಲಿನಲ್ಲಿ 17,250 ಕೋಟಿ ರೂ. ನೀಡಲಾ ಗಿತ್ತು. ಭಾರತ ಪ್ರಸಕ್ತ ಸಾಲಿನಲ್ಲಿ ಜಿ20 ರಾಷ್ಟ್ರಗಳ ಅಧ್ಯಕ್ಷತೆಯನ್ನೂ ಹೊಂದಿರುವುದರಿಂದ ಆ ನಿಟ್ಟಿ ನಲ್ಲಿ ಖರ್ಚು ವೆಚ್ಚಕ್ಕಾಗಿ 990 ಕೋಟಿ ರೂ. ನೀಡಲಾಗಿದೆ. ವಿವಿಧ ದೇಶಗಳಿಗೆ ಅಭಿವೃದ್ಧಿಯ ನೆರವು ನೀಡುವ ನಿಟ್ಟಿನಲ್ಲಿ 5,408 ಕೋಟಿ ರೂ. ನೀಡಲಾಗಿದೆ. ಈ ಪೈಕಿ ಭೂತಾನ್‌ಗೆ 2,400 ಕೋಟಿ ರೂ., ಅಫ್ಘಾನಿಸ್ಥಾನಕ್ಕೆ 200 ಕೋಟಿ ರೂ. ನೀಡಲಾಗಿದೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.