ಮಹಾ: ಬಹುಮತ ಸಾಬೀತಿಗೆ ಮುನ್ನವೇ ತಿಕ್ಕಾಟ ಆರಂಭ
Team Udayavani, Nov 30, 2019, 6:00 AM IST
ಮುಂಬಯಿ: ಮಹಾರಾಷ್ಟ್ರದಲ್ಲಿ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರಕಾರ ಶನಿವಾರ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಬೇಕಾಗಿದ್ದು, ಇದಕ್ಕೂ ಮುನ್ನವೇ ಅಧಿಕಾರ ಹಂಚಿಕೆಯ ತಿಕ್ಕಾಟ ಆರಂಭವಾಗಿದೆ.
ಈವರೆಗೆ ಸ್ಪೀಕರ್ ಹುದ್ದೆಗೆ ಒಪ್ಪಿಕೊಂಡಿದ್ದ ಕಾಂಗ್ರೆಸ್, ಈಗ ಏಕಾಏಕಿ ಉಪಮುಖ್ಯಮಂತ್ರಿ ಹುದ್ದೆ ಬೇಕೆಂದು ಬೇಡಿಕೆ ಇಟ್ಟಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಎನ್ಸಿಪಿ ನಾಯಕ ಅಜಿತ್ ಪವಾರ್, “ಮೂರೂ ಪಕ್ಷಗಳು ಮಾಡಿಕೊಂಡ ಒಪ್ಪಂದದ ಪ್ರಕಾರ, ಉಪಮುಖ್ಯಮಂತ್ರಿ ಹುದ್ದೆ ಎನ್ಸಿಪಿಗೆ ಸಲ್ಲಬೇಕು. ಕಾಂಗ್ರೆಸ್ ಈ ಮೊದಲು ಒಪ್ಪಿಕೊಂಡಂತೆ ಸ್ಪೀಕರ್ ಹುದ್ದೆ ಪಡೆದುಕೊಳ್ಳಲಿ’ ಎಂದು ಖಡಕ್ಕಾಗಿಯೇ ಹೇಳಿದ್ದಾರೆ.
ಶನಿವಾರ ಮಧ್ಯಾಹ್ನ 2 ಗಂಟೆಗೆ ಠಾಕ್ರೆ ಸರಕಾರ ವಿಧಾನ ಸಭೆಯಲ್ಲಿ ಬಹುಮತ ಸಾಬೀತುಪಡಿಸುವ ಸಂದರ್ಭದಲ್ಲಿ ಸ್ಪೀಕರ್ ಆಯ್ಕೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಈ ನಡುವೆಯೇ, ಶುಕ್ರವಾರ ಎನ್ಸಿಪಿ ಹಿರಿಯ ನಾಯಕ ದಿಲೀಪ್ ವಲ್ಸೆ ಪಾಟೀಲ್ರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಲಾಗಿದೆ. ಮಹಾ ವಿಕಾಸ್ ಅಘಾಡಿಯು ತಮಗೆ 288 ಸದಸ್ಯ ಬಲದ ವಿಧಾನಸಭೆಯಲ್ಲಿ 170 ಸದಸ್ಯರ ಬೆಂಬಲವಿದೆ ಎಂದು ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?