ಪರಿಸರ ಇಲಾಖೆ ಅನುಮತಿ ಪ್ರಶ್ನಿಸಿ ಹಸಿರು ಮಂಡಳಿ ಮೊರೆ: ಗೋವಾ ಸಿಎಂ
ಕಳಸಾ-ಬಂಡೂರಿ ಗೋವಾ ತಗಾದೆ
Team Udayavani, Oct 24, 2019, 8:17 PM IST
ಪಣಜಿ: ಮಹದಾಯಿ ನದಿಯಿಂದ ಕರ್ನಾಟಕಕ್ಕೆ ಕುಡಿಯುವ ನೀರಿಗಾಗಿ ಕಳಸಾ-ಬಂಡೂರಿ ಯೋಜನೆ ಕೈಗೆತ್ತಿಕೊಳ್ಳಲು ಕೇಂದ್ರ ಪರಿಸರ ಇಲಾಖೆ ಅನುಮತಿ ನೀಡಿರುವುದಕ್ಕೆ ಗೋವಾ ಸರ್ಕಾರ ತಕರಾರು ತೆಗೆದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ನಮ್ಮ ವಿಚಾರಣೆ(ಅಹವಾಲು) ಆಲಿಸದೇ ಕಳಸಾ-ಬಂಡೂರಿ ಯೋಜನೆಗೆ ಕೇಂದ್ರ ಪರಿಸರ ಇಲಾಖೆ ಅನುಮತಿ ನೀಡಲು ಸಾಧ್ಯವಿಲ್ಲ. ಒಂದು ವೇಳೆ ಅನುಮತಿ ನೀಡಿದ್ದರೆ ಇದನ್ನು ಪ್ರಶ್ನಿಸಿ ರಾಷ್ಟ್ರೀಯ ಹಸಿರು ಮಂಡಳಿಯಲ್ಲಿ (ಎನ್ಜಿಟಿ) ಅರ್ಜಿ ಸಲ್ಲಿಸುತ್ತೇವೆ. ಮಹದಾಯಿ ನಮಗೆ ತಾಯಿಗಿಂತಲೂ ಮಿಗಿಲಾಗಿದೆ.
ಮಹದಾಯಿ ರಕ್ಷಣೆಗಾಗಿ ನಾವು ಯಾವುದೇ ಬೆಲೆಯನ್ನು ತೆರಲು ಸಿದ್ಧರಿದ್ದೇವೆ. ಗೋವಾ ಜನರ ಹಿತಾಸಕ್ತಿ ಕಾಪಾಡುತ್ತೇವೆ. ಇದಕ್ಕಾಗಿ ಎಲ್ಲದ್ದಕ್ಕೂ ತಯಾರಿಗಿದ್ದೇವೆ ಎಂದು ತಿಳಿಸಿದ್ದಾರೆ.
ಗೋವಾ ಬಿಜೆಪಿ ಪಾರ್ಟಿ ಅಧ್ಯಕ್ಷ ವಿಜಯ್ ಸರ್ದೇಸಾಯಿ ಮಾತನಾಡಿ, ಕೇಂದ್ರ ಪರಿಸರ ಇಲಾಖೆಯ ಈ ಬೆಳವಣಿಗೆ ಮಹದಾಯಿ ನದಿಯನ್ನು ಕೊಲ್ಲುವ ನಡೆಯಾಗಿದೆ. ಇದು ಕುಡಿಯುವ ನೀರಿನ ಯೋಜನೆಯಲ್ಲ, ಮಹದಾಯಿಯನ್ನು ಕೊಲ್ಲುವ ಯೋಜನೆಯಾಗಿದೆ ಎಂದು ಕಿಡಿಕಾರಿದ್ದಾರೆ.
ಗೋವಾ ನಿಯೋಗ ದೆಹಲಿಗೆ:
ಕಳಸಾ-ಬಂಡೂರಿ ಯೋಜನೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಗೋವಾ ನಿಯೋಗ ದೆಹಲಿಗೆ ತೆರಳಿದ್ದು, ಕೇಂದ್ರ ಪರಿಸರ ಇಲಾಖೆ ಮಾತುಕತೆ ನಡೆಸುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ