ಕಾಶ್ಮೀರ: ಅನಂತ್ ನಾಗ್ ಡಿಸಿ ಕಚೇರಿ ಹೊರಭಾಗದಲ್ಲಿ ಗ್ರೆನೇಡ್ ದಾಳಿ, ತಪ್ಪಿದ ಭಾರೀ ಅನಾಹುತ
Team Udayavani, Oct 5, 2019, 12:37 PM IST
ಜಮ್ಮು-ಕಾಶ್ಮೀರ:ಜಮ್ಮು-ಕಾಶ್ಮೀರದ ಅನಂತ್ ನಾಗ್ ನಲ್ಲಿರುವ ಉಪ ಜಿಲ್ಲಾಧಿಕಾರಿ ಕಚೇರಿಯ ಹೊರಭಾಗದ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿರುವ ಘಟನೆ ಶನಿವಾರ ನಡೆದಿದೆ.
ಘಟನೆಯಲ್ಲಿ ಪತ್ರಕರ್ತರೊಬ್ಬರು ಸೇರಿದಂತೆ ಹತ್ತು ಮಂದಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.
ಅನಂತ್ ನಾಗ್ ಜಿಲ್ಲೆಯಲ್ಲಿನ ಉಪಜಿಲ್ಲಾಧಿಕಾರಿ ಕಚೇರಿಯ ಹೊರಭಾಗದಲ್ಲಿ ಪಹರೆ ನಡೆಸುತ್ತಿದ್ದ ಭದ್ರತಾ ಸಿಬ್ಬಂದಿಗಳ ಮೇಲೆ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಆದರೆ ಉಗ್ರರು ಎಸೆದ ಗ್ರೆನೇಡ್ ರಸ್ತೆ ಸಮೀಪ ಬಿದ್ದು ಸ್ಫೋಟಿಸಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಗ್ರೆನೇಡ್ ದಾಳಿಯಲ್ಲಿ 12 ವರ್ಷದ ಬಾಲಕ ಸೇರಿದಂತೆ ಹತ್ತು ಮಂದಿ ಗಾಯಗೊಂಡಿದ್ದಾರೆ.
ಘಟನೆ ಬೆನ್ನಲ್ಲೇ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದಿದ್ದು, ಉಗ್ರರ ವಿರುದ್ಧ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈವರೆಗೂ ಯಾವುದೇ ಉಗ್ರಗಾಮಿ ಸಂಘಟನೆ ಹೊಣೆ ಹೊತ್ತುಕೊಂಡಿಲ್ಲ ಎಂದು ಪ್ರಾಥಮಿಕ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!