ಉಗ್ರರಿಂದ ಗ್ರೆನೇಡ್ ದಾಳಿ: 4 ಭದ್ರತಾ ಸಿಬಂದಿಗಳಿಗೆ ಗಾಯ
Team Udayavani, Aug 14, 2017, 4:53 PM IST
ಶ್ರೀನಗರ : ಮಧ್ಯ ಕಾಶ್ಮೀರದ ಬಡಗಾಂವ್ ಜಿಲ್ಲೆಯಲ್ಲಿ ಇಂದು ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ನಾಲ್ಕು ಭದ್ರತಾ ಸಿಬಂದಿಗಳು ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇಲ್ಲಿಂದ ಸುಮಾರು 20 ಕಿ.ಮೀ. ದೂರದ ಮಗಾಂವ್ ಪ್ರದೇಶದ ಬಾತ್ಪೋರಾದಲ್ಲಿ ಸಿಆರ್ಪಿಎಫ್ ಮತ್ತು ಪೊಲೀಸ್ ತಂಡವೊಂದರ ಮೇಲೆ ಉಗ್ರರು ಗ್ರೆನೇಡ್ ಎಸೆದರು.
ಗ್ರೆನೇಡ್ ಬ್ಲಾಸ್ಟ್ ಆದಾಗ ಮೂವರು ಸಿಆರ್ಪಿಎಫ್ ಮತ್ತು ಒಬ್ಬ ಪೊಲೀಸ್ ಸಿಬಂದಿ ಗಾಯಗೊಂಡರು. ಗಾಯಾಳು ಸಿಬಂದಿಗಳನ್ನು ಬೇಮಿನಾ ದಲ್ಲಿನ ಸ್ಕಿಮ್ಸ್ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಸೇರಿಸಲಾಗಿದೆ.
ನಾಳೆ ಮಂಗಳವಾರ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜಮ್ಮು ಕಾಶ್ಮೀರದಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿರುವ ನಡುವೆಯೇ ಉಗ್ರರಿಂದ ಗ್ರೆನೇಡ್ ದಾಳಿ ನಡೆದಿರವುದು ಗಮನಾರ್ಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ