ಏಟ್ರಿಯಾ ಹೋಟೆಲ್ ನಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಮೇಲೆ ಹಲ್ಲೆ
Team Udayavani, Jul 5, 2017, 3:49 PM IST
ಬೆಂಗಳೂರು: ಎನ್ ಡಿಎ ಒಕ್ಕೂಟದ ರಾಷ್ಟ್ರಪತಿ ಅಭ್ಯರ್ಥಿ ರಾಮ್ ನಾಥ್ ಕೋವಿಂದ ಅವರನ್ನು ಭೇಟಿ ಮಾಡಲು ಅವಕಾಶ ನೀಡಿಲ್ಲ ಎಂಬ ಅಸಮಾಧಾನದಿಂದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಮೇಲೆ ಹಲ್ಲೆ ನಡೆಸಿರುವ ಘಟನೆ ಬುಧವಾರ ಬೆಂಗಳೂರಿನಲ್ಲಿ ನಡೆದಿದೆ.
ರಾಮ್ ನಾಥ ಕೋವಿಂದ್ ಅವರು ಬೆಂಗಳೂರಿನ ಏಟ್ರಿಯಾ ಹೋಟೆಲ್ ನಲ್ಲಿ ತಂಗಿದ್ದ ವೇಳೆ ಈ ಘಟನೆ ನಡೆದಿದೆ. ಕೋಲಿ ಸಮಾಜದ ಮುಖಂಡರು ಲಿಂಬಾವಳಿ ಮೇಲೆ ಹಲ್ಲೆ ನಡೆಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಬೇರೆ ಬೇರೆ ಜಿಲ್ಲೆಯಿಂದ ಆಗಮಿಸಿದ್ದ ಕೋಲಿ ಸಮಾಜದ ಮುಖಂಡರು ರಾಷ್ಟ್ರಪತಿ ಅಭ್ಯರ್ಥಿ ಕೋವಿಂದ್ ಅವರ ಭೇಟಿಗೆ ಅವಕಾಶ ಕೊಡುವಂತೆ ಮನವಿ ಮಾಡಿಕೊಂಡಿದ್ದರು. ಆದರೆ ಹೂಗುಚ್ಛ ಕೊಡಲು ಅವಕಾಶ ಮಾಡಿಕೊಟ್ಟಿಲ್ಲ ಎಂದು ಲಿಂಬಾವಳಿ ಅವರಿಗೆ ಮುತ್ತಿಗೆ ಹಾಕಿ ಜಗ್ಗಾಟ, ತಳ್ಳಾಟ ನಡೆದಿತ್ತು.
ರಾಮನಾಥ್ ಕೋವಿಂದ್ ಅವರು ಹೋಟೆಲ್ ನಿಂದ ನಿರ್ಗಮಿಸಿದ ನಂತರ ಈ ಪ್ರಕರಣ ನಡೆದಿದೆ. ಏತನ್ಮಧ್ಯೆ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ