ಕಾಂಗ್ರೆಸ್ನಲ್ಲಿ ಮತ್ತೆ “ಗುಂಪು ಘರ್ಷಣೆ’
Team Udayavani, Sep 9, 2020, 11:30 PM IST
ಸಾಂದರ್ಭಿಕ ಚಿತ್ರ
ಜೈಪುರ: ರಾಜಸ್ಥಾನದ ಅಜ್ಮಿರ್ನ ಖಾಸಗಿ ಹೋಟೆಲೊಂದರಲ್ಲಿ ಕಾಂಗ್ರೆಸ್ನ ಫೀಡ್ಬ್ಯಾಕ್ ಸಭೆ ನಡೆಯುತ್ತಿದ್ದ ವೇಳೆ, ಕಾಂಗ್ರೆಸ್ನದ್ದೇ ಕೆಲವು ಕಾರ್ಯಕರ್ತರು ಹೋಟೆಲ್ನ ಹೊರಭಾಗದಲ್ಲಿ ಕಾಂಗ್ರೆಸ್ ನಾಯಕರ ಗುಂಪುಗಳ ನಡುವೆ ಗಲಭೆ ನಡೆದಿರುವ ಘಟನೆ ನಡೆದಿದೆ.
ರಾಜಸ್ಥಾನ ಕಾಂಗ್ರೆಸ್ನಲ್ಲಿ ಇತ್ತೀಚೆಗೆ ಭುಗಿಲೆದ್ದಿದ್ದ ಭಿನ್ನಮತ ಶಮನಕ್ಕಾಗಿ ಕಾಂಗ್ರೆಸ್ ಹೈಕಮಾಂಡ್, ಪಕ್ಷದ ಹಿರಿಯ ನಾಯಕ ಅಜಯ್ ಮಕೇನ್ ಅವರನ್ನು ಸಂಧಾನಕಾರರನ್ನಾಗಿ ಕಳುಹಿಸಿದೆ. ಈ ಹಿನ್ನೆಲೆಯಲ್ಲಿ ಅಜ್ಮಿರ್ನ ಹೋಟೆಲೊಂದರಲ್ಲಿ ಮಕೇನ್ ನೇತೃತ್ವದಲ್ಲಿ ಪಕ್ಷದ ಶಾಸಕರ ಸಭೆ ನಡೆಸಲಾಗುತ್ತಿತ್ತು. ಅದೇ ವೇಳೆ, ಮಸುಧಾದ ಕಾಂಗ್ರೆಸ್ ಶಾಸಕ ರಾಕೇಶ್ ಪರೀಕ್ನ ಬೆಂಬಲಿಗರು, ಹೋಟೆಲ್ನ ಹೊರಗಡೆ ಹಾಕಲಾಗಿದ್ದ ಕಾಂಗ್ರೆಸ್ ಮುಖಂಡ ಹಾಗೂ ರಾಜಸ್ಥಾನ ಆರೋಗ್ಯ ಸಚಿವ ರಘು ಶರ್ಮಾ ಅವರ ಭಾವಚಿತ್ರವಿದ್ದ ಪೋಸ್ಟರನ್ನು ಹರಿದುಹಾಕಿ ದಾಂಧಲೆ ನಡೆಸಿದರು. ಸ್ಥಳಕ್ಕಾಗಮಿಸಿದ ಪೊಲೀಸರು, ರಾಕೇಶ್ ಬೆಂಬಲಿಗರನ್ನು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಬಿಡುಗಡೆಗೆ ಆಗ್ರಹಿಸಿ ರಾಕೇಶ್ ಅವರು ಪೊಲೀಸ್ ಠಾಣೆ ಮುಂದೆ ಧರಣಿ ಕುಳಿತ ಪ್ರಸಂಗವೂ ನಡೆದಿದೆ. ಇದು, ಕಾಂಗ್ರೆಸ್ನಲ್ಲಿನ ಗುಂಪುಗಾರಿಕೆಯನ್ನು ಸಾಬೀತುಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ