ವಿಪತ್ತು ತೆರಿಗೆ ಬಗ್ಗೆ ನಿರ್ಧರಿಸಲು ಸಮಿತಿ
Team Udayavani, Sep 29, 2018, 6:00 AM IST
ನವದೆಹಲಿ: ಕೇರಳದ ನೈಸರ್ಗಿಕ ವಿಕೋಪದಂತಹ ಸಮಸ್ಯೆ ಉಂಟಾದಾಗ ಕೆಲವು ಸರಕು ಮತ್ತು ಸೇವೆಗಳ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುವ ಕುರಿತು ಏಳು ಸದಸ್ಯರ ಸಚಿವರ ಸಮಿತಿಯನ್ನು ಶುಕ್ರವಾರ ಜಿಎಸ್ಟಿ ಮಂಡಳಿ ರಚಿಸಿದೆ. ರಾಜ್ಯದಲ್ಲಿ ಕೆಲವು ಸಾಮಗ್ರಿಗಳು ಹಾಗೂ ಸೇವೆಗಳ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಿ, ನೈಸರ್ಗಿಕ ವಿಪತ್ತಿನಿಂದ ಉಂಟಾದ ನಷ್ಟವನ್ನು ಭರ್ತಿ ಮಾಡಿಕೊಳ್ಳಲು ನೆರವಾಗಬೇಕು ಎಂದು ಕೇಂದ್ರ ಸರ್ಕಾರ ಹಾಗೂ ಜಿಎಸ್ಟಿ ಮಂಡಳಿಯನ್ನು ಕೇರಳ ಸರ್ಕಾರ ಆಗ್ರಹಿಸಿತ್ತು. ಈ ಹಿನ್ನೆಲೆಯಲ್ಲಿ ಕೇರಳ ಮನವಿ ಪರಿಗಣಿಸಿ, ವಿಷಯವನ್ನು ಸಮಿತಿಗೆ ಹಸ್ತಾಂತರಿಸಲಾಗಿದೆ. ಸಮಿತಿಯು ಇದರ ಕಾನೂನು ಸಾಧ್ಯತೆ ಬಾಧ್ಯತೆಗಳನ್ನು ಚರ್ಚಿಸಿ ನಿರ್ಧರಿಸಲಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ರಾಜ್ಯಕ್ಕೆ ಸೀಮಿತವಾಗಿ ಪ್ರತ್ಯೇಕ ತೆರಿಗೆ ವಿಧಿಸಬೇಕೆ, ಇಡೀ ದೇಶಕ್ಕೆ ತೆರಿಗೆಯನ್ನು ಅನ್ವಯಿಸಬೇಕೆ ಅಥವಾ ಕೆಲವೇ ಐಷಾರಾಮಿ ಸಾಮಗ್ರಿಗಳ ಮೇಲೆ ಈ ತೆರಿಗೆ ವಿಧಿಸಬೇಕೆ ಎಂದು ಸಮಿತಿ ವಿಶ್ಲೇಷಿಸಲಿದೆ. ಅಲ್ಲದೆ ರಾಜ್ಯಗಳಿಗೆ ಉಂಟಾಗುವ ತೆರಿಗೆ ಕೊರತೆಯ ಬಗ್ಗೆ ಮಂಡಳಿ ಸಭೆಯಲ್ಲಿ ಚರ್ಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
Covishield ಲಸಿಕೆಯಿಂದ ಮತ್ತೊಂದು ಸೈಡ್ಎಫೆಕ್ಟ್!
MUST WATCH
ಹೊಸ ಸೇರ್ಪಡೆ
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Sandalwood: ದರ್ಶನ್ ʼಡೆವಿಲ್ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್ ಪೋಸ್ಟರ್ ಔಟ್
Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ