ವಿನಾಯಿತಿಗೆ ಎಳ್ಳುನೀರು: ಹೊಟೇಲ್‌ ವಾಸ್ತವ್ಯ,ಆಸ್ಪತ್ರೆ ಕೊಠಡಿ,ಅಂಚೆ ಸೇವೆ ಇನ್ನು ದುಬಾರಿ

ಸಚಿವರ ಸಮಿತಿಯ ಶಿಫಾರಸುಗಳಿಗೆ ಜಿಎಸ್‌ಟಿ ಮಂಡಳಿ ಅಂಗೀಕಾರ

Team Udayavani, Jun 29, 2022, 7:20 AM IST

ವಿನಾಯಿತಿಗೆ ಎಳ್ಳುನೀರು: ಹೊಟೇಲ್‌ ವಾಸ್ತವ್ಯ,ಆಸ್ಪತ್ರೆ ಕೊಠಡಿ,ಅಂಚೆ ಸೇವೆ ಇನ್ನು ದುಬಾರಿ

ಹೊಸದಿಲ್ಲಿ: ಈಗಾಗಲೇ ಬೆಲೆಯೇರಿಕೆ ಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಜಿಎಸ್‌ಟಿ ಮಂಡಳಿ ಸಭೆಯು ಮತ್ತಷ್ಟು ಬರೆ ಹಾಕಿದೆ. ಕೆಲವು ಉತ್ಪನ್ನಗಳು ಮತ್ತು ಸೇವೆಗಳಿಗೆ ನೀಡಲಾಗಿದ್ದ ತೆರಿಗೆ ವಿನಾಯಿತಿ ರದ್ದು ಮಾಡಲು ಜಿಎಸ್‌ಟಿ ಮಂಡಳಿ ಒಪ್ಪಿಗೆ ಸೂಚಿಸಿದೆ.

ಇದರಿಂದಾಗಿ ಹೊಟೇಲ್‌ ವಾಸ್ತವ್ಯ, ಆಸ್ಪತ್ರೆಗಳ ರೂಂ ಬಾಡಿಗೆ, ಅಂಚೆ ಕಚೇರಿ ಸೇವೆಗಳು ಇನ್ನಷ್ಟು ದುಬಾರಿ ಯಾಗಲಿವೆ.

ಇದಲ್ಲದೆ ಚಿನ್ನ ಮತ್ತು ಅಮೂಲ್ಯ ಹರಳುಗಳನ್ನು ರಾಜ್ಯದೊಳಗೆ ಸಾಗಣೆ ಮಾಡಲು ಇ-ವೇ ಬಿಲ್‌ ವಿತ ರಣೆಯ ಅವಕಾಶವನ್ನು ರಾಜ್ಯಗಳಿಗೆ ನೀಡಲಾಗಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ನೇತೃತ್ವದಲ್ಲಿ ಎರಡು ದಿನಗಳ 47ನೇ ಜಿಎಸ್‌ಟಿ ಮಂಡಳಿ ಸಭೆ ಮಂಗಳವಾರ ಆರಂಭವಾಗಿದ್ದು, ಸಚಿವರ ಸಮಿತಿಗಳು ಮಾಡಿರುವ ಮಧ್ಯಾಂತರ ಶಿಫಾರಸುಗಳನ್ನು ಮೊದಲ ದಿನವೇ ಅಂಗೀಕರಿಸಲಾಗಿದೆ.

ದರ ಪರಿಷ್ಕರಣೆ, ಜಿಎಸ್‌ಟಿ ವ್ಯವಸ್ಥೆ ಸುಧಾರಣೆ ಮತ್ತು ಚಿನ್ನ ಹಾಗೂ ಅಮೂಲ್ಯ ಹರಳುಗಳ ಸಾಗಣೆಗೆ ಸಂಬಂಧಿಸಿ ಪರಿಶೀಲಿಸಲು ಮೂರು ಸಚಿವರ ಸಮಿತಿಗಳನ್ನು ರಚಿಸಲಾಗಿತ್ತು. ಈ ಪೈಕಿ ದರ ಪರಿಷ್ಕರಣೆಗೆ ಸಂಬಂಧಿಸಿ ಶಿಫಾರಸು ಮಾಡುವ ಸಮಿತಿಯ ನೇತೃತ್ವವನ್ನು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಹಿಸಿದ್ದಾರೆ.

ಹೊಟೇಲ್‌ ವಾಸ್ತವ್ಯ, ಆಸ್ಪತ್ರೆ ರೂಂ ಬಾಡಿಗೆಗೆ ಇದ್ದ ತೆರಿಗೆ ವಿನಾಯಿತಿ ತೆಗೆದುಹಾಕಿ, ಜಿಎಸ್‌ಟಿ ವಿಧಿಸಬೇಕು ಎಂದು ಸಚಿವರ ಸಮಿತಿ ಶಿಫಾರಸು ಮಾಡಿತ್ತು. ಅದಕ್ಕೆ ಮಂಡಳಿ ಒಪ್ಪಿಗೆ ಸೂಚಿಸಿದೆ.

ಇ-ವೇ ಬಿಲ್‌ಗೆ ಅನುಮತಿ
ಚಿನ್ನ, ಆಭರಣ ಮತ್ತು ಅಮೂಲ್ಯ ಹರಳುಗಳ ಕಳ್ಳಸಾಗಣೆ ತಪ್ಪಿಸುವ ನಿಟ್ಟಿನಲ್ಲಿ ಇ-ವೇ ಬಿಲ್‌ ವಿತರಿಸಲು ರಾಜ್ಯಗಳಿಗೆ ಜಿಎಸ್‌ಟಿ ಮಂಡಳಿ ಅನುಮತಿ ನೀಡಿದೆ. ಅದರಂತೆ ರಾಜ್ಯದೊಳಗೆ ಇವುಗಳ ಸಾಗಣೆ ಮಾಡುವುದಿದ್ದರೆ ಎಲೆಕ್ಟ್ರಾನಿಕ್‌ ಬಿಲ್‌ ಕಡ್ಡಾಯವಾಗಲಿದೆ. ಆದರೆ ಎಷ್ಟು ಮೊತ್ತದ ಸರಕುಗಳಿಗೆ ಈ ಬಿಲ್‌ ಕಡ್ಡಾಯ ಎಂಬುವುದನ್ನು ನಿರ್ಧರಿಸುವ ಅಧಿಕಾರವನ್ನು ರಾಜ್ಯಗಳಿಗೆ ನೀಡಲಾಗಿದೆ.

ರಾಜ್ಯಗಳಿಗೆ ಪರಿಹಾರ;
ಇಂದು ನಿರ್ಧಾರ
ರಾಜ್ಯಗಳಿಗೆ ನೀಡಲಾಗುವ ಜಿಎಸ್‌ಟಿ ಪರಿಹಾರ ಮೊತ್ತದ ಅವಧಿಯನ್ನು ವಿಸ್ತರಣೆ ಮಾಡಬೇಕು ಎಂಬ ಪ್ರಮುಖ ಕೋರಿಕೆಗೆ ಸಂಬಂಧಿಸಿದ ಚರ್ಚೆ ಬುಧವಾರ ನಡೆಯಲಿದೆ. ಒಂದೋ ಆದಾಯ ಹಂಚಿಕೆಯ ವಿಧಾನವನ್ನು ಬದಲಿಸಬೇಕು ಅಥವಾ ರಾಜ್ಯಗಳಿಗೆ ಇನ್ನೂ 5 ವರ್ಷಗಳ ಕಾಲ ಜಿಎಸ್‌ಟಿ ಪರಿಹಾರ ಒದಗಿಸಬೇಕು ಎಂದು ವಿಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳು ಆಗ್ರಹಿಸಿವೆ. ಇದೇ ವೇಳೆ ಕ್ಯಾಸಿನೋಗಳು, ಆನ್‌ಲೈನ್‌ ಗೇಮ್‌ಗಳು ಮತ್ತು ಕುದುರೆ ರೇಸ್‌ ಮೇಲೆ ಶೇ. 28ರಷ್ಟು ಜಿಎಸ್‌ಟಿ ವಿಧಿಸಬೇಕೇ ಬೇಡವೇ ಎಂಬ ನಿರ್ಧಾರವೂ ಬುಧವಾರವೇ ಹೊರಬೀಳಲಿದೆ. ಸಭೆಯ ಬಳಿಕ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಪತ್ರಿಕಾಗೋಷ್ಠಿ ನಡೆಸಿ ಎಲ್ಲ ವಿವರಗಳನ್ನು ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನು ಯಾವುದಕ್ಕೆಲ್ಲ
ತೆರಿಗೆ ವಿನಾಯಿತಿ ಇಲ್ಲ ?
-ದಿನಕ್ಕೆ 1,000 ರೂ.ಗಳಿಗಿಂತ ಕಡಿಮೆ ಬಾಡಿಗೆ ಇರುವ ಹೊಟೇಲ್‌ ರೂಂಗಳಿಗೆ ಇನ್ನು ತೆರಿಗೆ ವಿನಾಯಿತಿ ಇರುವುದಿಲ್ಲ. ಈ ಕೊಠಡಿಗಳಿಗೆ ಶೇ. 12ರಷ್ಟು ತೆರಿಗೆ ಪಾವತಿಸಬೇಕು.
-ಆಸ್ಪತ್ರೆ ಕೊಠಡಿಯ (ಐಸಿಯು ಹೊರತುಪಡಿಸಿ) ಬಾಡಿಗೆ ದಿನಕ್ಕೆ 5 ಸಾವಿರ ರೂ.ಗಿಂತ ಹೆಚ್ಚಿದ್ದರೆ ಆ ಬಾಡಿಗೆಯ ಮೇಲೆ ಶೇ. 5ರಷ್ಟು ಜಿಎಸ್‌ಟಿ ಪಾವತಿಸಬೇಕು
-ಅಂಚೆ ಕಚೇರಿಯ ಎಲ್ಲ ಸೇವೆಗಳಿಗೂ ಶೇ. 18ರಷ್ಟು ಜಿಎಸ್‌ಟಿ ಪಾವತಿಸಬೇಕು.
-ಚೆಕ್‌ಗಳಿಗೆ (ಬಿಡಿ ಅಥವಾ ಬುಕ್‌ ಮಾದರಿಯವು) ಶೇ. 18 ಜಿಎಸ್‌ಟಿ
-ವಸತಿ ಬಳಕೆಗಾಗಿ ಉದ್ದಿಮೆಗಳು ತಮ್ಮ ವಸತಿ ಕಟ್ಟಡಗಳನ್ನು ಬಾಡಿಗೆ ನೀಡಿದ್ದರೆ ಅದಕ್ಕೆ ಇದ್ದ ವಿನಾಯಿತಿ ರದ್ದು
-ಬ್ಲಿಡ್‌ಬ್ಯಾಂಕ್‌ಗಳಿಗೆ ನೀಡಲಾಗಿದ್ದ ತೆರಿಗೆ ವಿನಾಯಿತಿ ವಾಪಸ್‌
-ದಿನಕ್ಕೆ 5 ಸಾವಿರ ರೂ.ಗಿಂತ ಹೆಚ್ಚು ಬಾಡಿಗೆಯುಳ್ಳ ಸಾರ್ವಜನಿಕ ಧಾರ್ಮಿಕ ಕೇಂದ್ರಗಳು, ಮಾಸಿಕ 2,500 ರೂ.ಗಳಿಗಿಂತ ಹೆಚ್ಚು ಬಾಡಿಗೆಯಿರುವ ಮಳಿಗೆಗಳಿಗೆ ಇದ್ದ ವಿನಾಯಿತಿಯೂ ರದ್ದು

ತೆರಿಗೆ ಬದಲಾವಣೆ
ಶೇ. 12ರಿಂದ ಶೇ. 18ರ ಸ್ಲಾéಬ್‌ಗ
-ಮುದ್ರಣ, ಬರಹ/ಚಿತ್ರಕಲೆಯ ಶಾಯಿ
-ಎಲ್‌ಇಡಿ ದೀಪಗಳು, ಎಲ್‌ಇಡಿ ಲ್ಯಾಂಪ್‌ ಶೇ. 5ರಿಂದ ಶೇ. 18ರ ಸ್ಲ್ಯಾಬ್ ಗೆ
-ಸೋಲಾರ್‌ ವಾಟರ್‌ ಹೀಟರ್‌
-ಚರ್ಮದ ಸಿದ್ಧ ಉತ್ಪನ್ನಗಳು
-ಸರಕಾರಕ್ಕೆ ಒದಗಿಸಲಾದ ಗುತ್ತಿಗೆ ಕೆಲಸ
-ಟೈಲರಿಂಗ್‌ ಅಥವಾ ಜವುಳಿಗೆ ಸಂಬಂಧಿಸಿದ ಇತರ ಕೆಲಸಗಳು

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.