ತೈಲ ಉತನ್ನ ಜಿ ಎಸ್ ಟಿಗೆ? : ಹೀಗಾದ್ರೆ ಪೆಟ್ರೋಲ್ ದರ 75 ರೂ.ಗಳಿಗೆ ಇಳಿಕೆಯಾಗುತ್ತದೆಯಂತೆ
Team Udayavani, Sep 15, 2021, 8:55 AM IST
ನವದೆಹಲಿ : ತೈಲ ದರ ಏರಿಕೆಯಿಂದ ಜನತೆ ಕಂಗಾಲಾಗಿರುವಂತೆಯೇ, ಪೆಟ್ರೋಲ್ ಮತ್ತು ಡೀಸೆಲ್ ಅನ್ನೂ ಜಿಎಸ್ಟಿ ವ್ಯಾಪ್ತಿಗೆ ತರುವ ಕುರಿತು ಪರಿಶೀಲನೆ ನಡೆಸಲು ಜಿಎಸ್ಟಿ ಮಂಡಳಿ ಮುಂದಾಗಿದೆ. ಒಂದು ವೇಳೆ, ಇದು ಸಾಧ್ಯವಾದರೆ ಆರ್ಥಿಕ ತಜ್ಞರ ಪ್ರಕಾರ, ಪೆಟ್ರೋಲ್ ದರ 75 ರೂ.ಗಳಿಗೆ ಇಳಿಕೆಯಾಗಲಿದೆ.
ರಾಷ್ಟ್ರಮಟ್ಟದಲ್ಲಿ ಪೆಟ್ರೋಲಿಯಂ ಉತ್ಪನ್ನಗಳಿಗೆ ಸಮಾನ ತೆರಿಗೆ ವಿಧಿಸುವ ಮೂಲಕ, ಗ್ರಾಹಕರಿಗೆ ಹೊರೆ ತಪ್ಪಿಸುವ ಕುರಿತು ಸರಕು ಮತ್ತು ಸೇವಾ ತೆರಿಗೆಗೆ ಸಂಬಂಧಿಸಿದ ಸಚಿವರ ಸಮಿತಿಯು ಪರಿಶೀಲಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದ ಸಮಿತಿಯು ಶುಕ್ರವಾರ ನಡೆ ಯುವ ಸಭೆಯಲ್ಲಿ ಈ ಪ್ರಸ್ತಾಪದ ಕುರಿತು ಚರ್ಚಿಸುವ ಸಾಧ್ಯತೆಯಿದೆ. ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರುವ ಕುರಿತು ಚಿಂತನೆ ನಡೆಸುವಂತೆ ಇತ್ತೀಚೆಗೆ ಕೇರಳ ಹೈಕೋರ್ಟ್ಸಲಹೆ ನೀಡಿರುವುದು ಕೂಡ ಮಂಡಳಿಯ ಈ ನಿರ್ಧಾರಕ್ಕೆ ಕಾರಣ ಎನ್ನಲಾಗಿದೆ. ಆದರೆ, ಈ ಕುರಿತು ವಿತ್ತ ಸಚಿವಾಲಯ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
2 ಲಕ್ಷ ಕೋಟಿ ರೂ. ನಷ್ಟ: ಜಿಎಸ್ಟಿ ವ್ಯವಸ್ಥೆ ಯಲ್ಲಿ ಯಾವುದೇ ಬದಲಾವಣೆ ಆಗಬೇಕಿದ್ದರೂ, ಸಮಿತಿಯಲ್ಲಿ ನಾಲ್ಕನೇ ಮೂರರಷ್ಟು ಬೆಂಬಲ ಸಿಗ ಬೇಕು. ಸಮಿತಿಯಲ್ಲಿ ಎಲ್ಲ ರಾಜ್ಯಗಳು/ ಕೇಂದ್ರಾ ಡಳಿತ ಪ್ರದೇಶಗಳ ಪ್ರತಿನಿಧಿಗಳಿದ್ದು, ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಗೆ ತಂದರೆ, ಕೇಂದ್ರ ಮತ್ತು ರಾಜ್ಯ ಗಳ ಬಹು ದೊಡ್ಡ ಆದಾಯ ಮೂಲಕ್ಕೆ ಕೊಕ್ಕೆ ಬೀಳು ತ್ತದೆ. ಸಂಗ್ರಹಿಸಿದ ತೆರಿಗೆಯೂ ಕೇಂದ್ರಕ್ಕೇ ಹೋಗು ತ್ತದೆ. ಹೀಗಾಗಿಯೇ ರಾಜ್ಯ ಸರ್ಕಾರಗಳು ಇದಕ್ಕೆ ಒಪ್ಪಿಗೆ ನೀಡುವ ಸಾಧ್ಯತೆ ಕಡಿಮೆ. ಜತೆಗೆ ಜಿಎಸ್ಟಿ ವ್ಯಾಪ್ತಿಗೆ ಬಂದರೆ, ರಾಜ್ಯಗಳಿಗೆ 2 ಲಕ್ಷ ಕೋಟಿ ರೂ. ಆದಾಯ ನಷ್ಟವಾಗುತ್ತದೆ. ಈಗ ಪೆಟ್ರೋಲಿಯಂ ಉತ್ಪನ್ನಗಳಿಗೆ ಶೇ.60ರಷ್ಟು ತೆರಿಗೆ ವಿಧಿಸಲಾಗುತ್ತದೆ. ಜಿಎಸ್ಟಿ ವ್ಯಾಪ್ತಿಗೆ ಒಳಪಟ್ಟರೆ, ಈ ತೆರಿಗೆ ಪ್ರಮಾಣ ಶೇ.28ಕ್ಕಿಳಿಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ