ಜಿಎಸ್ಟಿಯಿಂದಾಗಿ ಕರ್ನಾಟಕದಲ್ಲಿ ಅವ್ಯವಸ್ಥೆ
Team Udayavani, Sep 9, 2017, 11:15 AM IST
ಹೊಸದಿಲ್ಲಿ: ಸರಿಯಾಗಿ ಸಿದ್ಧತೆ ಮಾಡಿಕೊಳ್ಳದೇ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿ ಮಾಡಿದ್ದರಿಂದ ರಾಜ್ಯಗಳಲ್ಲಿ ಭಾರೀ ಅವ್ಯವಸ್ಥೆ ಸೃಷ್ಟಿಯಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ದಿಲ್ಲಿಯಲ್ಲಿ ಶುಕ್ರವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ರಾಜ್ಯದ ಕೃಷಿ ಸಚಿವ ಕೃಷ್ಣ ಬೈರೇಗೌಡ, ಪಂಜಾಬ್ನ ವಿತ್ತ ಸಚಿವ ಮನ್ಪ್ರೀತ್ ಬಾದಲ್ ಹಾಗೂ ಕಾಂಗ್ರೆಸ್ ಮಾಧ್ಯಮ ವಿಭಾಗದ ಉಸ್ತುವಾರಿ ರಣ್ದೀಪ್ ಸುರ್ಜೆವಾಲ ಅವರು, ಶನಿವಾರದ ಜಿಎಸ್ಟಿ ಮಂಡಳಿಯ ಸಭೆ ಬಗ್ಗೆ ಮಾತನಾಡಿದ್ದಾರೆ. ಸಿದ್ಧತೆಯಿಲ್ಲದೇ ಅವಸರದಲ್ಲಿ ಜಿಎಸ್ಟಿ ಜಾರಿ ಮಾಡಿದ ಪರಿಣಾಮ ರಾಜ್ಯಗಳು ಸಂಕಷ್ಟ ಅನುಭವಿಸುವಂತಾಗಿದೆ. ಜುಲೈ ತಿಂಗಳಿನಲ್ಲಿ ಕರ್ನಾಟಕದ ಆದಾಯ 600 ಕೋಟಿ ರೂ. ಇಳಿಕೆಯಾಗಿದೆ ಎಂದು ಆರೋಪಿಸಿದ್ದಾರೆ. ಪಂಜಾಬ್ನಲ್ಲಿ 800 ಕೋಟಿ ಆದಾಯ ಖೋತಾ ಆಗಿದೆ ಎಂದ ಅಲ್ಲಿನ ವಿತ್ತ ಸಚಿವ ಮನ್ಪ್ರೀತ್ ಬಾದಲ್ ಅವರು ಆರೋಪಿಸಿದ್ದಾರೆ. ಜುಲೈನಲ್ಲಿ 1,650 ಕೋಟಿ ರೂ. ಆದಾಯ ನಿರೀಕ್ಷಿಸಲಾಗಿತ್ತು. ಆದರೆ ಕೇವಲ 840 ಕೋ. ರೂ. ಆದಾಯ ಮಾತ್ರ ಬಂದಿದೆ ಎಂದು ಹೇಳಿದ್ದಾರೆ.
ಕೇಂದ್ರ ಸರಕಾರ ಗುಜರಾತ್ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಏಕಾಏಕಿ ಜಿಎಸ್ಟಿ ಜಾರಿ ಮಾಡಿದೆ. ಅಲ್ಲದೆ ಜಿಎಸ್ಟಿಯಿಂದ ಕೇಂದ್ರ ಸರಕಾರಕ್ಕೆ ಭಾರೀ ಆದಾಯ ಬಂದಿದ್ದು, ಅದನ್ನು ಹಾಗೆಯೇ ಇರಿಸಿಕೊಂಡು ಕುಳಿತಿದೆ. ಆದರೆ ರಾಜ್ಯಗಳು ಪಡಬಾರದ ಕಷ್ಟ ಅನುಭವಿಸುತ್ತಿವೆ ಎಂದು ಬಾದಲ್ ಆರೋಪಿಸಿದ್ದಾರೆ. ಹೀಗಾಗಿ ಶನಿವಾರ ನಡೆಯಲಿರುವ ಜಿಎಸ್ಟಿ ಮಂಡಳಿಯಲ್ಲಿ ಈ ಬಗ್ಗೆ ಪ್ರಸ್ತಾವಿಸಲಿದ್ದೇವೆ ಎಂದು ಈ ಸಚಿವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ