ಜಿಎಸ್‌ಟಿ ಹೆಸರಲ್ಲಿ ಸುಲಿಗೆ ತಡೆಗೆ ನಿಗಾ


Team Udayavani, Jul 9, 2017, 4:00 AM IST

GST.jpg

ಹೊಸದಿಲ್ಲಿ / ಬೆಂಗಳೂರು: ಕೇಂದ್ರ ಸರಕಾರ ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಅಡಿಯಲ್ಲಿ ಪ್ರಕಟ ಮಾಡಿ ರುವ ರಿಯಾಯಿತಿಗಳನ್ನು ಗ್ರಾಹಕರಿಗೆ ವರ್ಗಾಯಿಸದೆ ಇರುವ, ಟ್ಯಾಕ್ಸ್‌ ಹೆಸರಿನಲ್ಲಿ ದುಬಾರಿ ಹಣ ಸುಲಿಗೆ ಮಾಡುವ ಮಳಿಗೆ, ಹೊಟೇಲ್‌, ಮಾಲ್‌ಗ‌ಳಿಗೆ ಎಚ್ಚರ !

ಜಿಎಸ್‌ಟಿ ನೆಪದಲ್ಲಿ ದಂಧೆಗಿಳಿದಿರುವವರ ವಿರುದ್ಧ ಕಠಿನ ಕ್ರಮಕ್ಕೆ ಕೇಂದ್ರ ನಿರ್ಧ ರಿಸಿದೆ. ಅದಕ್ಕಾಗಿ 200 ಮಂದಿ ಐಎಎಸ್‌, ಐಆರ್‌ಎಸ್‌ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಅವರು ಪ್ರಮುಖ ನಗರ, ಪಟ್ಟಣಗಳಿಗೆ ಭೇಟಿ ನೀಡಲಿದ್ದು, ಸರಕಾರ ನಿಗದಿ ಮಾಡಿದ ದರವನ್ನು ಮಳಿಗೆಗಳಲ್ಲಿ ಅನುಸರಿಸಲಾಗುತ್ತದೆಯೋ ಇಲ್ಲವೋ ಎನ್ನು
ವುದನ್ನು ಪರಿಶೀಲಿಸಲಿದ್ದಾರೆ. ಹಿರಿಯ ಅಧಿಕಾರಿಗಳು ಮಾರುಕಟ್ಟೆಗಳಲ್ಲಿ ದೈನಂದಿನ ಅಗತ್ಯಕ್ಕೆ ಬೇಕಾದ ವಸ್ತುಗಳ ಕೊರತೆ ಇದೆಯೋ? ಇಲ್ಲವೋ? ಎಂಬ ಬಗ್ಗೆ ಖಚಿತ ಮಾಡಿಕೊಳ್ಳಲಿದ್ದಾರೆ.

ಜಂಟಿ ಕಾರ್ಯದರ್ಶಿ ಹಂತದ 200 ಅಧಿ ಕಾರಿಗಳ ತಂಡದಲ್ಲಿ ಕರ್ನಾಟಕ ಶ್ರೇಣಿಯ ಶ್ರೀನಿವಾಸ್‌, ವಂದನಾ ಗುರ್ನಾನಿ, ಬಿ.ಎಚ್‌.ಅನಿಲ್‌ಕುಮಾರ್‌ ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕದ ವಸ್ತುಸ್ಥಿತಿ ಕುರಿತು ಆಯಾ ದಿನದ ಮಾಹಿತಿ ಪಡೆದು ಕೇಂದ್ರ ಸರಕಾರಕ್ಕೆ ರವಾನೆ ಮಾಡುತ್ತಾರೆ. ಜಿಎಸ್‌ಟಿ ಅನುಷ್ಠಾನದಲ್ಲಿ ಎದುರಾಗುವ ಸವಾಲು, ವ್ಯಾಪಾರಿಗಳು, ಉದ್ದಿಮೆದಾರರಲ್ಲಿರುವ ಗೊಂದಲ, ಸಾರ್ವಜನಿಕರ ಪ್ರತಿಕ್ರಿಯೆ ಮತ್ತು ಅವರು ಎದುರಿಸುತ್ತಿರುವ ಪರಿಣಾಮ ಇವೆಲ್ಲದರ ಬಗ್ಗೆಯೂ ಅಧ್ಯಯನವನ್ನೂ  ಈ ಮೂವರು ಮಾಡಲಿದ್ದಾರೆ.

ದೇಶಾದ್ಯಂತ ಈ ತಂಡ ಭೇಟಿ ನೀಡಲಿದೆ. “ಸರಕಾರ ಹೊಸ ತೆರಿಗೆ ವ್ಯವಸ್ಥೆ ಅಡಿ ಜಾರಿಗೆ ತಂದಿರುವ ರಿಯಾಯಿತಿಗಳು ಸಿಗುತ್ತಿಲ್ಲ ಎಂದು ಸಾರ್ವಜನಿಕರು ದೂರಿತ್ತಿದ್ದಾರೆ. ಹೀಗಾಗಿ ಅವುಗಳನ್ನು ಗಂಭೀರವಾಗಿಯೇ ಪರಿಗಣಿಸಲಾಗಿದೆ’ ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ ಪ್ರಕಾರ ಕೆಲವು ವರ್ತಕರು ತಮ್ಮ ಮಳಿಗೆಗಳಲ್ಲಿ ಬಿಲ್‌ ನೀಡುತ್ತಿಲ್ಲ. ವಸ್ತುಗಳನ್ನು ಒಂದು ತಿಂಗಳ ಹಿಂದೆಯೇ ಮಾರಾಟ ಮಾಡಿದಂತೆ ಬಿಲ್‌ ಸೃಷ್ಟಿಸುವುದು ಸಹಿತ ಹಲವು ವಂಚನೆ ನಡೆಸುತ್ತಿದ್ದಾರೆ ಎಂಬ ಅಂಶ ಪತ್ತೆ ಯಾಗಿದೆ. ಹೊಸ ತೆರಿಗೆ ವ್ಯವಸ್ಥೆ ಜಾರಿಯಾದ ನಾಲ್ಕು ದಿನಗಳಲ್ಲಿ ಈ ಅಂಶ ಪತ್ತೆಯಾಗಿದೆ ಎಂದು ಆ ಅಧಿಕಾರಿ ಹೇಳಿದ್ದಾರೆ.

ಹಣಕಾಸು  ಕ್ಷೇತ್ರದ ತಜ್ಞರು ಹೇಳುವ ಪ್ರಕಾರ ಇಂಥ ಕಠಿನ ಕ್ರಮಗಳನ್ನು ಅನು ಸರಿಸಲು ವಾಸ್ತವವಾಗಿ ಕಷ್ಟ. ಏಕೆಂದರೆ ಕಂಪೆನಿಗಳು ಮತ್ತು ಚಿಲ್ಲರೆ ಮಾರಾಟಗಾರರು ಈ ಕ್ರಮದ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಜಿಲ್ಲಾ ಮಟ್ಟದಲ್ಲಿ ತಪಾಸಣೆ
ಬೆಂಗಳೂರು: ಜಿಎಸ್‌ಟಿ ವ್ಯವಸ್ಥೆಯನ್ನು ಸಮರ್ಪಕ ಜಾರಿಗೆ  ತರಲು ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಜಿಲ್ಲಾ ಮಟ್ಟದಲ್ಲಿ ತಪಾಸಣೆ  ಆರಂಭಿಸಿದೆ.

ಜಿಲ್ಲಾ ಮಟ್ಟದ ಸ್ಥಳೀಯ ಜಿಎಸ್‌ಟಿ ಕಚೇರಿ ವ್ಯಾಪ್ತಿಯಲ್ಲಿ ತಪಾಸಣೆ ಆರಂಭಿಸಲಾಗಿದ್ದು, ಸಹಾ ಯಕ ಆಯುಕ್ತರು, ವಾಣಿಜ್ಯ ತೆರಿಗೆ ಅಧಿಕಾರಿಗಳ ತಂಡ ತಮ್ಮ ಸುಪರ್ದಿಯ ವಾಣಿಜ್ಯ-ವಹಿವಾಟು ಸ್ಥಳಗಳಿಗೆ ಭೇಟಿ ನೀಡಿ ಬಿಲ್‌ ಹಾಕಲಾಗುತ್ತಿದೆಯೇ ಇಲ್ಲವೇ? ಹಾಕುತ್ತಿರುವುದೇ ಆದರೆ ಸರಿಯಾಗಿ ಹಾಕಲಾಗುತ್ತಿದೆಯಾ? ಮಾಹಿತಿ ಕೊರತೆಯಿಂದ ತಪ್ಪಾಗುತ್ತಿದೆಯಾ? ಅಥವಾ ಉದ್ದೇಶಪೂರ್ವಕವಾಗಿ ತಪ್ಪಾಗುತ್ತಿದೆಯಾ? ಎಂಬಿತ್ಯಾದಿ ವಿಷಯಗಳ ಬಗ್ಗೆ ತಪಾಸಣೆ ನಡೆಸುತ್ತಿದೆ.

ಮೊದಲ ಹಂತದಲ್ಲಿ ಲೋಪ ಆಗಿದ್ದರೂ ದಂಡ ಹಾಕದೆ ಮಾಹಿತಿ ನೀಡಿ ತಪ್ಪು ಮಾಡದಂತೆ ಎಚ್ಚರಿಕೆ ನೀಡುವ ಹಾಗೂ ಗೊಂದಲ, ಅನುಮಾನ ಇದ್ದರೆ ಪರಿಹರಿಸುವ ಕೆಲಸ ನಡೆಯುತ್ತಿದೆ. ಜಿಲ್ಲಾ ಮಟ್ಟದಲ್ಲಿ ಎದುರಾಗುವ ಗೊಂದಲ ಮತ್ತು ಸವಾಲುಗಳ ಬಗ್ಗೆ ರಾಜ್ಯ ಮಟ್ಟದಲ್ಲಿ ರಚನೆಯಾಗಿ ರುವ ನಿಗಾ ತಂಡ ಮಾಹಿತಿ ಪಡೆದು ಕಾಲ ಕಾಲಕ್ಕೆ ಸಲಹೆ-ಸೂಚನೆ ನೀಡುತ್ತಿದೆ. ಸ್ಪಷ್ಟ ಚಿತ್ರಣ ಸಿಗಬೇಕಾದರೆ  ಆ. 20ರ  ವರೆಗೂ ಕಾಯಲೇಬೇಕು. ವ್ಯಾಪಾರಸ್ಥರು, ಉದ್ದಿಮೆದಾರರು ಜುಲೈ ತಿಂಗಳ ವಹಿವಾಟಿನ ರಿಟರ್ನ್ಸ್ ಸಲ್ಲಿಕೆಗೆ ಆ. 20 ಕೊನೆಯ ದಿನ. ಹೀಗಾಗಿ, ಅಂದು ಜಿಎಸ್‌ಟಿ ಜಾರಿಯಿಂದ ತೆರಿಗೆ ಆದಾಯ ಹೆಚ್ಚಾಗಿದೆಯೇ/ಕಡಿಮೆಯಾಗಿದೆಯೇ ಎಂಬುದು ಗೊತ್ತಾಗಲಿದೆ.

ಈ ಹಿಂದೆ ರಾಜ್ಯದಲ್ಲಿ ವ್ಯಾಟ್‌ ವ್ಯವಸ್ಥೆಯಲ್ಲಿ ತಿಂಗಳಿಗೆ ಐದು ಸಾವಿರ ಕೋಟಿ ರೂ.ವರೆಗೆ ತೆರಿಗೆ ಸಂಗ್ರಹವಾಗುತ್ತಿತ್ತು. ಜಿಎಸ್‌ಟಿ ಜಾರಿ ಬಳಿಕ ಅದರ ಪ್ರಮಾಣ ಎಷ್ಟು ಎಂಬುದು ಆ. 20ಕ್ಕೆ ತಿಳಿಯಲಿದೆ. ಈಗ ಜಿಎಸ್‌ಟಿ ವ್ಯಾಪ್ತಿಗೆ ಸೇವಾ ಕ್ಷೇತ್ರವೂ ಒಳ ಗೊಂಡಿರುವುದರಿಂದ ಸಹಜವಾಗಿ ತೆರಿಗೆ ಪ್ರಮಾಣ ಹೆಚ್ಚಳವಾಗಲಿದೆ ಎಂಬ ನಿರೀಕ್ಷೆಯಿದೆ.

ಟಾಪ್ ನ್ಯೂಸ್

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.