
ಗುಜರಾತ್ ನಲ್ಲಿ 7ನೇ ಬಾರಿ ಅಧಿಕಾರದ ಗದ್ದುಗೆ ಏರಲು ಬಿಜೆಪಿ ಸಿದ್ಧತೆ; ಕಾಂಗ್ರೆಸ್ ಗೆ ತೀವ್ರ ಮುಖಭಂಗ!
Team Udayavani, Dec 8, 2022, 10:35 AM IST

ಅಹಮದಾಬಾದ್:ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಭರ್ಜರಿ ಮುನ್ನಡೆ ಸಾಧಿಸುವ ಮೂಲಕ ಸತತ ಏಳನೇ ಬಾರಿ ಅಧಿಕಾರದ ಗದ್ದುಗೆ ಏರಲು ಸಜ್ಜಾಗಿದೆ. ಗುರುವಾರ (ಡಿಸೆಂಬರ್ 08) ಬೆಳಗ್ಗೆ 8ಗಂಟೆಗೆ ಮತಎಣಿಕೆ ಆರಂಭಗೊಂಡಿದೆ.
ಇದನ್ನೂ ಓದಿ:ಸೋಲಿನ ಮೇಲೆ ಬರೆ: ನಾಯಕ ರೋಹಿತ್ ಸೇರಿ ಮೂವರು ತಂಡದಿಂದ ಔಟ್
182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಬಿಜೆಪಿ 145 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡು ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಕಾಂಗ್ರೆಸ್ 22 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, 9 ಸ್ಥಾನಗಳಲ್ಲಿ ಆಮ್ ಆದ್ಮಿ ಪಕ್ಷ ಮುನ್ನಡೆ ಸಾಧಿಸುವ ಮೂಲಕ ತನ್ನ ಛಾಪನ್ನು ಮೂಡಿಸಿದೆ.
ಕಳೆದ 27 ವರ್ಷಗಳಿಂದ ಅಧಿಕಾರದ ಗದ್ದುಗೆಯಲ್ಲಿರುವ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸುವತ್ತ ದಾಪುಗಾಲು ಇಟ್ಟಿದ್ದು, ಏಳನೇ ಬಾರಿ ಆಡಳಿತದ ಚುಕ್ಕಾಣಿ ಹಿಡಿಯಲು ಜನಾದೇಶ ದೊರಕಿದಂತಾಗಿದೆ.
182 ಸದಸ್ಯ ಬಲದ ಗುಜರಾತ್ ವಿಧಾನಸಭೆ ಅಧಿಕಾರದ ಗದ್ದುಗೆ ಏರಲು 92 ಸ್ಥಾನಗಳ ಅಗತ್ಯವಿದೆ. ಸದ್ಯದ ಟ್ರೆಂಡ್ ಪ್ರಕಾರ ಬಿಜೆಪಿ 150 ಸ್ಥಾನಗಳಲ್ಲಿ ಭಾರೀ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 18 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಎರಡನೇ ಸ್ಥಾನಕ್ಕೆ ಕುಸಿದಿದೆ.
ಬಲ ಕಳೆದುಕೊಂಡ ಕಾಂಗ್ರೆಸ್ ಪಡೆ:
2017ರಲ್ಲಿ ನಡೆದ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 99 ಸ್ಥಾನಗಳಲ್ಲಿ ಜಯಗಳಿಸಿ 6ನೇ ಬಾರಿ ಅಧಿಕಾರದ ಗದ್ದುಗೆ ಏರಿತ್ತು. ಕಾಂಗ್ರೆಸ್ ಪಕ್ಷ 77 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ಪ್ರಬಲ ವಿಪಕ್ಷವಾಗಿ ಹೊರಹೊಮ್ಮಿತ್ತು. ಆದರೆ 2022ರ ವಿಧಾನಸಭಾ ಚುನಾವಣೆಯಲ್ಲಿ ಬಲವೃದ್ಧಿಸಿಕೊಂಡಿರುವ ಆಡಳಿತಾರೂಢ ಬಿಜೆಪಿ 150 ಸ್ಥಾನಗಳಲ್ಲಿ ಭಾರೀ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಕೇವಲ 18 ಸ್ಥಾನಗಳಲ್ಲಷ್ಟೇ ಮುನ್ನಡೇ ಸಾಧಿಸಿ ಭಾರೀ ಮುಖಭಂಗ ಅನುಭವಿಸುವಂತಾಗಿದೆ.
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯ ನಡುವೆಯೇ ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಸಾಧನೆ ಪಕ್ಷವನ್ನು ತೀವ್ರ ಮುಜುಗರಕ್ಕೀಡು ಮಾಡುವಂತಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಬಿಜೆಪಿ ದಾಖಲೆಯ ಆಡಳಿತ:
ಪಶ್ಚಿಮಬಂಗಾಳದಲ್ಲಿ ಸಿಪಿಎಂ ನೇತೃತ್ವದ ಎಡಪಕ್ಷಗಳು ಸತತ ಏಳು ಬಾರಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಗದ್ದುಗೆಗೆ ಏರಿ ದಾಖಲೆ ನಿರ್ಮಿಸಿತ್ತು. ಇದೀಗ ಗುಜರಾತ್ ನಲ್ಲಿಯೂ ಭಾರತೀಯ ಜನತಾ ಪಕ್ಷ ಏಳನೇ ಬಾರಿ ಆಡಳಿತ ನಡೆಸುವ ಮೂಲಕ ದಾಖಲೆ ಬರೆದಂತಾಗಲಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪತ್ರಕರ್ತನನ್ನು ಮರಕ್ಕೆ ಕಟ್ಟಿ ಥಳಿಸಿದ ಕಿಡಿಗೇಡಿಗಳು: ಆರು ಮಂದಿಯ ಬಂಧನ

ಅಂಬೇಡ್ಕರ್ ಮತ್ತು ಮಹಾ ಆಘಾಡಿಯ ನಡುವೆ ಯಾವುದೇ ಮಾತುಕತೆ ನಡೆದಿಲ್ಲ: ಪವಾರ್

ವಂದೇ ಭಾರತ್ ರೈಲಿನೊಳಗೆ ಕಸದ ರಾಶಿ: ಫೋಟೋ ವೈರಲ್

ರಾಷ್ಟ್ರಪತಿ ಭವನದ ‘ಮೊಘಲ್ ಗಾರ್ಡನ್ ‘ ಇನ್ನು ‘ಅಮೃತ್ ಉದ್ಯಾನ್’ ಆಗಿ ಮರುನಾಮಕರಣ

ತ್ರಿಪುರಾ ವಿಧಾನಸಭಾ ಚುನಾವಣೆ: 48 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಪತ್ರಕರ್ತನನ್ನು ಮರಕ್ಕೆ ಕಟ್ಟಿ ಥಳಿಸಿದ ಕಿಡಿಗೇಡಿಗಳು: ಆರು ಮಂದಿಯ ಬಂಧನ

ಜ. 29ರಂದು ಕಟಪಾಡಿ ಏಣಗುಡ್ಡೆಯಲ್ಲಿ ‘ಕೌಸ್ತುಭ ರೆಸಿಡೆನ್ಸಿ’ ಹೊಟೇಲ್, ವಾಣಿಜ್ಯ ಸಂಕೀರ್ಣ ಉದ್ಘಾಟನೆ

ಅಂಬೇಡ್ಕರ್ ಮತ್ತು ಮಹಾ ಆಘಾಡಿಯ ನಡುವೆ ಯಾವುದೇ ಮಾತುಕತೆ ನಡೆದಿಲ್ಲ: ಪವಾರ್

ವಂದೇ ಭಾರತ್ ರೈಲಿನೊಳಗೆ ಕಸದ ರಾಶಿ: ಫೋಟೋ ವೈರಲ್

ರಾಷ್ಟ್ರಪತಿ ಭವನದ ‘ಮೊಘಲ್ ಗಾರ್ಡನ್ ‘ ಇನ್ನು ‘ಅಮೃತ್ ಉದ್ಯಾನ್’ ಆಗಿ ಮರುನಾಮಕರಣ