ಗುಜರಾತ್ ಚುನಾವಣೆ: 70 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
Team Udayavani, Nov 17, 2017, 3:31 PM IST
ಅಹ್ಮದಾಬಾದ್ : ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ ಇಂದು ಶುಕ್ರವಾರ ಬಿಡುಗಡೆಗೊಳಿಸಿದೆ.
70 ಮಂದಿ ಅಭ್ಯರ್ಥಿಗಳನ್ನು ಒಳಗೊಂಡ ಈ ಪಟ್ಟಿಯಲ್ಲಿ ಮುಖ್ಯಮಂತ್ರಿ ವಿಜಯ್ ರೂಪಾಣಿ (ರಾಜ್ಕೋಟ್ ಪಶ್ಚಿಮ ಕ್ಷೇತ್ರದಿಂದ), ಉಪ ಮುಖ್ಯಮಂತ್ರಿ ನಿತಿನ್ಭಾಯ್ ಪಟೇಲ್ (ಮೆಹಸಾನಾ ಕ್ಷೇತ್ರ) ಮತ್ತು ಗುಜರಾತ್ ಬಿಜೆಪಿ ಅಧ್ಯಕ್ಷ ಜಿತುಭಾಯ್ ವಘಾನಿ (ಭಾವನಗರ ಪಶ್ಚಿಮ) ಅವರ ಹೆಸರುಗಳು ಸೇರಿವೆ.
ಈ ಪಟ್ಟಿಯಲ್ಲಿ ಕಾಂಗ್ರೆಸ್ ತೊರೆದು ಬಂದ 14 ಮಂದಿ ಕೂಡ ಸೇರಿದ್ದಾರೆ. ಈ ಮೊದಲ ಪಟ್ಟಿಯಲ್ಲಿರುವ ಅನೇಕರು ಹಾಲಿ ಶಾಸಕರಾಗಿದ್ದು ತಮ್ಮ ಕ್ಷೇತ್ರದಿಂದಲೇ ಕಣಕ್ಕಿಳಿಯಲಿದ್ದಾರೆ.
ಆಶ್ಚರ್ಯಕರವಾಗಿ ಮತ್ತು ಎಲ್ಲರ ಊಹೆಗೆ ವಿರುದ್ಧವಾಗಿ ಪತಿದಾರ್ ಅನಾಮತ್ ಆಂದೋಲನ್ ಸಮಿತಿ (ಪಾಸ್) ಸದಸ್ಯರಾದ ವರುಣ್ ಪಟೇಲ್ ಮತ್ತು ರೇಶ್ಮಾ ಪಟೇಲ್ ಅವರ ಹೆಸರು ಈ ಮೊದಲ ಪಟ್ಟಿಯಲ್ಲಿ ಸೇರಿಲ್ಲ.
ವಾಧ್ವಾನ್ ಕ್ಷೇತ್ರದ ಶಾಸಕಿ ವರ್ಷಾಬೆನ್ ದೋಷಿ ಮತ್ತು ಧರೀ ಕ್ಷೇತ್ರದ ಬಿಜೆಪಿ ಶಾಸಕ ನಳಿನ್ ಕೊಟಾಡಿಯಾ ಅವರನ್ನು ಕೈಬಿಡಲಾಗಿದೆ. ಇವರ ಬದಲಿಗೆ ಧನಜೀ ಭಾಯ್ ಪಟೇಲ್ ವಾಧ್ವಾನ್ ಕ್ಷೇತ್ರದಿಂದಲೂ, ದಿಲೀಪ್ ಸಂಘಾನಿ ಧರೀ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ.
ಈ ಮೊದಲ ಪಟ್ಟಿಯ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಭೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ರಾಜನಾಥ್ ಸಿಂಗ್, ಸುಶ್ಮಾ ಸ್ವರಾಜ್ ಮತ್ತು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಯ ಇತರ ಸದಸ್ಯರು ಪಾಲ್ಗೊಂಡಿದ್ದರು.
ಗುಜರಾತ್ ವಿಧಾನಸಭಾ ಚುನಾವಣೆ ಡಿಸೆಂಬರ್ನಲ್ಲಿ ಎರಡು ಹಂತಗಳಲ್ಲಿ ನಡೆಯಲಿದೆ. 89 ಸ್ಥಾನಗಳಿಗೆ ನಡೆಯುವ ಮೊದಲ ಹಂತದ ಚುನಾವಣೆಯು ಡಿ.9ರಂದು ಹಾಗೂ 93 ಸ್ಥಾನಗಳಿಗೆ ನಡೆಯುವ ಚುನಾವಣೆ ಡಿ.14ರಂದು ನಡೆಯಲಿದೆ.
ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ಡಿ.18ರಂದು ಪ್ರಕಟಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ