ಶೇ.60ರಷ್ಟು ಮತದಾನ: ಗುಜರಾತ್‌ನಲ್ಲಿ ಮೊದಲ ಹಂತ ಮುಕ್ತಾಯ


Team Udayavani, Dec 2, 2022, 6:50 AM IST

ಶೇ.60ರಷ್ಟು ಮತದಾನ: ಗುಜರಾತ್‌ನಲ್ಲಿ ಮೊದಲ ಹಂತ ಮುಕ್ತಾಯ

ಗಾಂಧಿನಗರ/ಅಹಮದಾಬಾದ್‌: ಬಹು ನಿರೀಕ್ಷಿತ ಗುಜರಾತ್‌ ವಿಧಾನಸಭೆ ಚುನಾವಣೆಯ ಮೊದಲ ಹಂತ ಗುರುವಾರ ಮುಕ್ತಾಯವಾಗಿದೆ. ಸೌರಾಷ್ಟ್ರ, ಕಛ್ ಮತ್ತು ದಕ್ಷಿಣ ಗುಜರಾತ್‌ನ 19 ಜಿಲ್ಲೆಗಳಲ್ಲಿನ 89 ಕ್ಷೇತ್ರಗಳಿಗೆ ಮತದಾನ ಹೆಚ್ಚು ಕಡಿಮೆ ಶಾಂತಿಯುತವಾಗಿ ಕೊನೆಗೊಂಡಿದೆ.

ಚುನಾವಣಾ ಆಯೋಗ ನೀಡಿದ ಪ್ರಾಥಮಿಕ ಹಂತದ ಮಾಹಿತಿ ಪ್ರಕಾರ ಶೇ.60.20ರಷ್ಟು ಹಕ್ಕು ಚಲಾವಣೆ ಆಗಿದೆ. ಒಟ್ಟು 788 ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. ಡಿ.5ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ಡಿ.8ರಂದು ಫ‌ಲಿತಾಂಶ ಪ್ರಕಟವಾಗಲಿದೆ.

ಕೆಲವೊಂದು ಸ್ಥಳಗಳಲ್ಲಿ ಇವಿಎಂಗಳು ಕೆಟ್ಟು ಹೋದ ಕಾರಣ ಮತದಾನ ವಿಳಂಬವಾಗಿ ಶುರುವಾದ ಘಟನೆಗಳು ನಡೆದಿವೆ. ಅವುಗಳ ಬದಲಾಗಿ ಬೇರೆ ಇವಿಎಂಗಳನ್ನು ಒದಗಿಸಿದ ಬಳಿಕ ಹಕ್ಕು ಚಲಾವಣೆ ಸುಗಮವಾಗಿ ನಡೆಯಿತು.

ಮತದಾನ ನಡೆದ ಜಿಲ್ಲೆಗಳ ಪೈಕಿ ನೋಡುವುದಿದ್ದರೆ ಭಾರಿ ಪ್ರಮಾಣದಲ್ಲಿ ಹಕ್ಕು ಚಲಾವಣೆಯಾಗಿದೆ. ತಪಿ ಜಿಲ್ಲೆಯಲ್ಲಿ ಸಂಜೆ 5 ಗಂಟೆಯ ವರೆಗಿನ ಮಾಹಿತಿ ಪ್ರಕಾರ ಶೇ.72.32 ಹಕ್ಕು ಚಲಾವಣೆಯಾಗಿದೆ. ಉಳಿದಂತೆ ಇತರ ಜಿಲ್ಲೆಗಳಲ್ಲಿಯೂ ಶೇ.60ಕ್ಕಿಂತ ಹೆಚ್ಚು ಮತದಾನವಾಗಿದೆ.

ಜಂಜೋಧ್‌ಪುರ ತಾಲೂಕಿನಲ್ಲಿ ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕ ಮತಗಟ್ಟೆಗಳನ್ನು ಸ್ಥಾಪಿಸಲಿಲ್ಲ ಎಂಬ ಕಾರಣಕ್ಕಾಗಿ ಮತದಾರರು ಕೆಲ ಕಾಲ ಪ್ರತಿಭಟನೆ ನಡೆಸಿದರು. ನಂತರ ಅವರ ಮನವೊಲಿಕೆ ನಡೆಸಿ ಪರಿಸ್ಥಿತಿಯನ್ನು ತಹಬದಿಗೆ ತರಲಾಯಿತು. ಜುನಾಗಡದಲ್ಲಿ ಮತಗಟ್ಟೆ ಕೇಂದ್ರಕ್ಕೆ ಕಾಂಗ್ರೆಸ್‌ ಮುಖಂಡರ ಪ್ರವೇಶವನ್ನು ಪೊಲೀಸರು ತಡೆದರು ಎಂಬ ಕಾರಣಕ್ಕೆ ಘರ್ಷಣೆ ನಡೆದಿದೆ.

ವೆಬ್‌ಕಾಸ್ಟಿಂಗ್‌ಗೆ ಆದೇಶ:

ಮತದಾನದ ವೇಳೆ ಪಾರದರ್ಶತೆ ಕಾಪಾಡುವ ನಿಟ್ಟಿನಲ್ಲಿ ಭಾರತದ ಚುನಾವಣಾ ಆಯೋಗ (ಇಸಿಐ) 13,065 ಮತಗಟ್ಟೆಗಳಲ್ಲಿನ ಹಕ್ಕು ಚಲಾವಣೆಯ ಪ್ರಕ್ರಿಯೆಯನ್ನು ನೇರ ವೆಬ್‌ಕಾಸ್ಟಿಂಗ್‌ಗೆ ಆದೇಶ ನೀಡಿತ್ತು. ಬೆಳಗ್ಗೆ 6.30ರಿಂದ ಮತದಾನ ಮುಕ್ತಾಯದ ವರೆಗೆ ಈ ಪ್ರಕ್ರಿಯೆ ನಡೆದಿತ್ತು ಎಂದು ಗುಜರಾತ್‌ನ ಮುಖ್ಯ ಚುನಾವಣಾ ಅಧಿಕಾರಿ ಪಿ.ಭಾರತಿ ಹೇಳಿದ್ದಾರೆ.

ಅತ್ಯುತ್ಸಾಹ:

ಮೊದಲ ಹಂತದ ಮತದಾನ ನಡೆದ 89 ಕ್ಷೇತ್ರಗಳಲ್ಲಿನ ಮತದಾರರು ಅತ್ಯುತ್ಸಾಹದಿಂದ ಹಕ್ಕು ಚಲಾವಣೆಯಲ್ಲಿ ಭಾಗವಹಿಸಿದ್ದರು. ಚುನಾವಣಾ ಆಯೋಗ 104 ವರ್ಷದ ರಾಮ್‌ಜಿ ಭಾಯ್‌ ಮತಗಟ್ಟೆಗೆ ಆಗಮಿಸಿ ಹಕ್ಕು ಚಲಾಯಿಸಿದ್ದ ಫೋಟೋ ಟ್ವೀಟ್‌ ಮಾಡಿದೆ.

ಗಮನ ಸಳೆದ ಅಭ್ಯರ್ಥಿಯ ಮೀಸೆ:

ಸಬರ್‌ಕಾಂತ ಜಿಲ್ಲೆಯ ಹಿಮಾಂತ್‌ನಗರ ಕ್ಷೇತ್ರದಿಂದ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿ ಮಗನ್‌ಭಾಯ್‌ ಸೋಲಂಕಿ ಅವರು ಹೊಂದಿರುವ ಭಾರೀ ಮೀಸೆ ಮತದಾರರ ಆಕರ್ಷಣೆಯಾಗಿತ್ತು. ಸೇನೆಯಲ್ಲಿ ಕರ್ತವ್ಯ ಸಲ್ಲಿಸಿ ನಿವೃತ್ತರಾಗಿರುವ ಅವರು 5 ಅಡಿ ದಪ್ಪದ ಮೀಸೆ ಹೊಂದಿದ್ದಾರೆ. ಅದನ್ನು ಅವರು ಅಚ್ಚುಕಟ್ಟಾಗಿ ಆರೈಕೆ ಮಾಡಿದ್ದಾರೆ. ನನ್ನ ಹಾಗೆ ದಪ್ಪ ಮೀಸೆ ಯಾರು ಬಿಡುತ್ತಾರೆಯೋ ಅವರಿಗೆ ಸರ್ಕಾರ ನಿರ್ವಹಣಾ ವೆಚ್ಚ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

 ಜಿಲ್ಲೆ        /    ಮತ ಪ್ರಮಾಣ (ಶೇ.)

ತಪಿ           /     72.32

ನವಾಸಿ        /       65.91

ದಂಗ್‌         /       64.84

ವಲ್ಸಾಡ್‌    /        62.46

ಗಿರ್‌ ಸೋಮನಾಥ್‌ / 60.46

ಭಾವನಗರ          /  51.34

 

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.