ಗುಜರಾತ್ ಚುನಾವಣ ಫಲಿತಾಂಶ 2024ರ ಸ್ಪಷ್ಟ ಸಂದೇಶ ರವಾನಿಸಿದೆ: ಅಮಿತ್ ಶಾ
ಪೊಳ್ಳು, ಸುಳ್ಳು ಮತ್ತು ಆಕರ್ಷಣೀಯ ಭರವಸೆಗಳನ್ನು ನೀಡುವವರಿಗೆ ಕಪಾಳಮೋಕ್ಷ...
Team Udayavani, Jan 15, 2023, 4:52 PM IST
ಅಹಮದಾಬಾದ್ : ಇತ್ತೀಚೆಗಷ್ಟೇ ನಡೆದ ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶವು ರಾಜ್ಯಕ್ಕೆ ಮಾತ್ರವಲ್ಲದೆ ಇಡೀ ದೇಶಕ್ಕೆ ಮಹತ್ವದ್ದಾಗಿದೆ. ಇದು 2024 ರಲ್ಲಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಿ ಆಯ್ಕೆಯಾಗುತ್ತಾರೆ ಎಂಬ ಸಂದೇಶವನ್ನು ರವಾನಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಹೇಳಿದ್ದಾರೆ.
ವಿರೋಧ ಪಕ್ಷವಾದ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ಕುರಿತು ಪರೋಕ್ಷವಾಗಿ ಉಲ್ಲೇಖಿಸಿದ ಶಾ, ಗುಜರಾತ್ನ ಜನರು ಭಾರತೀಯ ಜನತಾ ಪಕ್ಷಕ್ಕೆದಾಖಲೆ ಸಂಖ್ಯೆಯ ಸ್ಥಾನಗಳೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳಲು ಸಹಾಯ ಮಾಡುವ ಮೂಲಕ,ರಾಜ್ಯ ಮತ್ತು ಪ್ರಧಾನಿ ಮೋದಿ ಮಾನಹಾನಿ ಮಾಡಲು ಪ್ರಯತ್ನಿಸಿದವರಿಗೆ ಉತ್ತರಿಸಿದರು ಎಂದರು.
“ಗುಜರಾತ್ ಜನರು ಜಾತಿವಾದದ ವಿಷವನ್ನು ಕೊನೆಗೊಳಿಸಲು ಕೆಲಸ ಮಾಡಿದ್ದಾರೆ ಮತ್ತು ಪೊಳ್ಳು, ಸುಳ್ಳು ಮತ್ತು ಆಕರ್ಷಣೀಯ ಭರವಸೆಗಳನ್ನು ನೀಡುವವರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಗುಜರಾತ್ ಮತ್ತು ನರೇಂದ್ರ ಮೋದಿಯವರನ್ನು ದೂಷಿಸಲು ಯತ್ನಿಸಿದವರಿಗೆ ಗುಜರಾತ್ನ ಜನರು ತಕ್ಕ ಉತ್ತರ ನೀಡಿದ್ದಾರೆ ಎಂದರು.
“ಈ ಫಲಿತಾಂಶವು ಕೇವಲ ಗುಜರಾತ್ಗೆ ಮಾತ್ರವಲ್ಲ. 2024ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು ಇಡೀ ದೇಶ ಸನ್ನದ್ಧವಾಗಿದೆ. ಗುಜರಾತ್ನ ಈ ಸಂದೇಶವು ಕಾಶ್ಮೀರದಿಂದ ಕನ್ಯಾಕುಮಾರಿ ಮತ್ತು ದ್ವಾರಕಾದಿಂದ ಕಾಮಾಖ್ಯಕ್ಕೆ ತಲುಪಿದೆ. ಮೋದಿ ಸಾಹೇಬ್ 2024 ರಲ್ಲಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ” ಎಂದರು.
“ಒಂದು ಪಕ್ಷವು 27 ವರ್ಷಗಳ ಕಾಲ ನಿರಂತರ ಆಡಳಿತ ನಡೆಸಿದ ಒಂದೇ ಒಂದು ರಾಜ್ಯವಿಲ್ಲ. ಬಿಜೆಪಿ 27 ವರ್ಷ ಮತ್ತು ಅದಕ್ಕಿಂತ ಹೆಚ್ಚು ಕಾಲ ಆಡಳಿತ ನಡೆಸಿದ ಏಕೈಕ ರಾಜ್ಯ ಗುಜರಾತ್,” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ