ಅಂತಿಮ ಯಾತ್ರೆಗೆ ಎಸಿ ವಾಹನ! ಗುಜರಾತ್ನ ವಡೋದಾರ ಜಿಲ್ಲೆಯಲ್ಲಿ ಗ್ರಾಮದ ವ್ಯವಸ್ಥೆ
Team Udayavani, Sep 8, 2022, 7:50 AM IST
ವಡೋದರಾ: ಅಂತಿಮ ವಿಧಿ-ವಿಧಾನಗಳನ್ನು ನಡೆಸಲು ಶ್ಮಶಾನಕ್ಕೆ ಮೃತದೇಹವನ್ನು ಕೊಂಡೊಯ್ಯಲು ವಿಶೇಷವಾಗಿ ವಿನ್ಯಾಸಗೊಳಿಸಿರುವ ಏರ್ ಕಂಡೀಷನ್ ವಾಹನವನ್ನು ಗುಜರಾತ್ನ ವಡೋದರಾ ಜಿಲ್ಲೆಯ ಶಿನೋರ್ ತಾಲೂಕಿನ ಮೋಟಾ ಫೋಫಾಲಿಯಾ ಗ್ರಾಮದ ಗ್ರಾಮಸ್ಥರು ಬಳಸುತ್ತಿದ್ದಾರೆ. ಅಂತಿಮ ಯಾತ್ರೆಗೆ ಏಸಿ ವಾಹನ ಬಳಸುತ್ತಿರುವ ಗುಜರಾತ್ನ ಮೊದಲ ಗ್ರಾಮ ಇದಾಗಿದೆ.
ಶಕ್ತಿಕೃಪ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಶಿನೋರ್ ತಾಲೂಕಿನ ನಾಗರಿಕರ ಅನುಕೂಲಕ್ಕಾಗಿ ಈ ವಿಶೇಷ ಹವಾನಿಯಂತ್ರಿತ ಶವ ವಾಹನವನ್ನು ವ್ಯವಸ್ಥೆ ಮಾಡಲಾಗಿದೆ.
ಪೂರ್ಣ ಉಚಿತ:
ಮಡಿದವರ ಅಂತಿಮ ವಿಧಿ-ವಿಧಾನವನ್ನು ಘನತೆಯಿಂದ ನಡೆಸುವಂತಾಗಲು ಈ ವ್ಯವಸ್ಥೆ ಕಲ್ಪಿಸಲಾಗಿದೆ ಎಂದಿದ್ದಾರೆ ಶಕ್ತಿಕೃಪ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಜಿತುಭಾಯ್ ಪಟೇಲ್. “ಈ ಸೇವೆಯು ಸಂಪೂರ್ಣವಾಗಿ ಉಚಿತವಾಗಿದ್ದು, ಯಾರು ಬೇಕಾದರೂ ವಾಹನವನ್ನು ಈ ಕಾರ್ಯಕ್ಕಾಗಿ ಬಳಸಿಕೊಳ್ಳಬಹುದಾಗಿದೆ. ನಮ್ಮ ಟ್ರಸ್ಟ್ನಿಂದ ಈ ಪ್ರದೇಶದ ನಿವಾಸಿಗಳಿಗೆ ವೈದ್ಯಕೀಯ ಸೇವೆ ಕಲ್ಪಿಸಲಾಗಿದೆ.
ಈ ಮೊದಲು ಶ್ಮಶಾನಕ್ಕೆ ಶವವನ್ನು ಸಾಗಿಸಲು ಗ್ರಾಮಸ್ಥರು ಟ್ರ್ಯಾಕ್ಟರ್ಗಳನ್ನು ಬಳಸುತ್ತಿದ್ದರು. ತಮ್ಮ ಪ್ರೀತಿ ಪಾತ್ರರ ಅಂತಿಮ ವಿಧಿ-ವಿಧಾನವನ್ನು ಗೌರವದಿಂದ ನಡೆಸುವಂತಾಗಲು ಈ ರೀತಿ ವಿಶೇಷ ವಾಹನದ ವ್ಯವಸ್ಥೆ ಮಾಡಲಾಗಿದೆ,’ ಎಂದು ಟೇಲ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್