ಡೇರಾ ವಕ್ತಾರ ದಿಲಾವರ್ ಸಿಂಗ್ ಸೆರೆ, ಹನಿಪ್ರೀತ್ ಇನ್ನೂ ಭೂಗತ
Team Udayavani, Sep 15, 2017, 10:27 AM IST
ಚಂಡೀಗಢ : ವಿವಾದಾತ್ಮಕ ಸ್ವಘೋಷಿತ ದೇವಮಾನ, ಡೇರಾ ಸಚ್ಚಾ ಸೌಧಾ ಮುಖ್ಯಸ್ಥ, ಗುರ್ಮಿತ್ ರಾಮ್ ರಹೀಮ್ ಸಿಂಗ್ನ ನಿಕಟವರ್ತಿ, ಸಲಹೆಗಾರ, ದಿಲಾವಾರ್ ಸಿಂಗ್ ಇನ್ಸಾನ್ ನನ್ನು ಹರಿಯಾಣ ಪೊಲೀಸರು ಬಂಧಿಸಿದ್ದಾರೆ.
ಡೇರಾ ಮುಖ್ಯಸ್ಥನ ದತ್ತು ಪುತ್ರಿಯಾಗಿರುವ ಹನಿಪ್ರೀತ್ ಸಿಂಗ್ ಇನ್ನೂ ತಲೆಮರೆಸಿಕೊಂಡಿದ್ದು ಆಕೆಗಾಗಿ ಹರಿಯಾಣ ಪೊಲೀಸರು ವ್ಯಾಪಕ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಡೇರಾ ಮುಖ್ಯಸ್ಥ ರಾಮ್ ರಹೀಮ್ ಸಿಂಗ್ ಅತ್ಯಾಚಾರ ಅಪರಾಧಕ್ಕಾಗಿ ಕೋರ್ಟಿನಿಂದ 20 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ಸಂದರ್ಭದಲ್ಲಿ 40 ಅಮಾಯಕರ ಬಲಿಗೆ ಕಾರಣವಾದ ಭೀಕರ ಹಿಂಸೆಯನ್ನು ಹುಟ್ಟು ಹಾಕುವಲ್ಲಿ ದಿಲಾವರ್ ಸಿಂಗ್ ಇನ್ಸಾನ್ ಅತ್ಯಂತ ಮುಖ್ಯ ಪಾತ್ರ ವಹಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಡೇರಾ ಸಚ್ಚಾ ಸೌಧ ಇದರ ವಕ್ತಾರನಾಗಿರುವ ದಿಲಾವರ್ನನ್ನು ಪೊಲೀಸರು ಪಾಣಿಪತ್ನಲ್ಲಿ ನಿನ್ನೆ ಗುರುವಾರ ಬಂಧಿಸಿದರು. ಆತನನ್ನು ಇಂದು ಶುಕ್ರವಾರ ಪಂಚಕುಲ ಕೋರ್ಟಿನಲ್ಲಿ ಹಾಜರುಪಡಿಸಲಾಗುವುದು ಎಂದು ಹರಿಯಾಣ ಪೊಲೀಸ್ ಮಹಾ ನಿರ್ದೇಶಕ ಬಿ ಎಸ್ ಸಂಧು ತಿಳಿಸಿದ್ದಾರೆ.
ಕಳೆದ ಆಗಸ್ಟ್ 25ರಂದು ಗುರ್ಮಿತ್ ರಾಮ್ ರಹೀಮ್ ಸಿಂಗ್ಗೆ ವಿಶೇಷ ಸಿಬಿಐ ಕೋರ್ಟ್ ಇಪ್ಪತ್ತು ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿದ ಬೆನ್ನಿಗೇ ಆತನ ನಿಕಟವರ್ತಿ, ವಕ್ತಾರ ದಿಲಾವರ್ ಭೂಗತನಾಗಿದ್ದ.
ದಿಲಾವರ್ ಸಿಂಗ್ ಇನ್ಸಾನ್ ವಿರುದ್ಧ ಹರಿಯಾಣ ಪೊಲೀಸರು ಐಪಿಸಿ ಯಡಿ ದೇಶದ್ರೋಹದ ಕೇಸನ್ನು ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು