ಜ್ಞಾನವಾಪಿ ಮಸೀದಿ ಪ್ರಕರಣ: 17ಕ್ಕೆ ತೀರ್ಪು ಕಾಯ್ದಿರಿಸಿದ ಕೋರ್ಟ್
Team Udayavani, Nov 15, 2022, 7:45 AM IST
ವಾರಣಾಸಿ: ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿರುವ ಶಿವಲಿಂಗದ ಪೂಜೆಗೆ ಅವಕಾಶ ಕಲ್ಪಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ವಾರಣಾಸಿಯ ಫಾಸ್ಟ್ಟ್ರ್ಯಾಕ್ ಕೋರ್ಟ್ ನ.17ಕ್ಕೆ ಕಾಯ್ದಿರಿಸಿದೆ.
ಸಿವಿಲ್ ನ್ಯಾ. ಮಹೇಂದ್ರ ಪಾಂಡೆ ಅವರು ಅರ್ಜಿಯ ವಿಚಾರಣೆ ನಡೆಸಿದ್ದು, ತೀರ್ಪು ದಿನಾಂಕವನ್ನು ಮುಂದೂಡಿದರು.
ಎರಡು ಕಡೆಯ ವಾದ ಆಲಿಸಿದ ನ್ಯಾಯಾಲಯವು, ಈ ಹಿಂದೆ ನ.8ರಂದು ತೀರ್ಪು ಕಾಯ್ದಿರಿಸಿತ್ತು. ನಂತರ ಪುನಃ ನ.14ರಂದು ಮುಂದೂಡಿತು. ಈಗ ಪುನಃ 17ಕ್ಕೆ ತೀರ್ಪು ಮುಂದೂಡಿದೆ.
ಜ್ಞಾನವಾಪಿ ಮಸೀದಿ ಆವರಣಕ್ಕೆ ಮುಸ್ಲಿಮರ ಪ್ರವೇಶ ನಿರ್ಬಂಧಿಸುವಂತೆ ಹಾಗೂ ಸನಾತನ ಸಂಘಕ್ಕೆ ಆವರಣವನ್ನು ಹಸ್ತಾಂತರಿಸಿ, ಶಿವಲಿಂಗದ ಪೂಜೆಗೆ ಅವಕಾಶ ನೀಡಬೇಕೆಂದು ಕೋರಿ ವಿಶ್ವ ವೇದಿಕ್ ಸನಾತನ ಸಂಘದ ಪ್ರಧಾನ ಕಾರ್ಯದರ್ಶಿ ಕಿರಣ್ ಸಿಂಗ್ ಮೇ 24ರಂದು ವಾರಣಾಸಿ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ