ಜ್ಞಾನವಾಪಿ ಶಿವಲಿಂಗಕ್ಕೆ ಕಾರ್ಬನ್ ಡೇಟಿಂಗ್: ತೀರ್ಪು ಅಕ್ಟೋಬರ್ 11ಕ್ಕೆ
ಅಂಜುಮನ್ ಇಸ್ಲಾಮಿಯಾ ವಾದಗಳನ್ನು ಆಲಿಸಿದ ನಂತರ ತೀರ್ಪು
Team Udayavani, Oct 7, 2022, 4:45 PM IST
ನವದೆಹಲಿ : ಜ್ಞಾನವಾಪಿ ಮಸೀದಿಯೊಳಗಿನ ‘ಶಿವಲಿಂಗ’ ಎಂದು ಹೇಳಿರುವ ರಚನೆಯ ಕಾರ್ಬನ್ ಡೇಟಿಂಗ್ ಕುರಿತಾಗಿ ಹಿಂದೂ ಪರ ಅರ್ಜಿದಾರರು ಸಲ್ಲಿಸಿದ ಮನವಿಯ ತೀರ್ಪನ್ನು ವಾರಾಣಸಿ ನ್ಯಾಯಾಲಯವು ಶುಕ್ರವಾರ ಅಕ್ಟೋಬರ್ 11ಕ್ಕೆ ಮುಂದೂಡಿದೆ.
ನ್ಯಾಯಾಲಯವು ಅಂಜುಮನ್ ಇಸ್ಲಾಮಿಯಾ ಸಮಿತಿಯ ವಾದಗಳನ್ನು ಆಲಿಸಿದ ನಂತರ, ನ್ಯಾಯಾಲಯವು ತನ್ನ ಆದೇಶವನ್ನು ಅಕ್ಟೋಬರ್ 11 ರಂದು ಪ್ರಕಟಿಸುತ್ತದೆ.
ಹಿಂದೂ ಪರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ತೀರ್ಪನ್ನು ನ್ಯಾಯಾಲಯ ಇಂದು ಪ್ರಕಟಿಸಬೇಕಿತ್ತು. ಮಹತ್ವದ ವಿಚಾರಣೆಗೆ ಮುನ್ನ ನ್ಯಾಯಾಲಯದ ಆವರಣದ ಹೊರಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಇದನ್ನೂ ಓದಿ : ದಾಖಲೆಗಳನ್ನು ಸಲ್ಲಿಸಲು ನಾನು ಒಪ್ಪಿದ್ದೇನೆ: ಇಡಿ ವಿಚಾರಣೆ ಬಳಿಕ ಡಿ.ಕೆ.ಶಿವಕುಮಾರ್
ಇದು ನಮ್ಮ ಸೂಟ್ ಆಸ್ತಿಯ ಭಾಗವಾಗಿದೆ ಮತ್ತು ಸಿಪಿಸಿ ಯ ಆರ್ಡರ್ 26 ನಿಯಮ 10ಎ ಪ್ರಕಾರ, ನ್ಯಾಯಾಲಯವು ವೈಜ್ಞಾನಿಕ ತನಿಖೆಯನ್ನು ನಿರ್ದೇಶಿಸುವ ಅಧಿಕಾರವನ್ನು ಹೊಂದಿದೆ ಎಂದು ನಾವು ಹೇಳಿದ್ದೇವೆ. ಮುಸ್ಲಿಂ ಕಡೆಯವರು ಉತ್ತರಿಸಲು ಸ್ವಲ್ಪ ಸಮಯ ಕೇಳಿದ್ದಾರೆ. ಈಗ ಅಕ್ಟೋಬರ್ 11 ರಂದು ಈ ವಿಷಯದ ವಿಚಾರಣೆ ನಡೆಯಲಿದೆ ಎಂದು ಹಿಂದೂ ಪರ ವಕೀಲ ವಿಷ್ಣು ಜೈನ್ ಹೇಳಿದ್ದಾರೆ.
ಮಸೀದಿಯೊಳಗೆ ಕಂಡುಬರುವ ರಚನೆಯು ಈ ಸೂಟ್ ಆಸ್ತಿಯ ಭಾಗವಾಗಿದೆಯೇ ಅಥವಾ ಇಲ್ಲವೇ ? ಎರಡನೆಯದಾಗಿ, ನ್ಯಾಯಾಲಯವು ವೈಜ್ಞಾನಿಕ ತನಿಖೆಗಾಗಿ ಆಯೋಗವನ್ನು ನೀಡಬಹುದೇ? ಎಂಬುದನ್ನು ಎರಡು ಅಂಶಗಳಲ್ಲಿ ಸ್ಪಷ್ಟಪಡಿಸುವಂತೆ ನ್ಯಾಯಾಲಯವು ನಮ್ಮನ್ನು ಕೇಳಿದೆ. ನಾವು ನಮ್ಮ ಉತ್ತರವನ್ನು ಸಲ್ಲಿಸಿದ್ದೇವೆ ಎಂದು ವಿಷ್ಣು ಜೈನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ