
ರಾಜ್ಯಸಭಾದ ನನ್ನ ಮತಕ್ಕಾಗಿ 25 ಕೋಟಿ ರೂಪಾಯಿ ಆಫರ್ ಬಂದಿತ್ತು: ರಾಜಸ್ಥಾನ್ ಸಚಿವ
ಖಾಸಗಿ ಶಾಲೆಯಲ್ಲಿನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ, ಸಚಿವ ಗುಧಾ ಈ ಹೇಳಿಕೆ ನೀಡಿದ್ದಾರೆ.
Team Udayavani, Aug 2, 2022, 6:40 PM IST

ಜೈಪುರ್: ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಒಂದು ವೇಳೆ ನಿರ್ದಿಷ್ಟ ಅಭ್ಯರ್ಥಿಗೆ ಮತ ಚಲಾಯಿಸಿದರೆ 25 ಕೋಟಿ ರೂಪಾಯಿ ಕೊಡುವುದಾಗಿ ಆಫರ್ ನೀಡಲಾಗಿತ್ತು ಎಂದು ರಾಜಸ್ಥಾನದ ಸೈನಿಕರ ಕಲ್ಯಾಣ ಖಾತೆಯ ಸಚಿವ ರಾಜೇಂದ್ರ ಗುಧಾ ಹೇಳಿದ್ದಾರೆ.
ಇದನ್ನೂ ಓದಿ:30 ವರ್ಷದ ಮರಕ್ಕೆ ಮರುಜೀವ ಕೊಟ್ಟ ವನಸಿರಿ: ಕಿತ್ತ ಮರವನ್ನು ಮತ್ತೇ ನೆಟ್ಟು ಪ್ರಯೋಗ
ಈ ಮೊದಲು ಬಹುಜನ್ ಸಮಾಜ್ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಶಾಸಕ ಗುಧಾ ಪಕ್ಷಾಂತರವಾಗಿದ್ದರು. 2020ರಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯ ಸಾರಿದ್ದ ಸಂದರ್ಭದಲ್ಲಿ 60 ಕೋಟಿ ರೂಪಾಯಿ ಆಫರ್ ಬಂದಿರುವುದಾಗಿ ಹೇಳಿಕೆ ನೀಡಿದ್ದರು ಎಂದು ವರದಿ ತಿಳಿಸಿದೆ.
ಆರೋಪದ ನಡುವೆ ಎರಡು ಆಫರ್ ಗಳನ್ನು ಯಾವ ಪಕ್ಷದವರು ಕೊಟ್ಟಿದ್ದರು ಎಂಬುದನ್ನು ಮಾತ್ರ ರಾಜೇಂದ್ರ ಗುಧಾ ಬಹಿರಂಗಪಡಿಸಿಲ್ಲ. ಸೋಮವಾರ ಝುಂಜುನು ಪ್ರದೇಶದಲ್ಲಿನ ಖಾಸಗಿ ಶಾಲೆಯಲ್ಲಿನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ, ಸಚಿವ ಗುಧಾ ಈ ಹೇಳಿಕೆ ನೀಡಿದ್ದಾರೆ.
ವಿದ್ಯಾರ್ಥಿಯೊಬ್ಬ ಕೇಳಿದ ಪ್ರಶ್ನೆಗೆ, ರಾಜ್ಯಸಭಾ ಚುನಾವಣೆಯಲ್ಲಿ ನಿರ್ದಿಷ್ಟ ವ್ಯಕ್ತಿಗೆ ಮತ ಹಾಕಿದರೆ 25 ಕೋಟಿ ನೀಡುವ ಬಗ್ಗೆ ಆಫರ್ ಬಂದಿತ್ತು ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಚಡಚಣದಲ್ಲಿ ಕೆ.ಆರ್.ಪಿ ಪಕ್ಷದ ರ್ಯಾಲಿ: ಪಕ್ಷ ಸೇರ್ಪಡೆ ಕಾರ್ಯಕ್ರಮ

ಹಾಲಿ- ಮಾಜಿ ಸಿಎಂ ಗಳು ಪುಡಿ ರೌಡಿಗಳಂತೆ ಮಾತನಾಡುತ್ತಿದ್ದಾರೆ: ಎಚ್.ವಿಶ್ವನಾಥ ಅಸಮಾಧಾನ

ಕಿರಿಕ್ ಪಾರ್ಟಿ-2 ಯಾವಾಗ?: ಅಭಿಮಾನಿಗಳ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡಿದ ರಕ್ಷಿತ್

“ಮಾಹಿತಿ ಯುದ್ಧ ನಡೆಸುತ್ತಿದೆ..” ಬಿಬಿಸಿ ಡಾಕ್ಯುಮೆಂಟರಿ ಪ್ರಕರಣದಲ್ಲಿ ಭಾರತದ ಬೆಂಬಲಕ್ಕೆ ನಿಂತ ರಷ್ಯಾ

ಪಕ್ಷ ಸಂಘಟನೆಗೆ ಒತ್ತು ನೀಡಿ: ಧ್ರುವ