‘ಹಫೀಜ್, ಮಸೂದ್ಗೆ ಉಗ್ರ ಪಟ್ಟ ಕಟ್ಟಲು ಆದ್ಯತೆ’
Team Udayavani, Jul 27, 2019, 5:47 AM IST
ಹೊಸದಿಲ್ಲಿ: ಅಕ್ರಮ ಚಟುವಟಿಕೆ ತಡೆ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅನುಮೋದನೆ ಲಭ್ಯವಾಗಿದ್ದು, ರಾಜ್ಯಸಭೆಯಲ್ಲೂ ಅನುಮೋದನೆಗೊಂಡು ಕಾನೂನಾಗಿ ಜಾರಿಗೆ ಬರುತ್ತಿದ್ದಂತೆಯೇ ಮೊದಲು ಉಗ್ರ ಹಫೀಜ್ ಸಯೀದ್ ಮತ್ತು ಮಸೂದ್ ಅಜರ್ನನ್ನು ಉಗ್ರ ಎಂದು ಘೋಷಿಸಲಾಗುತ್ತದೆ ಎಂದು ಗೃಹ ಸಚಿವಾಲಯ ತಿಳಿಸಿದೆ.
ಸದ್ಯ ಈ ಕಾಯ್ದೆಯಡಿ ಸಂಘಟನೆಗಳನ್ನು ಮಾತ್ರ ಉಗ್ರ ಸಂಘಟನೆ ಎಂದು ಘೋಷಿಸಬಹುದಾಗಿದ್ದು, ಯಾವುದೇ ವ್ಯಕ್ತಿಯನ್ನು ಉಗ್ರನೆಂದು ಘೋಷಿಸಲು ಅವಕಾಶವಿರಲಿಲ್ಲ. ಈ ಸಂಬಂಧ ಈಗ ತಿದ್ದುಪಡಿ ಮಾಡಲಾಗಿದ್ದು, ಇನ್ನು ಮುಂದೆ ವ್ಯಕ್ತಿಯನ್ನೂ ಉಗ್ರ ಎಂದು ಘೋಷಿಸುವ ಅವಕಾಶವಿದೆ. ವಿಪಕ್ಷಗಳ ವಿರೋಧದ ನಡುವೆಯೂ ಲೋಕಸಭೆಯಲ್ಲಿ ಈ ಮಸೂದೆಕ್ಕೆ ಅನುಮೋದನೆ ಲಭ್ಯವಾಗಿದೆ. ಪುಲ್ವಾಮಾ ದಾಳಿಯ ಸಂಚುಕೋರ ಮಸೂದ್ ಅಜರ್ ಮತ್ತು ಮುಂಬಯಿ ದಾಳಿ ಸಂಚುಕೋರ ಹಫೀಜ್ ಸಯೀದ್ನನ್ನು ಮೊದಲಿಗೆ ಈ ಪಟ್ಟಿಯಲ್ಲಿ ಸೇರಿಸಲಾಗುತ್ತದೆ. ಇದರಿಂದ ದೇಶದಲ್ಲಿ ಇವರ ಓಡಾಟಕ್ಕೆ ನಿಷೇಧ ವಿಧಿಸಲಾಗುತ್ತದೆ. ಅಷ್ಟೇ ಅಲ್ಲ, ಈ ಕಾಯ್ದೆಯು ವಿಶ್ವಸಂಸ್ಥೆಯ ನಿಲುವಳಿಗೆ ಅನುಗುಣವಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.
ಕಂಪೆನಿ ಕಾಯ್ದೆಗೆ ತಿದ್ದುಪಡಿ: ಇದೇ ವೇಳೆ, ಕಾರ್ಪೊರೇಟ್ ಕಂಪೆನಿಗಳ ಸಾಮಾಜಿಕ ಹೊಣೆಗಾರಿಕೆ ಹೆಚ್ಚಿಸುವ ಮತ್ತು ರಾಷ್ಟ್ರೀಯ ಕಂಪೆನಿ ಕಾನೂನು ನ್ಯಾಯಾಧಿಕರಣ (ಎನ್ಸಿಎಲ್ಟಿ)ದ ಹೊರೆ ಕಡಿಮೆಗೊಳಿಸುವಂಥ ಪ್ರಸ್ತಾಪವಿರುವ ಕಂಪೆನಿಗಳ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಕ್ಕೆ ಲೋಕಸಭೆಯಲ್ಲಿ ಶುಕ್ರವಾರ ಅಂಗೀಕಾರ ದೊರೆತಿದೆ. ಈ ನಡುವೆ, ದೇಶದ ಇತರೆ ಭಾಗಗಳಲ್ಲೂ ಬುಲೆಟ್ ರೈಲು ಜಾಲ ಸ್ಥಾಪಿಸುವ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ ಎಂದು ರೈಲ್ವೇ ಖಾತೆ ಸಹಾಯಕ ಸಚಿವ ಸುರೇಶ್ ಅಂಗಡಿ ತಿಳಿಸಿದ್ದಾರೆ.
1 ಕೋಟಿ ಮರಗಳು ಧರೆಗೆ: ಅಭಿವೃದ್ಧಿ ಕಾರ್ಯಗಳಿಗಾಗಿ ಕಳೆದ 5 ವರ್ಷಗಳಲ್ಲಿ 1 ಕೋಟಿ ಮರಗಳನ್ನು ಕಡಿಯಲು ಪರಿಸರ ಸಚಿವಾಲಯ ಅನುಮತಿ ಕೊಟ್ಟಿದೆ ಎಂದು ಸರಕಾರ ಲೋಕಸಭೆಯಲ್ಲಿ ಮಾಹಿತಿ ನೀಡಿತು.
ಮತ ಕುರಿತು ಭಿನ್ನಮತ: ದೇಶದಲ್ಲಿ ಮತದಾನ ಮಾಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಲೋಕಸಭೆ ಸದಸ್ಯರಲ್ಲೇ ಭಿನ್ನಾಭಿಪ್ರಾಯ ಮೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ