ಭಾರತ ವಿರೋಧಿ ಪ್ರಚಾರಕ್ಕೆ ಸಯೀದ್ನಿಂದ ಪಾಕ್ ಗುರುದ್ವಾರ ಬಳಕೆ
Team Udayavani, Apr 30, 2018, 5:38 PM IST
ಹೊಸದಿಲ್ಲಿ : ಪಾಕ್ ಮೂಲದ ಲಷ್ಕರ್ ಎ ತಯ್ಯಬ ಉಗ್ರ ಸಂಘಟನೆಯ ಮುಖ್ಯಸ್ಥ ಮತ್ತು 2008 ಮುಂಬಯಿ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಹಾಫೀಜ್ ಸಯೀದ್ ಭಾರತ ವಿರೋಧಿ ಪ್ರಚಾರ ಕಾರ್ಯಕ್ಕಾಗಿ ಪಾಕಿಸ್ಥಾನದಲ್ಲಿನ ಸಿಕ್ಖರ ಗುರುದ್ವಾರಗಳನ್ನು ಬಳಸಿಕೊಳ್ಳುತ್ತಿರುವುದಾಗಿ ವರದಿಯಾಗಿದೆ.
ಹಾಫೀಜ್ ಸಯೀದ್ನ ಈ ಅಪ ಪ್ರಚಾರದ ಅಭಿಯಾನ ಎಷ್ಟು ಯಶಸ್ವಿಯಾಗಿದೆ ಎಂದರೆ ಪಾಕಿಸ್ಥಾನದ ಸಿಕ್ಖ್ ಗುರುದ್ವಾರ ಪ್ರಬಂಧ ಸಮಿತಿ (ಪಿಎಸ್ ಜಿಪಿಸಿ) ಸಯೀದ್ ಈಚೆಗೆ ಸ್ಥಾಪಿಸಿರುವ ಮಿಲೀ ಮುಸ್ಲಿಮ್ ಲೀಗ್ (ಎಂಎಂಎಲ್) ರಾಜಕೀಯ ಪಕ್ಷವನ್ನು ತಾನು ಬೆಂಬಲಿಸುವುದಾಗಿ ಬಹಿರಂಗವಾಗಿ ಹೇಳಿಕೊಂಡಿದೆ.
ಪಿಎಸ್ಜಿಪಿಸಿ ಇದರ ಪ್ರಧಾನ ಕಾರ್ಯದರ್ಶಿಯಾಗಿರುವ ಗೋಪಾಲ್ ಸಿಂಗ್ ಚಾವ್ಲಾ ಅವರು ಎಂಎಂಎಲ್ಗೆ ಬೆಂಬಲ ಘೋಷಿಸಿರುವುದು ಮಾತ್ರವಲ್ಲದೆ ಅದರ ಸಭೆಗಳನ್ನು ಸಿಕ್ಖರ ಮೊದಲ ಗುರು, ಗುರು ನಾನಕ್ ದೇವ್ ಅವರ ಜನ್ಮ ಸ್ಥಳವಾದ ಪಾಕಿಸ್ಥಾನದಲ್ಲಿನ ನಾನಕ್ ಸಾಹಿಬ್ನಲ್ಲಿ ಕಳೆದ ಶನಿವಾರ ಸಂಜೆ ನಡೆಸುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?