ನೂರಾರು ಮಕ್ಕಳ ಜೀವ ಉಳಿಸಿದ ಡಾಕ್ಟರ್‌ ಖಫೀಲ್‌ ಎತ್ತಂಗಡಿ!


Team Udayavani, Aug 13, 2017, 8:21 PM IST

Khafeel-12-8.jpg

ಲಕ್ನೋ: ಗೋರಖ್‌ಪುರ ಬಿ.ಆರ್‌.ಡಿ. ವೈದ್ಯಕೀಯ ಕಾಲೇಜಿನ ‘ಮಿದುಳಿನ ಉರಿಯೂತ’ ವಾರ್ಡ್‌ ಮುಖ್ಯಸ್ಥರಾಗಿದ್ದ ಹಾಗೂ ಎರಡು ದಿನಗಳ ಹಿಂದೆ ಆಮ್ಲಜನಕ ಪೂರೈಕೆ ಕೊರತೆ ಉದ್ಭವಿಸಿದ್ದ ಸಂದರ್ಭದಲ್ಲಿ ಬಾಹ್ಯ ಮೂಲಗಳಿಂದ ಆಮ್ಲಜನಕ ಪೂರೈಕೆ ಮಾಡುವ ಮೂಲಕ ನೂರಾರು ಮಕ್ಕಳ ಪ್ರಾಣ ಉಳಿಯಲು ಕಾರಣವಾಗಿದ್ದ ಡಾ. ಖಫೀಲ್‌ ಖಾನ್‌ ಅವರನ್ನು ಭಾನುವಾರದಂದು ಇದ್ದಕ್ಕಿದ್ದಂತೆ ಎತ್ತಂಗಡಿ ಮಾಡಲಾಗಿದೆ. ಇದೀಗ ಖಾನ್‌ ಅವರ ಜಾಗದಲ್ಲಿ ಡಾ. ಭೂಪೇಂದ್ರ ಶರ್ಮಾ ಅವರನ್ನು ಬಿ.ಆರ್‌.ಡಿ. ವೈದ್ಯಕೀಯ ಕಾಲೇಜಿನ ನೋಡಲ್‌ ಆಫೀಸರ್‌ ಆಗಿ ನೇಮಿಸಲಾಗಿದೆ ಎಂದು ಎ.ಎನ್‌.ಐ. ಸುದ್ದಿಸಂಸ್ಥೆ ವರದಿ ಮಾಡಿದೆ. ಡಾಕ್ಟರ್‌ ಖಾನ್‌ ಅವರ ಎತ್ತಂಗಡಿಗೆ ಯಾವುದೇ ಅಧಿಕೃತ ಕಾರಣಗಳನ್ನು ನೀಡಲಾಗಿಲ್ಲ.

ಘಟನೆ ನಡೆದಿದ್ದ ದಿನದಂದು ಖಾನ್‌ ಅವರು ಸಮಯೋಚಿತವಾಗಿ ವರ್ತಿಸದೇ ಹೋಗಿದ್ದಲ್ಲಿ ಇನ್ನಷ್ಟು ಮಕ್ಕಳು ಮರಣ ಹೊಂದುವ ಅಪಾಯವಿತ್ತು. ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆ ಕೊರತೆಯ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ದಂತೆ ತಕ್ಷಣ ಕಾರ್ಯಪ್ರವೃತ್ತರಾದ ಡಾ. ಖಾನ್‌ ಅವರು ತಮ್ಮ ಗೆಳೆಯರ ಖಾಸಗಿ ಆಸ್ಪತ್ರೆಯಿಂದ ಆಮ್ಲಜನ ಸಿಲಿಂಡರ್‌ ಗಳನ್ನು ತುರ್ತಾಗಿ ತರಿಸಿಕೊಂಡಿದ್ದರು, ಮಾತ್ರವಲ್ಲದೆ ಶಿಶುಗಳ ಜೀವ ಉಳಿಸುವ ನಿಟ್ಟಿನಲ್ಲಿ ಅಗತ್ಯ ಆಮ್ಲಜನಕ ಸಿಲಿಂಡರ್‌ ಗಳನ್ನು ಆಸು-ಪಾಸಿನ ಇತರೇ ಆಸ್ಪತ್ರೆಗಳಿಂತ ತರಿಸಿಕೊಳ್ಳುವಲ್ಲಿ ವಿಶೇಷ ಮುತುವರ್ಜಿಯನ್ನು ವಹಿಸಿದ್ದರು ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಆಮ್ಲಜನಕ ಸಿಲಿಂಡರ್‌ಗಳ ವ್ಯವಸ್ಥೆಗಾಗಿ ಆಸ್ಪತ್ರೆಯಿಂದ ಹೊರಹೋಗುವ ಮುನ್ನ ಡಾ. ಖಾನ್‌ ಅವರು, ಒಂದುವೇಳೆ ಆಮ್ಲಜನಕ ಪೂರೈಕೆ ಇಳಿಮುಖವಾದಲ್ಲಿ ‘ಆ್ಯಂಬು ಬ್ಯಾಗ್‌’ಗಳನ್ನು ಪಂಪ್‌ ಮಾಡುವಂತೆ ಆಸ್ಪತ್ರೆಯ ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದರು ಅನ್ನುವ ಅಂಶವೂ ಇದೀಗ ಬಹಿರಂಗಗೊಂಡಿದೆ. ಮತ್ತು ಆಮ್ಲಜನಕ ಪೂರೈಕೆದಾರರಿಗೆ ಖಾನ್‌ ಅವರೇ ಹಣವನ್ನು ಪಾವತಿ ಮಾಡಿದ್ದರು ಎಂಬ ಕುತೂಹಲಕಾರಿ ಅಂಶವನ್ನು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.