ಆಗ್ನೇಯ, ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಲಾಜಿಸ್ಟಿಕ್ಸ್ ಬೇಸ್ ಸ್ಥಾಪಿಸಲು HAL ಚಿಂತನೆ
ತೇಜಸ್ ವಿಮಾನ, ರುದ್ರ ಕಾಪ್ಟರ್ ಖರೀದಿಗೆ ಉತ್ತೇಜನ ನೀಡಲು ಕ್ರಮ
Team Udayavani, Mar 8, 2020, 9:37 PM IST
ನವದೆಹಲಿ: ಮಲೇಷ್ಯಾ, ಶ್ರೀಲಂಕಾ, ಇಂಡೋನೇಷ್ಯಾ ಮತ್ತು ವಿಯೆಟ್ನಾಂಗಳಲ್ಲಿ ಸರಕು ದಾಸ್ತಾನು ಕೇಂದ್ರ (ಲಾಜಿಸ್ಟಿಕ್ಸ್ ಬೇಸ್)ಗಳನ್ನು ಸ್ಥಾಪಿಸಲು ಸರ್ಕಾರಿ ಸ್ವಾಮ್ಯದ ಅತಿ ದೊಡ್ಡ ಏರೋಸ್ಪೇಸ್ ಸಂಸ್ಥೆಯಾಗಿರುವ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(ಎಚ್ಎಎಲ್) ಚಿಂತನೆ ನಡೆಸಿದೆ.
ತನ್ನ ಲಘು ಯುದ್ಧವಿಮಾನ ತೇಜಸ್ ಮತ್ತು ಮಿಲಿಟರಿ ಹೆಲಿಕಾಪ್ಟರ್ಗಳನ್ನು ಖರೀದಿಸುವಂತೆ ಇತರೆ ದೇಶಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಎಚ್ಎಎಲ್ ಈ ಚಿಂತನೆ ನಡೆಸಿದೆ. “ಲಾಜಿಸ್ಟಿಕ್ ಬೇಸ್ ನಿರ್ಮಿಸಲು ಆಯ್ಕೆ ಮಾಡಿಕೊಂಡಿರುವ ನಾಲ್ಕೂ ದೇಶಗಳು ರಷ್ಯಾ ದೇಶವು ಉಕ್ಕಿನಿಂದ ನಿರ್ಮಿಸಿರುವ ಮಿಲಿಟರಿ ವಿಮಾನ ಮತ್ತು ಕಾಪ್ಟರ್ಗಳನ್ನು ಬಳಸುತ್ತಿವೆ. ಆದರೆ, ಇವುಗಳ ಸೇವಾ ದಕ್ಷತೆ ಅತ್ಯಂತ ಕಳಪೆಯಾಗಿದೆ. ಹೀಗಾಗಿ, ಆಗ್ನೇಯ ಮತ್ತು ಪಶ್ಚಿಮ ಏಷ್ಯಾ ಹಾಗೂ ಉತ್ತರ ಆಫ್ರಿಕಾದ ರಾಷ್ಟ್ರಗಳಲ್ಲಿ ಎಚ್ಎಎಲ್ ನಿರ್ಮಿತ “ತೇಜಸ್’ ಲಘು ಯುದ್ಧ ವಿಮಾನ ಮತ್ತು “ರುದ್ರ’ ಅಟ್ಯಾಕ್ ಹೆಲಿಕಾಪ್ಟರ್ಗಳ ಮಾರಾಟಕ್ಕೆ ಅಗತ್ಯ ವೇದಿಕೆ ಸೃಷ್ಟಿಸಲಾಗುತ್ತಿದೆ,’ ಎಂದು ಎಚ್ಎಎಲ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಆರ್.ಮಾಧವನ್ ಮಾಹಿತಿ ನೀಡಿದ್ದಾರೆ.
ಕಳೆದ ತಿಂಗಳಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ 5 ವರ್ಷಗಳಲ್ಲಿ ದೇಶವು 5 ಶತಕೋಟಿ ಡಾಲರ್ನಷ್ಟು ರಕ್ಷಣಾ ಸಾಮಗ್ರಿಗಳನ್ನು ರಫ್ತು ಮಾಡುವ ಗುರಿ ಹಾಕಿಕೊಂಡಿದೆ ಎಂದು ಹೇಳಿದ್ದರು. ಜತೆಗೆ, ಸೇನಾ ಸಾಮಗ್ರಿಗಳನ್ನು ತಯಾರಿಸುವಂಥ ಪ್ರಮುಖ ಕಂಪನಿಗಳಿಗೆ ಈ ಗುರಿ ಸಾಧಿಸುವ ನಿಟ್ಟಿನಲ್ಲಿ ಶ್ರಮಿಸುವಂತೆ ಕರೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
MUST WATCH
ಹೊಸ ಸೇರ್ಪಡೆ
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ