‘ಹಮಾರೆ ಪಾಸ್‌ ಮೋದಿ ಹೈ’: ರಾಮ್‌ ಮಾಧವ್‌ ಹೊಸ ಘೋಷಣೆ

‘ದೀವಾರ್‌’ ಚಿತ್ರದ ಜನಪ್ರಿಯ ಸಂಭಾಷಣೆ ಬಳಸಿಕೊಂಡು ಮೋದಿ ಗುಣಗಾನ

Team Udayavani, Apr 14, 2019, 2:49 PM IST

Narendra-Modi-2-726

ಜಮ್ಮು: ವಿಭಿನ್ನ ಚುನಾವಣಾ ಪ್ರಚಾರ ತಂತ್ರಗಳ ಮೂಲಕ ಮತದಾರರನ್ನು ಸೆಳೆಯುವಲ್ಲಿ ಈ ಬಾರಿಯೂ ಭಾರತೀಯ ಜನತಾ ಪಕ್ಷವೇ ಮುಂಚೂಣಿಯಲ್ಲಿರುವಂತಿದೆ. 2014ರ ಲೋಕಸಭಾ ಚುನಾವಣೆಗಳಲ್ಲಿ ‘ಅಬ್‌ ಕಿ ಬಾರ್‌ ಮೋದಿ ಸರ್ಕಾರ್‌’, ‘ಹರ್‌ ಹರ್‌ ಮೋದಿ ಘರ್‌ ಘರ್‌ ಮೋದಿ’, ‘ಚಾಯ್‌ ಪೇ ಚರ್ಚಾ’ದಂತಹ ಆಕರ್ಷಕ ಟ್ಯಾಗ್‌ ಲೈನ್‌ ಗಳನ್ನು ಬಳಸಿ ದೇಶದ ಮತದಾರರನ್ನು ಅದರಲ್ಲೂ ಯುವ ಮತದಾರರನ್ನು ತನ್ನತ್ತ ಸೆಳೆದುಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿತ್ತು.

ಈ ಬಾರಿಯೂ ಸಹ ‘ಫಿರ್‌ ಏಕ್‌ ಬಾರ್‌ ಮೋದಿ ಸರ್ಕಾರ್‌’, ‘ಚೌಕಿದಾರ್‌ ಶೇರ್‌ ಹೈ’, ‘ಮೈ ಭಿ ಚೌಕಿದಾರ್‌’ ಘೋಷಣೆಗಳ ಮೂಲಕ ಬಿಜೆಪಿ ಮತದಾರರತ್ತ ಮತಯಾಚನೆಗೆ ತೆರಳುತ್ತಿದೆ. ಇದಕ್ಕೆ ಇನ್ನೊಂದು ಸೇರ್ಪಡೆ ಎಂಬಂತೆ ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್‌ ಮಾಧವ್‌ ಅವರು ಬಾಲಿವುಡ್‌ ನ ಬ್ಲಾಕ್‌ ಬಸ್ಟರ್‌ ಚಿತ್ರಗಳಲ್ಲಿ ಒಂದಾಗಿರುವ ‘ದೀವಾರ್‌’ ಚಿತ್ರದ ಜನಪ್ರಿಯ ಸಂಭಾಷಣೆ ‘ಮೇರೇ ಪಾಸ್‌ ಮಾ ಹೈ’ಯನ್ನು (ನನ್ನ ಹತ್ತಿರ ತಾಯಿ ಇದ್ದಾರೆ) ಬದಲಾವಣೆ ಮಾಡಿಕೊಂಡು ‘ಹಮಾರೇ ಪಾಸ್‌ ಮೋದಿ ಹೈ’ (ನಮ್ಮ ಹತ್ತಿರ ಮೋದಿ ಇದ್ದಾರೆ) ಎಂದು ಮತಯಾಚನೆ ಮಾಡುತ್ತಿದ್ದಾರೆ. ಈ ಮೂಲಕ ಕೇಸರಿ ಪಕ್ಷದಲ್ಲಿ ಸದ್ಯಕ್ಕೆ ನರೇಂದ್ರ ಮೋದಿ ಅವರೇ ಪರಮೋಚ್ಛ ನಾಯಕ ಎಂಬುದನ್ನು ಬಿಂಬಿಸುವ ಪ್ರಯತ್ನಗಳು ಈ ಬಾರಿಯ ಚುನಾವಣೆಯಲ್ಲಿ ಆಗುತ್ತಿದೆ.

ಜಮ್ಮುವಿನ ರಿಯಾಸಿ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ರಾಮ್‌ ಮಾಧವ್‌ ಅವರು, ‘ನರೇಂದ್ರ ಮೋದಿ ಅವರಿಂದಾಗಿ ಭಾರತವು ಜಾಗತಿಕ ಮಟ್ಟದಲ್ಲಿ ಗುರುತಿಸುವಂತಾಗಿದೆ. ಮೋದಿ ಅವರು ಕಳೆದ ಐದು ವರ್ಷಗಳ ತಮ್ಮ ಆಡಳಿತಾವಧಿಯಲ್ಲಿ ಭಾರತವನ್ನು ‘ಭ್ರಷ್ಟಾಚಾರ ಹಾಗೂ ಭಯೋತ್ಪಾದನಾ ಮುಕ್ತ’ ದೇಶವನ್ನಾಗಿ ರೂಪಿಸಿದ್ದಾರೆ. ಮಾತ್ರವಲ್ಲದೇ ಗಡಿಯಾಚೆಗಿನ ಭಯೋತ್ಪಾದನಾ ಶಿಬಿರಗಳನ್ನು ಧ್ವಂಸಗೊಳಿಸುವ ಮೂಲಕ ಶತ್ರುವಿನ ಮನೆಗೆ ನುಗ್ಗಿ ಶತ್ರುವಿಗೆ ಹೊಡೆಯುವ ಛಾತಿಯನ್ನು ತೋರಿದ್ದಾರೆ’ ಎಂದು ಹೇಳಿದರು.

ವಿರೋಧಿ ಪಾಳಯಗಳಲ್ಲಿ ಯಾವುದೇ ನಾಯಕರ ಮುಖ ಕಾಣಿಸುತ್ತಿಲ್ಲ, ಆದರೆ ನಮ್ಮಲ್ಲಿ ಮೋದಿ ಇದ್ದಾರೆ. ಅದಕ್ಕಾಗಿಯೇ ಅವರು ‘ಮಹಾಘಟಬಂಧನ್‌’ ಮಾಡಿಕೊಂಡಿದ್ದಾರೆ, ಆದರೆ ಅವರ ಆ ಪ್ರಯತ್ನ ಅವರೆಣಿಸಿದ ಫ‌ಲವನ್ನು ಕೊಟ್ಟಿಲ್ಲ ಯಾಕೆಂದರೆ ಅವರಲ್ಲಿ ಹಲವರು ಪ್ರಧಾನ ಮಂತ್ರಿ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದಾರೆ ಎಂದು ರಾಮ್‌ ಮಾಧವ್‌ ವಿರೋಧ ಪಕ್ಷದ ನಾಯಕರನ್ನು ಲೇವಡಿ ಮಾಡಿದರು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.