ಯುದ್ಧ ಬೇಡ ಎಂದಾದರೆ ಪಿಒಕೆಯನ್ನು ಭಾರತಕ್ಕೆ ಹಸ್ತಾಂತರಿಸಿ; ಪಾಕ್ ಗೆ ಅಠಾವಳೆ
Team Udayavani, Sep 14, 2019, 10:10 AM IST
ನವದೆಹಲಿ:ಒಂದು ವೇಳೆ ಪಾಕಿಸ್ತಾನಕ್ಕೆ ಯುದ್ಧ ಬೇಡ ಎಂದಾದರೆ, ಇದರಿಂದ ಪಾಕಿಸ್ತಾನಕ್ಕೆ ಒಳ್ಳೆಯದು ಎಂಬುದಾಗಿ ಇಮ್ರಾನ್ ಖಾನ್ ಪಾಕಿಸ್ತಾನದ ಹಿತಾಸಕ್ತಿಯ ನೆಲೆಯಲ್ಲಿ ಆಲೋಚಿಸಿ ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ವನ್ನು ಭಾರತಕ್ಕೆ ಹಸ್ತಾಂತರಿಸಲಿ ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ.
ವರದಿಗಳ ಪ್ರಕಾರ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಜನರು ಸಂತೋಷವಾಗಿಲ್ಲ. ಅಲ್ಲಿನ ಜನರು ಭಾರತದ ಜತೆ ಸೇರಲು ಬಯಸುತ್ತಿದ್ದಾರೆ ಎಂದು ಅಠಾವಳೆ ಚಂಡೀಗಢದಲ್ಲಿ ಮಾತನಾಡುತ್ತ ತಿಳಿಸಿದ್ದಾರೆ.
ಜಮ್ಮು-ಕಾಶ್ಮೀರದ ವಿಚಾರದಲ್ಲಿ ಪಾಕಿಸ್ತಾನ ಮತ್ತೊಮ್ಮೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಫಲವಾಗಿದೆ. ಒಂದು ವೇಳೆ ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತಕ್ಕೆ ಹಸ್ತಾಂತರಿಸಿದರೆ ನಾವು ಅಲ್ಲಿ ಹಲವು ಕೈಗಾರಿಕೆಗಳನ್ನು ಸ್ಥಾಪಿಸುತ್ತೇವೆ. ಅಷ್ಟೇ ಅಲ್ಲ ವ್ಯವಹಾರಿಕವಾಗಿಯೂ ನಾವು ಪಾಕಿಸ್ತಾನಕ್ಕೆ ನೆರವು ನೀಡುತ್ತೇವೆ. ಬಡತನ ನಿರ್ಮೂಲನೆ ಮತ್ತು ನಿರುದ್ಯೋಗ ಸಮಸ್ಯೆ ಹೋಗಲಾಡಿಸಲು ನೆರವು ನೀಡುವುದಾಗಿ ಅಠಾವಳೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
MUST WATCH
ಹೊಸ ಸೇರ್ಪಡೆ
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ