ಮನೆ ಮನೆಯಲ್ಲೂ ತ್ರಿವರ್ಣ: ರಾಷ್ಟ್ರಧ್ವಜ ಹಾರಿಸುವ ಮುನ್ನ ಈ ಅಂಶಗಳು ನೆನಪಿನಲ್ಲಿರಲಿ


Team Udayavani, Aug 13, 2022, 9:31 AM IST

thumb-1

ಹೊಸದಿಲ್ಲಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪ್ರತಿ ಮನೆಯಲ್ಲಿ ಧ್ವಜ ಹಾರಿಸುವ ಅಭಿಯಾನ ನಡೆಸಲಾಗುತ್ತಿದೆ. ಇಂದಿನಿಂದ (ಆ.13) 15ರವರೆಗೆ ಒಟ್ಟು ಮೂರು ದಿನ ಮನೆಗಳಲ್ಲಿ ಧ್ವಜ ಹಾರಿಸಲು ಅನುಮತಿ ನೀಡಲಾಗಿದೆ. ಧ್ವಜ ನಿಯಮಕ್ಕೆ ತಿದ್ದುಪಡಿ ತಂದಿರುವ ಕೇಂದ್ರ ಸರ್ಕಾರವು ಹಗಲು ರಾತ್ರಿ ತ್ರಿವರ್ಣ ಧ್ವಜ ಹಾರಿಸಲು ಅನುಮತಿಸಿದೆ.

ಧ್ವಜ ಹಾರಿಸುವಾಗ ಕೆಲವು ಅಂಶಗಳು ನೆನಪಿನಲ್ಲಿರಲಿ.

ನಿಯಮದಂತೆ ಭಾರತದ ಧ್ವಜವು ಆಯತಾಕಾರದಲ್ಲಿರಬೇಕು. ಧ್ವಜವು ಯಾವುದೇ ಗಾತ್ರದಲ್ಲಿರದ್ದರೂ ಅದರ ಉದ್ದ ಮತ್ತು ಅಗಲದ ಅನುಪಾತವು 3:2 ಆಗಿರಬೇಕು.

ಕಾಗದದಿಂದ ಮಾಡಿದ ತ್ರಿವರ್ಣವನ್ನು ಎಸೆಯವಂತಿಲ್ಲ ಅಥವಾ ಹರಿದು ಹಾಕಲಾಗುವುದಿಲ್ಲ. ಕಾಗದದಿಂದ ಮಾಡಿದ ತ್ರಿವರ್ಣವನ್ನು ಗೌರವದಿಂದ ವಿಲೇವಾರಿ ಮಾಡುವುದು ಅವಶ್ಯಕ.

ತ್ರಿವರ್ಣ ಧ್ವಜವನ್ನು ಹಾರಿಸುವುದು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು, ಆದರೆ ಅದನ್ನು ಕಾರಿನಲ್ಲಿ ಹಾಕಿಕೊಂಡು ತಿರುಗಾಡಬಹುದು ಎಂದಲ್ಲ. ಧ್ವಜ ಸಂಹಿತೆಯ ಪ್ರಕಾರ, ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವ ಜನರಿಗೆ ಮಾತ್ರ ತ್ರಿವರ್ಣ ಧ್ವಜವನ್ನು ಧರಿಸಲು ಅವಕಾಶವಿದೆ.

ವಿದೇಶಿ ಅತಿಥಿಗೆ ಕೇಂದ್ರದಿಂದ ಕಾರು ನೀಡಿದರೆ, ಆ ಕಾರಿನ ಬಲಭಾಗದಲ್ಲಿ ತ್ರಿವರ್ಣ ಧ್ವಜವಿದ್ದರೆ, ಆ ದೇಶದ ರಾಷ್ಟ್ರಧ್ವಜ ಎಡಭಾಗದಲ್ಲಿರುತ್ತದೆ. ರಾಷ್ಟ್ರಪತಿಗಳು ವಿಶೇಷ ರೈಲಿನಲ್ಲಿ ಪ್ರಯಾಣಿಸಿದರೆ, ರೈಲು ನಿಂತಿರುವಾಗ ಪ್ಲಾಟ್‌ಫಾರ್ಮ್‌ನಲ್ಲಿರುವ ಚಾಲಕರ ಕ್ಯಾಬಿನ್‌ನಲ್ಲಿ ತ್ರಿವರ್ಣ ಧ್ವಜವನ್ನು ಪ್ರದರ್ಶಿಸಲಾಗುತ್ತದೆ. ರಾಷ್ಟ್ರಪತಿಗಳು ವಿಮಾನದಲ್ಲಿ ಪ್ರಯಾಣಿಸಿದರೆ ಅದರ ಮೇಲೆ ರಾಷ್ಟ್ರಧ್ವಜವನ್ನೂ ಹಾಕಲಾಗುತ್ತದೆ. ಅದೇ ರೀತಿ, ಪ್ರಧಾನಿ ಅಥವಾ ಉಪರಾಷ್ಟ್ರಪತಿ ಯಾವುದೇ ದೇಶಕ್ಕೆ ಪ್ರಯಾಣಿಸಿದಾಗ, ವಿಮಾನದಲ್ಲಿ ರಾಷ್ಟ್ರಧ್ವಜವನ್ನು ಹಾಕಲಾಗುತ್ತದೆ.

ಮನೆಯಲ್ಲಿ ರಾಷ್ಟ್ರಧ್ವಜ ಹಾರಸಿದಾಗ ಕಂಬ ಯಾವುದೇ ಬದಿಗೆ ವಾಲಿರಬಾರದು. ಧ್ವಜ ನೆಲಕ್ಕೆ ತಾಗಬಾರದು.

ಭಾರತದ ತ್ರಿವರ್ಣದ ಧ್ವಜಾರೋಹಣ ಮಾಡುವಾಗ ಯಾವಾಗಲೂ ಕೇಸರಿ ಬಣ್ಣ ಮೇಲೆ ಬರುವಂತೆ, ಹಸುರು ಬಣ್ಣ ಕೆಳಗೆ ಬರುವಂತೆ ನೋಡಿಕೊಳ್ಳಿ.

ಧ್ವಜದ ಮೇಲೆ ಏನನ್ನೂ ಬರೆಯುವಂತಿಲ್ಲ. ಯಾವುದೇ ಉಡುಗೆ ಅಥವಾ ಸಮವಸ್ತ್ರದ ಯಾವುದೇ ಭಾಗದಲ್ಲಿ ತ್ರಿವರ್ಣ ಧ್ವಜವನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಯಾವುದೇ ಕರವಸ್ತ್ರ, ದಿಂಬು ಅಥವಾ ಕರವಸ್ತ್ರವು ತ್ರಿವರ್ಣ ಧ್ವಜದ ವಿನ್ಯಾಸವನ್ನು ಹೊಂದಿರಬಾರದು.

ಇದನ್ನೂ ಓದಿ:ಮೋದಿಯೇ ಮುಂದಿನ ಪ್ರಧಾನಿಯಾಗಲಿ; ಲೋಕಸಭಾ ಚುನಾವಣೆ ನಡೆದರೆ ಎನ್‌ಡಿಎಗೆ ಬಹುಮತ

ಧ್ವಜವನ್ನು ಮಡಚಲೂ ನಿಯಮವಿದೆ. ಧ್ವಜವನ್ನು ಸ್ವತ್ಛ, ಸಮತಟ್ಟಾದ ಸ್ಥಳದಲ್ಲಿ ಇಟ್ಟುಕೊಳ್ಳಿ. ಮೊದಲಿಗೆ ಕೇಸರಿ ಮತ್ತು ಹಸುರು ಬಣ್ಣದ ಬಟ್ಟೆಯನ್ನು ಬಿಳಿ ಬಣ್ಣದ ಬಟ್ಟೆಯ ಕೆಳಗೆ ಮಡಚಿ. ಆಯತಾಕಾರಾದಲ್ಲಿರುವ ಬಿಳಿ ಬಣ್ಣದ ಬಟ್ಟೆಯಲ್ಲಿ ಕೇವಲ ಅಶೋಕ ಚಕ್ರ ಕಾಣುವಂತೆ ಇನ್ನೆರೆಡು ತುದಿಗಳನ್ನು ಮಡಚಿ.

ರಾಷ್ಟ್ರಧ್ವಜ ಹರಿದರೆ ಏನು ಮಾಡಬೇಕು ಎಂಬ ಪ್ರಶ್ನೆ ಹಲವರಿಗಿದೆ. ಒಂದು ವೇಳೆ ಧ್ವಜವು ಹರಿದರೆ ಅಥವಾ ಬಳಸಲಾರದ ಸ್ಥಿತಿಗೆ ಬಂದರೆ, ಅದನ್ನು ಖಾಸಗಿಯಾಗಿ ಗೌರವಯುತವಾಗಿ ಸುಟ್ಟು ಹಾಕಬೇಕು. ಹಾಗೆಯೇ ವಿಶೇಷ ದಿನಗಳಂದು (ಸ್ವಾತಂತ್ರ್ಯ ದಿನ, ಗಣರಾಜ್ಯೋತ್ಸವ ದಿನ) ಪೇಪರ್‌ ಧ್ವಜಗಳನ್ನು ಬಳಸಬಹುದು. ಅವುಗಳನ್ನೂ ಕೂಡ ಅಷ್ಟೇ ಗೌರವಯುತವಾಗಿ ಖಾಸಗಿಯಾಗಿ ಸುಟ್ಟು ಹಾಕಬೇಕು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.