ಆ.15ರ ವರೆಗೆ ರಜೆ ಇಲ್ಲದೆ ಅಂಚೆ ಕಚೇರಿಗಳಿಗೆ ಕೆಲಸ: ತ್ರಿವರ್ಣ ಧ್ವಜ ಹಾರಿಸಲು ಸಾಥ್
Team Udayavani, Aug 8, 2022, 7:20 AM IST
ನವದೆಹಲಿ: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳು ಕಳೆದಿರುವ ಈ ಶುಭ ಸಂದರ್ಭದಲ್ಲಿ ಕೇಂದ್ರ ಸರ್ಕಾರವು “ಹರ್ ಘರ್ ತಿರಂಗಾ’ ಅಭಿಯಾನವನ್ನು ಹಮ್ಮಿಕೊಂಡಿದೆ. ದೇಶದ ಎಲ್ಲ ಮನೆ, ಕಟ್ಟಡಗಳ ಮೇಲೆ ತ್ರಿವರ್ಣ ಹಾರಿಸುವ ಉದ್ದೇಶ ಹೊಂದಿರುವ ಕೇಂದ್ರಕ್ಕೆ ಅಂಚೆ ಕಚೇರಿಗಳೂ ಸಾಥ್ ಕೊಟ್ಟಿದ್ದು, ತ್ರಿವರ್ಣ ಧ್ವಜಗಳನ್ನು ಮಾರಾಟ ಮಾಡಲಾರಂಭಿಸಿವೆ.
ಅದೇ ಹಿನ್ನೆಲೆ, ಆ.15ರವರೆಗೆ ಸರ್ಕಾರಿ ರಜೆ ಇದ್ದರೂ ಬಾಗಿಲು ಮುಚ್ಚದಿರಲು ಅಂಚೆ ಕಚೇರಿಗಳು ನಿರ್ಧರಿಸಿವೆ.
ಸರ್ಕಾರಿ ರಜಾ ದಿನಗಳಾಗಿರುವ ಆ.9 ಮತ್ತು ಆ.14ರಂದು ಅಂಚೆ ಕಚೇರಿಗಳ ಕನಿಷ್ಠ ಒಂದು ಕೌಂಟರ್ ಅಲ್ಲಾದರೂ ತ್ರಿವರ್ಣ ಧ್ವಜ ಮಾರಾಟ ಮಾಡಲಾಗುವುದು ಎಂದು ತಿಳಿಸಲಾಗಿದೆ.
ಮೂರು ಗಾತ್ರದ ಧ್ವಜಗಳನ್ನು 25 ರೂ., 18 ರೂ. ಮತ್ತು 9 ರೂ.ಗೆ ಮಾರಾಟ ಮಾಡಲಾಗುತ್ತಿದೆ.
ಕೈದಿಗಳ ಬಿಡುಗಡೆ:
ಬಿಹಾರ, ಮಹಾರಾಷ್ಟ್ರ ಸರ್ಕಾರಗಳು ಸನ್ನಡತೆಯಿಂದ ನಡೆದುಕೊಂಡ ಕೈದಿಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಿವೆ. ಕೇಂದ್ರ ಸರ್ಕಾರ ಇತ್ತೀಚೆಗೆ ಹೊರಡಿಸಿದ ಮಾರ್ಗಸೂಚಿಗೆ ಅನ್ವಯವಾಗಿ ಈ ಕ್ರಮ ನಡೆಯಲಿದೆ.
ಯೋಧರ ರ್ಯಾಲಿ:
ಹರ್ ಘರ್ ತಿರಂಗಾ ಬಗ್ಗೆ ಜಾಗೃತಿ ಮೂಡಿಸಲು ಅಸ್ಸಾಂನಲ್ಲಿ ಭಾನುವಾರ ಕೇಂದ್ರೀಯ ಮೀಸಲು ಪಡೆಯ ಯೋಧರು ಮೆರವಣಿಗೆ ನಡೆಸಿದರು. 150ಕ್ಕೂ ಅಧಿಕ ಯೋಧರು ತ್ರಿವರ್ಣ ಧ್ವಜವನ್ನು ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ