ಅಮೃತ ಮಹೋತ್ಸವ: ಜಮ್ಮು- ಕಾಶ್ಮೀರದಲ್ಲಿ ಹರ್ಘರ್ ತಿರಂಗಾ
Team Udayavani, Aug 6, 2022, 6:20 AM IST
ಹೊಸದಿಲ್ಲಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಎಲ್ಲ ರಾಜ್ಯಗಳು “ಹರ್ಘರ್ ತಿರಂಗಾ’ ಅಭಿಯಾನದ ತಯಾರಿಯಲ್ಲಿವೆ. ವಿಶೇಷ ವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಶುಕ್ರವಾರ ತಿರಂಗಾ ರ್ಯಾಲಿಗಳನ್ನು ನಡೆಸಲಾಗಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ತೆಗೆದುಹಾಕಿ 3 ವರ್ಷಗಳು ತುಂಬಿರುವ ಹಿನ್ನೆಲೆ ಅನಂತ್ನಾಗ್, ಪೂಂಚ್ ಜಿಲ್ಲೆ ಸೇರಿ ಅನೇಕ ಸ್ಥಳಗಳಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು ತ್ರಿವರ್ಣ ಧ್ವಜ ಹಿಡಿದು ಮೆರವಣಿಗೆ ನಡೆಸಿ ದ್ದಾರೆ. ರಾಷ್ಟ್ರಪ್ರೇಮಿ ಘೋಷಣೆಗಳು ಹಾಗೂ “ಹರ್ಘರ್ ತಿರಂಗಾ’ ಘೋಷಣೆ ಗಳನ್ನು ಕೂಗಿದ್ದಾರೆ.
ಯುಜಿಸಿ ಪ್ರಕಟನೆ: “ಹರ್ಘರ್ ತಿರಂಗಾ’ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗ ವಹಿಸುವಂತೆ ವಿವಿಗಳ ಅನುದಾನ ಆಯೋಗವು (ಯುಜಿಸಿ) ಎಲ್ಲ ವಿವಿ ಮತ್ತು ಕಾಲೇಜುಗಳಿಗೆ ಸೂಚನೆ ನೀಡಿದೆ.
“ತಿರಂಗಾ’ ಪ್ರಮಾಣಪತ್ರ!
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಭಾರತೀಯರೆಲ್ಲರಿಗೆ ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳ ಪ್ರೊಫೈಲ್ ಪಿಕ್ಚರ್ ಆಗಿ ಆ.2ರಿಂದ ಆ.15ರವರೆಗೆ ತ್ರಿವರ್ಣ ಧ್ವಜವನ್ನು ಬಳಸಲು ಪ್ರಧಾನಿ ಮೋದಿ ಅವರು ಕರೆ ನೀಡಿದ್ದಾರೆ. ಅದರ ಜತೆಗೆ, ಹರ್ಘರ್ ತಿರಂಗಾ “ಹರ್ಘರ್ ತಿರಂಗಾ’ ಪ್ರಮಾಣ ಪತ್ರ ಪಡೆಯಬಹುದಾಗಿದೆ. Har Ghar Tiranga ವೆಬ್ಸೈಟ್ನಲ್ಲಿ ನಿಮ್ಮ ಫೋಟೋ, ಹೆಸರು, ಮೊಬೈಲ್ ಸಂಖ್ಯೆ ಕೊಟ್ಟು ನೋಂದಾಯಿಸಿಕೊಳ್ಳಬೇಕು. “ಪಿನ್ ಎ ಫ್ಲ್ಯಾಗ್’ ಎಂಬ ಆಯ್ಕೆ ಆಯ್ದುಕೊಂಡ ಅನಂತರ, ನಿಮಗೆ “ಹರ್ಘರ್ ತಿರಂಗಾ’ ಪ್ರಮಾಣ ಪತ್ರ ಬರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
250 km per hour; ಶೀಘ್ರದಲ್ಲೇ ಬುಲೆಟ್ ರೈಲಿನಲ್ಲೂ ಆತ್ಮನಿರ್ಭರತೆ!
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?