ಪಾಕ್ ದುಸ್ಸಾಹಸಕ್ಕೆ ಕಠಿಣ ಪ್ರತ್ಯುತ್ತರ
ಭೂಸೇನಾ ಮುಖ್ಯಸ್ಥ ಜ.ಬಿಪಿನ್ ರಾವತ್ ಖಡಕ್ ಎಚ್ಚರಿಕೆ
Team Udayavani, Jul 14, 2019, 5:00 AM IST
ಹೊಸದಿಲ್ಲಿ: “ಪಾಕಿಸ್ಥಾನಿ ಸೇನೆ ನಡೆಸುವ ಯಾವುದೇ ದುಸ್ಸಾಹಸಕ್ಕೂ ನಾವು ಪ್ರತ್ಯುತ್ತರ ನೀಡುತ್ತೇವೆ. ಉಗ್ರವಾದಕ್ಕೆ ಸಂಬಂಧಿಸಿದ ಯಾವುದೇ ಕೃತ್ಯವನ್ನೂ ಸುಮ್ಮನೆ ಬಿಡಲ್ಲ.’ ಹೀಗೆಂದು ಪಾಕಿಸ್ಥಾನ ಮತ್ತು ಪಾಕ್ ಪ್ರೇರಿತ ಉಗ್ರಗಾಮಿಗಳಿಗೆ ಖಡಕ್ ಎಚ್ಚರಿಕೆ ನೀಡಿರುವುದು ಭೂಸೇನಾ ಮುಖ್ಯಸ್ಥ ಜ| ಬಿಪಿನ್ ರಾವತ್.
ಕಾರ್ಗಿಲ್ ಯುದ್ಧಕ್ಕೆ 20 ವರ್ಷಗಳು ಸಂದ ಹಿನ್ನೆಲೆಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಜ| ರಾವತ್ ಈ ಮಾತುಗಳನ್ನಾಡಿದ್ದಾರೆ. “ಭಾರತೀಯ ಸಶಸ್ತ್ರ ಪಡೆಗಳು ನಮ್ಮ ಗಡಿ ಪ್ರದೇಶದ ಸಮಗ್ರತೆ ಕಾಪಾಡಿಕೊಳ್ಳಲು ಬದ್ಧತೆಯಿಂದ ನಿಂತಿವೆ. ಆಗಾಗ ದುಸ್ಸಾಹಸಕ್ಕೆ ಕೈಹಾಕುವ ಪಾಕಿಸ್ಥಾನಕ್ಕೆ ಸೂಕ್ತ ಪ್ರತಿಕ್ರಿಯೆ ನೀಡಲಾಗುತ್ತದೆ. ಉರಿ ದಾಳಿ ಬಳಿಕ ನಡೆದ ಸರ್ಜಿಕಲ್ ಸ್ಟ್ರೈಕ್ ಹಾಗೂ ಬಾಲಕೋಟ್ನಲ್ಲಿ ನಡೆಸಲಾದ ದಾಳಿಯು ಭಯೋತ್ಪಾದನೆ ವಿರುದ್ಧದ ನಮ್ಮ ರಾಜಕೀಯ ಹಾಗೂ ಸೇನಾ ಬದ್ಧತೆಯನ್ನು ಪ್ರದರ್ಶಿಸಿದೆ’ ಎಂದು ರಾವತ್ ಹೇಳಿದ್ದಾರೆ.
ಅತಿಕ್ರಮಣ ಆಗಿಲ್ಲ: ಇದೇ ವೇಳೆ ಲಡಾಖ್ನ ಡೆಮ್ಚೋಕ್ ವಲಯದಲ್ಲಿ ಚೀನ ಸೇನೆ ಅತಿಕ್ರಮಣ ಮಾಡಿಲ್ಲ ಎಂದೂ ರಾವತ್ ಸ್ಪಷ್ಟಪಡಿಸಿದ್ದಾರೆ. ಜು. 6ರಂದು ದಲೈ ಲಾಮಾ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಕೆಲವು ಟಿಬೆಟಿಯನ್ನರು ಟಿಬೆಟಿಯನ್ ಧ್ವಜ ಹಾರಿಸಿದ ಬೆನ್ನಲ್ಲೇ, ಕಳೆದ ವಾರ ಚೀನ ಯೋಧರು ವಾಸ್ತವಿಕ ಗಡಿ ನಿಯಂತ್ರಣ ರೇಖೆ ದಾಟಿ ಬಂದಿದ್ದಾರೆ ಎಂದು ಸುದ್ದಿಯಾಗಿತ್ತು. ಈ ಹಿನ್ನೆಲೆಯಲ್ಲಿ ರಾವತ್ ಸ್ಪಷ್ಟನೆ ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ