14 ದಿನ ಉಪವಾಸದ ಬಳಿಕ ಹಾರ್ದಿಕ್ ಪಟೇಲ್ ಆಸ್ಪತ್ರೆಗೆ ದಾಖಲು
Team Udayavani, Sep 7, 2018, 4:10 PM IST
ಅಹ್ಮದಾಬಾದ್ : ಪಾಟಿದಾರ್ ಸಮುದಾಯಕ್ಕೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಕಳೆದ 14 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಅವರಿಂದು ಆಸ್ಪತ್ರೆಗೆ ದಾಖಲಾಗುವುದಕ್ಕೆ ಒಪ್ಪಿಗೆ ನೀಡಿದರೆಂದು ಅವರ ನಿಕಟವರ್ತಿ ತಿಳಿಸಿದ್ದಾರೆ.
ಕಳೆದ 14 ದಿನಗಳ ನಿರಶನದಿಂದ ತೀರ ಕೃಶರಾಗಿರುವ ಹಾರ್ದಿಕ್ ಪಟೇಲ್ ಅವರ ಪ್ರಧಾನ ಅಂಗಾಂಗಳ ಕಾರ್ಯ ಕ್ಷಮತೆಯಲ್ಲಿ ಕಳವಳಕಾರಿ ವ್ಯತ್ಯಯ ತೋರಿಬಂದ ಕಾರಣ ಅವರನ್ನು ಆಸ್ಪತ್ರೆಗೆ ಸೇರಿಸುವುದಕ್ಕೆ ಮನವೊಲಿಸಲಾಯಿತು. ಅದಕ್ಕೆ ಅವರು ಒಪ್ಪಿದ ಕಾರಣ ಅಂತೆಯೇ ಮಾಡಲಾಯಿತು ಎಂದು ನಿಕಟವರ್ತಿ ತಿಳಿಸಿದ್ದಾರೆ.
ನಿನ್ನೆ ಗುರುವಾರವಷ್ಟೇ ಹಾರ್ದಿಕ್ ತಾನಿನ್ನು ನೀರು ಸೇವಿಸುವುದನ್ನು ಕೂಡ ನಿಲ್ಲಿಸುವೆ ಎಂದು ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದರು. ಅವರ ತುರ್ತು ಚಿಕಿತ್ಸೆಗಾಗಿ ಸಕಲ ಸೌಕರ್ಯಗಳ ಅಂಬುಲೆನ್ಸ್ ಅನ್ನು ಸರಕಾರದ ಆದೇಶದ ಪ್ರಕಾರ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ