ಮಾರ್ಚ್ 12 ರಂದು ಹಾರ್ದಿಕ್ ಪಟೇಲ್ ಕೈ ಸೇರ್ಪಡೆ;ಲೋಕಸಭೆಗೆ ಸ್ಪರ್ಧೆ
Team Udayavani, Mar 7, 2019, 1:53 PM IST
ಹೊಸದಿಲ್ಲಿ: ಪಾಟೀದಾರ್ ಅನಾಮತ್ ಆಂದೋಲನ ಸಮಿತಿಯ ಹೋರಾಟಗಳ ಮೂಲಕ ರಾಷ್ಟ್ರದ ಗಮನ ಸೆಳೆದಿದ್ದ ಹಾರ್ದಿಕ್ ಪಟೇಲ್ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ.
ಕಾಂಗ್ರೆಸ್ನ ಉನ್ನತ ನಾಯಕರು ಪಿಟಿಐಗೆ ನೀಡಿರುವ ಮಾಹಿತಿಯಂತೆ, ಮಾರ್ಚ್ 12 ರಂದು ಹಾರ್ದಿಕ್ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ. ಜಾಮ್ನಗರ್ ಲೋಕಸಭಾ ಕ್ಷೇತ್ರದಿಂದ ಅವರು ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ.
ಪಾಟೀದಾರ್ ಸಮುದಾಯಕ್ಕೆ ಮೀಸಲಾತಿಕ್ಕೆ ಆಗ್ರಹಿಸಿ ಭಾರೀ ಹೋರಾಟ ಸಂಘಟಿಸಿದ್ದ ಹಾರ್ದಿಕ್ ಅವರನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಪೂನಮ್ ಬೆನ್ ಅವರು ಜಾಮ್ನಗರ ಕ್ಷೇತ್ರದ ಹಾಲಿ ಸಂಸದೆ,ಹಾರ್ದಿಕ್ ಸ್ಪರ್ಧೆಯಿಂದ ಕ್ಷೇತ್ರದಲ್ಲಿ ಜಿದ್ದಾಜಿದ್ದಿನ ಕದನ ಏರ್ಪಡುವ ಎಲ್ಲಾ ಸಾಧ್ಯತೆಗಳಿವೆ.
ಕಾಂಗ್ರೆಸ್ ಪ್ರಧಾನಿ ಮೋದಿ ಅವರ ತವರು ಗುಜರಾತ್ನಲ್ಲಿ ಪ್ರಬಲ ಸ್ಪರ್ಧೆ ನೀಡಲು ಸಿದ್ದತೆ ನಡೆಸಿದೆ. ಹಾರ್ಧಿಕ್ ಅವರೊಂದಿಗೆ ಇನ್ನೂ ಕೆಲ ಪಾಟೀದಾರ್ ಹೋರಾಟ ಸಮಿತಿಯ ಮುಖಂಡರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ